<p>ಸಿರವಾರ: ‘ಕಡಲಾಳದಿಂದ ಮುತ್ತುಗಳನ್ನು ಹೆಕ್ಕಿ ತೆಗೆದು ಪೋಣಿಸಿದ ಮುತ್ತಿನಹಾರದಂತೆ ಕನ್ನಡ ಸುಂದರ ಮತ್ತು ಎಲ್ಲಾ ಭಾಷೆಗಳ ಲಿಪಿಗಿಂತ ಶ್ರೇಷ್ಟ ಲಿಪಿಯಾಗಿದೆ’ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದೇವದುರ್ಗಾ ತಾಲ್ಲೂಕು ಘಟಕದ ಉಪಾಧ್ಯಕ್ಷ ಶಿಕ್ಷಕ ಚನ್ನಬಸವ ಹೆಗ್ಗಡದಿನ್ನಿ ಹೇಳಿದರು.</p>.<p>ಪಟ್ಟಣದ ವಿನಾಯಕ ಪಿಯು ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದಿಂದ ಮಂಗಳವಾರ ನಡೆದ ಕಸಾಪದ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ 2025-26ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ 125ಕ್ಕೆ 125 ಅಂಕ ಪಡೆದ 17 ವಿದ್ಯಾರ್ಥಿಗಳು, ದ್ವಿತೀಯ ಕನ್ನಡ ಭಾಷೆಯಲ್ಲಿ 100ಕ್ಕೆ 100 ಅಂಕ ಪಡೆದ 4 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.</p>.<p>ಕಸಾಪ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಚುಕ್ಕಿ ಸೂಗಪ್ಪ ಸಾಹುಕಾರ ಮತ್ತು ಮುಖಂಡ ಜೆ.ಶರಣಪ್ಪಗೌಡ ಮಾತನಾಡಿದರು.</p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಮೌನೇಶ ಹಿರೇಹಣಗಿ, ಉಪನ್ಯಾಸಕ ಅರಳಪ್ಪ ಸೈದಾಪೂರು, ವಿನಾಯಕ ಪಿಯು ಕಾಲೇಜಿನ ಪ್ರಾಚಾರ್ಯ ಸತೀಶ ಕುಮಾರ, ವೆಂಕಟರೆಡ್ಡಿ ಬಲ್ಕಲ್, ಪತ್ತಾರ್ ನಾಗಪ್ಪ, ವೆಂಕಟೇಶ ದೊರೆ, ಅಮರೇಶ ದಿನ್ನಿ ಕವಿತಾಳ ಸೇರಿದಂತೆ ಕಸಾಪ ಸದಸ್ಯರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-32-649930272</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿರವಾರ: ‘ಕಡಲಾಳದಿಂದ ಮುತ್ತುಗಳನ್ನು ಹೆಕ್ಕಿ ತೆಗೆದು ಪೋಣಿಸಿದ ಮುತ್ತಿನಹಾರದಂತೆ ಕನ್ನಡ ಸುಂದರ ಮತ್ತು ಎಲ್ಲಾ ಭಾಷೆಗಳ ಲಿಪಿಗಿಂತ ಶ್ರೇಷ್ಟ ಲಿಪಿಯಾಗಿದೆ’ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದೇವದುರ್ಗಾ ತಾಲ್ಲೂಕು ಘಟಕದ ಉಪಾಧ್ಯಕ್ಷ ಶಿಕ್ಷಕ ಚನ್ನಬಸವ ಹೆಗ್ಗಡದಿನ್ನಿ ಹೇಳಿದರು.</p>.<p>ಪಟ್ಟಣದ ವಿನಾಯಕ ಪಿಯು ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದಿಂದ ಮಂಗಳವಾರ ನಡೆದ ಕಸಾಪದ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ 2025-26ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ 125ಕ್ಕೆ 125 ಅಂಕ ಪಡೆದ 17 ವಿದ್ಯಾರ್ಥಿಗಳು, ದ್ವಿತೀಯ ಕನ್ನಡ ಭಾಷೆಯಲ್ಲಿ 100ಕ್ಕೆ 100 ಅಂಕ ಪಡೆದ 4 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.</p>.<p>ಕಸಾಪ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಚುಕ್ಕಿ ಸೂಗಪ್ಪ ಸಾಹುಕಾರ ಮತ್ತು ಮುಖಂಡ ಜೆ.ಶರಣಪ್ಪಗೌಡ ಮಾತನಾಡಿದರು.</p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಮೌನೇಶ ಹಿರೇಹಣಗಿ, ಉಪನ್ಯಾಸಕ ಅರಳಪ್ಪ ಸೈದಾಪೂರು, ವಿನಾಯಕ ಪಿಯು ಕಾಲೇಜಿನ ಪ್ರಾಚಾರ್ಯ ಸತೀಶ ಕುಮಾರ, ವೆಂಕಟರೆಡ್ಡಿ ಬಲ್ಕಲ್, ಪತ್ತಾರ್ ನಾಗಪ್ಪ, ವೆಂಕಟೇಶ ದೊರೆ, ಅಮರೇಶ ದಿನ್ನಿ ಕವಿತಾಳ ಸೇರಿದಂತೆ ಕಸಾಪ ಸದಸ್ಯರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-32-649930272</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>