<p>ಸಿಂದಗಿ: ಪ್ರಸ್ತುತ ಸಂದರ್ಭದಲ್ಲಿ ಶಾಲಾ- ಕಾಲೇಜುಗಳ ಅಂಕಪಟ್ಟಿಗೆ ಮಹತ್ವವಿಲ್ಲ. ಅದರ ಜೊತೆಗೆ ಕೌಶಲ ಅಗತ್ಯವಾಗಿದೆ. ಸಂವಹನ ಕೌಶಲದ ಬೇಡಿಕೆ ಇದೆ ಎಂದು ವಿಜಯಪುರ ಬಿ.ಎಲ್.ಡಿ.ಇ ಸ್ವಾಯತ್ತ ವಿಶ್ವವಿದ್ಯಾಲಯದ ಉಪಕುಲಪತಿ ವೈ.ಎಂ.ಜಯರಾಜ ಸಲಹೆ ನೀಡಿದರು.</p>.<p>ನಗರದ ಸಾರಂಗಮಠದ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಹಾಗೂ ವಿ.ವಿ.ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದ ಸ್ನೇಹ ಸಮ್ಮೇಳನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.</p>.<p>ಇಂದಿನ ವಿದ್ಯಾರ್ಥಿಗಳಿಗೆ ಶಿಕ್ಷಕರ ಬಗ್ಗೆ ಗೌರವವಿಲ್ಲ. ಮೊಬೈಲ್ ಗೀಳಿಗೆ ಅಂಟಿಕೊಂಡಿದ್ದಾರೆ. ಮೊಬೈಲ್ ದುರ್ಬಳಕೆ ಹೆಚ್ಚಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಸಂಸ್ಥೆಯ ಚೇರ್ಮನ್ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪ್ರತಿಭೆ, ಕ್ರಿಯಾಶೀಲತೆ ಇದ್ದಲ್ಲಿ ಅವಕಾಶಗಳು ಹುಡುಕಿಕೊಂಡು ಬರುತ್ತವೆ ಎಂದು ತಿಳಿಸಿದರು.</p>.<p>ಸಮಾರಂಭದ ಸಮ್ಮುಖ ವಹಿಸಿದ್ದ ಸಾರಂಗಮಠದ ಉತ್ತರಾಧಿಕಾರಿ ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ಉದ್ಯೋಗದ ಬೆನ್ನು ಹತ್ತದೆ ಕೃಷಿ ಕಡೆಗೂ ಗಮನ ಹರಿಸಬೇಕು ಎಂ ದರು.</p>.<p>ಪ್ರಾಚಾರ್ಯ ಡಿ.ಎಂ.ಸರಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಜೆಮ್ಖಾನ್ ಚೇರ್ಮನ್ ಪ್ರೊ.ಪ್ರತಿಕಾ ತಳವಾರ ಕಾಲೇಜಿನ ಚಟುವಟಿಕೆಗಳ ವರದಿ ವಾಚಿಸಿದರು. ಪ್ರಾಧ್ಯಾಪಕ ನಾಗರಾಜ ಮುರಗೋಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ರವಿ ಗೋಲಾ ನಿರೂಪಿಸಿದರು.</p>.<p>ಐಕ್ಯೂಎಸಿ ಸಂಯೋಜಕ ಬಿ.ಆರ್.ಮಹಾಜನಶೆಟ್ಟಿ, ವಿದ್ಯಾರ್ಥಿ ಪ್ರತಿನಿಧಿ ಬೀರಲಿಂಗ ಗುಂಡಮನಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-26-1587535384</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂದಗಿ: ಪ್ರಸ್ತುತ ಸಂದರ್ಭದಲ್ಲಿ ಶಾಲಾ- ಕಾಲೇಜುಗಳ ಅಂಕಪಟ್ಟಿಗೆ ಮಹತ್ವವಿಲ್ಲ. ಅದರ ಜೊತೆಗೆ ಕೌಶಲ ಅಗತ್ಯವಾಗಿದೆ. ಸಂವಹನ ಕೌಶಲದ ಬೇಡಿಕೆ ಇದೆ ಎಂದು ವಿಜಯಪುರ ಬಿ.ಎಲ್.ಡಿ.ಇ ಸ್ವಾಯತ್ತ ವಿಶ್ವವಿದ್ಯಾಲಯದ ಉಪಕುಲಪತಿ ವೈ.ಎಂ.ಜಯರಾಜ ಸಲಹೆ ನೀಡಿದರು.</p>.<p>ನಗರದ ಸಾರಂಗಮಠದ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಹಾಗೂ ವಿ.ವಿ.ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದ ಸ್ನೇಹ ಸಮ್ಮೇಳನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.</p>.<p>ಇಂದಿನ ವಿದ್ಯಾರ್ಥಿಗಳಿಗೆ ಶಿಕ್ಷಕರ ಬಗ್ಗೆ ಗೌರವವಿಲ್ಲ. ಮೊಬೈಲ್ ಗೀಳಿಗೆ ಅಂಟಿಕೊಂಡಿದ್ದಾರೆ. ಮೊಬೈಲ್ ದುರ್ಬಳಕೆ ಹೆಚ್ಚಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಸಂಸ್ಥೆಯ ಚೇರ್ಮನ್ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪ್ರತಿಭೆ, ಕ್ರಿಯಾಶೀಲತೆ ಇದ್ದಲ್ಲಿ ಅವಕಾಶಗಳು ಹುಡುಕಿಕೊಂಡು ಬರುತ್ತವೆ ಎಂದು ತಿಳಿಸಿದರು.</p>.<p>ಸಮಾರಂಭದ ಸಮ್ಮುಖ ವಹಿಸಿದ್ದ ಸಾರಂಗಮಠದ ಉತ್ತರಾಧಿಕಾರಿ ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ಉದ್ಯೋಗದ ಬೆನ್ನು ಹತ್ತದೆ ಕೃಷಿ ಕಡೆಗೂ ಗಮನ ಹರಿಸಬೇಕು ಎಂ ದರು.</p>.<p>ಪ್ರಾಚಾರ್ಯ ಡಿ.ಎಂ.ಸರಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಜೆಮ್ಖಾನ್ ಚೇರ್ಮನ್ ಪ್ರೊ.ಪ್ರತಿಕಾ ತಳವಾರ ಕಾಲೇಜಿನ ಚಟುವಟಿಕೆಗಳ ವರದಿ ವಾಚಿಸಿದರು. ಪ್ರಾಧ್ಯಾಪಕ ನಾಗರಾಜ ಮುರಗೋಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ರವಿ ಗೋಲಾ ನಿರೂಪಿಸಿದರು.</p>.<p>ಐಕ್ಯೂಎಸಿ ಸಂಯೋಜಕ ಬಿ.ಆರ್.ಮಹಾಜನಶೆಟ್ಟಿ, ವಿದ್ಯಾರ್ಥಿ ಪ್ರತಿನಿಧಿ ಬೀರಲಿಂಗ ಗುಂಡಮನಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-26-1587535384</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>