<p>ಶನಿವಾರಸಂತೆ: ‘ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ ಸಮಾಜದ ಆಸ್ತಿಯನ್ನಾಗಿ ಮಾಡಬೇಕು. ಶಿಕ್ಷಣದಿಂದ ಮಾತ್ರ ಸಮಾಜ ಬದಲಾಯಿಸಬಹುದು’ ಶಾಸಕ ಡಾ.ಮಂತರ್ಗೌಡ ಹೇಳಿದರು.</p>.<p>ಇಲ್ಲಿಗೆ ಸಮೀಪದ ಮಾದ್ರೆ ಗ್ರಾಮದ ಡಾ.ಭೀಮ್ರಾವ್ ಯುವಕ ಸಂಘ ಹಾಗೂ ಗ್ರಾಮಾಭಿವೃದ್ದಿ ಸಮಿತಿ ವತಿಯಿಂದ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ‘ಸಮ ಸಮಾಜದ ನಿರ್ಮಾಣಕ್ಕಾಗಿ ಜನಜಾಗೃತಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಇಂದು ಸಮಾಜದಲ್ಲಿ ಸ್ಥಾನಮಾನದಲ್ಲಿರುವವರಿಗೆ, ಜನಪ್ರತಿನಿಧಿಗಳಿಗೆ ಗೌರವ ಕೊಡುವುದು ಕೇವಲ ಅವರ ಹುದ್ದೆಗೆ ಅಲ್ಲ ಬದಲಿಗೆ ಅವರು ಪಡೆದುಕೊಂಡಿರುವ ಶಿಕ್ಷಣಕ್ಕೆ ಎಂಬುವುದನ್ನು ಅರಿಯಬೇಕು’ ಎಂದು ಹೇಳಿದರು.</p>.<p>‘ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಸಂವಿಧಾನದಲ್ಲಿ ಸ್ಥಾನಮಾನ, ಅಧಿಕಾರ ಒಂದು ಭಾಗವಾದರೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯುವುದು ಮತ್ತೊಂದು ಭಾಗವಾಗಿದೆ ಎಂಬುವುದನ್ನು ತಿಳಿಸಿಕೊಟ್ಟಿದ್ದಾರೆ’ ಎಂದರು.</p>.<p>‘ಪ್ರತಿಯೊಬ್ಬರೂ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಮೂಲಕ ಸಮಾಜದ ಅಭಿವೃದ್ದಿ ಕಾರ್ಯದಲ್ಲಿ ಕೈಜೋಡಿಸಬೇಕು. ಈ ಭಾಗದಲ್ಲಿ ಮತ್ತಷ್ಟು ಗ್ರಾಮೀಣ ರಸ್ತೆ ಅಭಿವೃದ್ದಿ ಕಾರ್ಯ ಆಗಬೇಕಾಗಿದ್ದು ಈ ಬಗ್ಗೆ ಚಿಂತನೆ ಹರಿಸಲಾಗುವುದು’ ಎಂದು ಹೇಳಿದರು.</p>.<p>ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಜೆ.ಆರ್.ಪಾಲಾಕ್ಷ, ತಾಲ್ಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಜನಾರ್ದನ್ ಮಾತನಾಡಿದರು.</p>.<p>ವೇದಿಕೆಯಲ್ಲಿ ದುಂಡಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಬ್ಬಾಸ್, ಮಾದ್ರೆ ಜಯ್ ಭೀಮ್ ರಾವ್ ಯುವಕ ಸಂಘದ ಅಧ್ಯಕ್ಷ ಎಂ.ಕೆ.ಮಂಜುನಾಥ್, ಜಯಪ್ಪ ಹಾನಗಲ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಂ.ಎಸ್.ವೀರೇಂದ್ರ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-51-1334403414</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶನಿವಾರಸಂತೆ: ‘ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ ಸಮಾಜದ ಆಸ್ತಿಯನ್ನಾಗಿ ಮಾಡಬೇಕು. ಶಿಕ್ಷಣದಿಂದ ಮಾತ್ರ ಸಮಾಜ ಬದಲಾಯಿಸಬಹುದು’ ಶಾಸಕ ಡಾ.ಮಂತರ್ಗೌಡ ಹೇಳಿದರು.</p>.<p>ಇಲ್ಲಿಗೆ ಸಮೀಪದ ಮಾದ್ರೆ ಗ್ರಾಮದ ಡಾ.ಭೀಮ್ರಾವ್ ಯುವಕ ಸಂಘ ಹಾಗೂ ಗ್ರಾಮಾಭಿವೃದ್ದಿ ಸಮಿತಿ ವತಿಯಿಂದ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ‘ಸಮ ಸಮಾಜದ ನಿರ್ಮಾಣಕ್ಕಾಗಿ ಜನಜಾಗೃತಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಇಂದು ಸಮಾಜದಲ್ಲಿ ಸ್ಥಾನಮಾನದಲ್ಲಿರುವವರಿಗೆ, ಜನಪ್ರತಿನಿಧಿಗಳಿಗೆ ಗೌರವ ಕೊಡುವುದು ಕೇವಲ ಅವರ ಹುದ್ದೆಗೆ ಅಲ್ಲ ಬದಲಿಗೆ ಅವರು ಪಡೆದುಕೊಂಡಿರುವ ಶಿಕ್ಷಣಕ್ಕೆ ಎಂಬುವುದನ್ನು ಅರಿಯಬೇಕು’ ಎಂದು ಹೇಳಿದರು.</p>.<p>‘ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಸಂವಿಧಾನದಲ್ಲಿ ಸ್ಥಾನಮಾನ, ಅಧಿಕಾರ ಒಂದು ಭಾಗವಾದರೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯುವುದು ಮತ್ತೊಂದು ಭಾಗವಾಗಿದೆ ಎಂಬುವುದನ್ನು ತಿಳಿಸಿಕೊಟ್ಟಿದ್ದಾರೆ’ ಎಂದರು.</p>.<p>‘ಪ್ರತಿಯೊಬ್ಬರೂ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಮೂಲಕ ಸಮಾಜದ ಅಭಿವೃದ್ದಿ ಕಾರ್ಯದಲ್ಲಿ ಕೈಜೋಡಿಸಬೇಕು. ಈ ಭಾಗದಲ್ಲಿ ಮತ್ತಷ್ಟು ಗ್ರಾಮೀಣ ರಸ್ತೆ ಅಭಿವೃದ್ದಿ ಕಾರ್ಯ ಆಗಬೇಕಾಗಿದ್ದು ಈ ಬಗ್ಗೆ ಚಿಂತನೆ ಹರಿಸಲಾಗುವುದು’ ಎಂದು ಹೇಳಿದರು.</p>.<p>ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಜೆ.ಆರ್.ಪಾಲಾಕ್ಷ, ತಾಲ್ಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಜನಾರ್ದನ್ ಮಾತನಾಡಿದರು.</p>.<p>ವೇದಿಕೆಯಲ್ಲಿ ದುಂಡಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಬ್ಬಾಸ್, ಮಾದ್ರೆ ಜಯ್ ಭೀಮ್ ರಾವ್ ಯುವಕ ಸಂಘದ ಅಧ್ಯಕ್ಷ ಎಂ.ಕೆ.ಮಂಜುನಾಥ್, ಜಯಪ್ಪ ಹಾನಗಲ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಂ.ಎಸ್.ವೀರೇಂದ್ರ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-51-1334403414</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>