<p>ಶಿವಮೊಗ್ಗ: ‘ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಪ್ರಾಧ್ಯಾಪಕ ವೃತ್ತಿಗೆ ಘನತೆ ತಂದುಕೊಟ್ಟ ಮಹನೀಯರು’ ಎಂದು ಸಾಹಿತಿ ಪ್ರೊ. ಕುಮಾರಚಲ್ಯ ಬಣ್ಣಿಸಿದರು.</p>.<p>ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಕನ್ನಡ ಭಾರತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನದ ಸಹಯೋಗದಲ್ಲಿ ಏರ್ಪಡಿಸಿದ್ದ ‘ಜಿ.ಎಸ್.ಶಿವರುದ್ರಪ್ಪ: ಮರು ಓದಿನ ನೆಲೆಗಳು’ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಸಮಾರೋಪ ಭಾಷಣ ಮಾಡಿದರು.</p>.<p>‘ಜಿಎಸ್ಎಸ್ ಅವರು ಸಜ್ಜನಿಕೆ, ಶಿಸ್ತು, ಸರಳತೆ, ಪ್ರಾಮಾಣಿಕತೆ, ಆತ್ಮವಿಶ್ವಾಸ, ಆತ್ಮಾಭಿಮಾನದ ಸಂಗಮ ಆಗಿದ್ದರು. ಪ್ರಾಧ್ಯಾಪಕ ವೃತ್ತಿಗೆ ಘನತೆ ತಂದುಕೊಟ್ಟರು. ಸಂಶೋಧನೆ, ಅಧ್ಯಯನ, ಅಧ್ಯಾಪನ ಮತ್ತು ಸೃಜನಶೀಲತೆಗೆ ಅನನ್ಯ ಕಾಣಿಕೆ ನೀಡಿದರು’ ಎಂದರು.</p>.<p>‘ಜಿಎಸ್ಎಸ್ ಕನ್ನಡ ಸಂಸ್ಕೃತಿಗೆ ಹೊಸ ಚಿಂತನೆಗಳನ್ನು ನೀಡಿದ್ದರು’ ಎಂದು ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್. ಎನ್. ಮುಕುಂದರಾಜ್ ಅವರು ಅಭಿಪ್ರಾಯಪಟ್ಟರು.</p>.<p>ಸಾಹಿತಿ ಬಸವರಾಜ ಕಲ್ಗುಡಿ, ಕೇಶವ ಶರ್ಮಾ, ಹೊಸಳ್ಳಿ ದಾಳೇಗೌಡ, ಉಮಾಪತಿ, ಕನ್ನಡ ಭಾರತಿ ನಿರ್ದೇಶಕ ಪ್ರೊ. ನೆಲ್ಲಿಕಟ್ಟೆ ಸಿದ್ದೇಶ್, ಪ್ರೊ.ಚಂದ್ರಿಕಾ, ಪ್ರೊ.ನಾಗೇಂದ್ರ ಆಚಾರ್ಯ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-42-744488998</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ‘ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಪ್ರಾಧ್ಯಾಪಕ ವೃತ್ತಿಗೆ ಘನತೆ ತಂದುಕೊಟ್ಟ ಮಹನೀಯರು’ ಎಂದು ಸಾಹಿತಿ ಪ್ರೊ. ಕುಮಾರಚಲ್ಯ ಬಣ್ಣಿಸಿದರು.</p>.<p>ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಕನ್ನಡ ಭಾರತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನದ ಸಹಯೋಗದಲ್ಲಿ ಏರ್ಪಡಿಸಿದ್ದ ‘ಜಿ.ಎಸ್.ಶಿವರುದ್ರಪ್ಪ: ಮರು ಓದಿನ ನೆಲೆಗಳು’ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಸಮಾರೋಪ ಭಾಷಣ ಮಾಡಿದರು.</p>.<p>‘ಜಿಎಸ್ಎಸ್ ಅವರು ಸಜ್ಜನಿಕೆ, ಶಿಸ್ತು, ಸರಳತೆ, ಪ್ರಾಮಾಣಿಕತೆ, ಆತ್ಮವಿಶ್ವಾಸ, ಆತ್ಮಾಭಿಮಾನದ ಸಂಗಮ ಆಗಿದ್ದರು. ಪ್ರಾಧ್ಯಾಪಕ ವೃತ್ತಿಗೆ ಘನತೆ ತಂದುಕೊಟ್ಟರು. ಸಂಶೋಧನೆ, ಅಧ್ಯಯನ, ಅಧ್ಯಾಪನ ಮತ್ತು ಸೃಜನಶೀಲತೆಗೆ ಅನನ್ಯ ಕಾಣಿಕೆ ನೀಡಿದರು’ ಎಂದರು.</p>.<p>‘ಜಿಎಸ್ಎಸ್ ಕನ್ನಡ ಸಂಸ್ಕೃತಿಗೆ ಹೊಸ ಚಿಂತನೆಗಳನ್ನು ನೀಡಿದ್ದರು’ ಎಂದು ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್. ಎನ್. ಮುಕುಂದರಾಜ್ ಅವರು ಅಭಿಪ್ರಾಯಪಟ್ಟರು.</p>.<p>ಸಾಹಿತಿ ಬಸವರಾಜ ಕಲ್ಗುಡಿ, ಕೇಶವ ಶರ್ಮಾ, ಹೊಸಳ್ಳಿ ದಾಳೇಗೌಡ, ಉಮಾಪತಿ, ಕನ್ನಡ ಭಾರತಿ ನಿರ್ದೇಶಕ ಪ್ರೊ. ನೆಲ್ಲಿಕಟ್ಟೆ ಸಿದ್ದೇಶ್, ಪ್ರೊ.ಚಂದ್ರಿಕಾ, ಪ್ರೊ.ನಾಗೇಂದ್ರ ಆಚಾರ್ಯ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-42-744488998</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>