<p>ಸೊರಬ: ‘ಶುಶ್ರೂಷಕಿಯರ ಕಾಯಕವು ತಾಯಿಯ ಕೆಲಸ ಇದ್ದಂತೆ. ಹೀಗಾಗಿ ಈ ಕೆಲಸವನ್ನು ಬರೀ ದುಡಿಮೆಯ ದೃಷ್ಟಿಯಲ್ಲಿ ನೋಡಬಾರದು’ ಎಂದು ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಪ್ರಸೂತಿ ತಜ್ಞ ನಾಗೇಂದ್ರಪ್ಪ ಹೇಳಿದರು.</p>.<p>ಪಟ್ಟಣದ ರಂಗಮಂದಿರದಲ್ಲಿ ಎಚ್ಪಿಆರ್ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಆ್ಯಂಡ್ ಪ್ಯಾರಾ ಮೆಡಿಕಲ್ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಶುಶ್ರೂಷಕಿಯರ ದಿನ, ಲ್ಯಾಪ್ ಲೈಟಿಂಗ್ ಮತ್ತು ಜಿಎನ್ಎಂ ಹಾಗೂ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಫ್ಲಾರೆನ್ಸ್ ನೈಟಿಂಗೇಲ್ ಅವರ ಸೇವೆ ಪರಿಗಣಿಸಿ ಅವರ ಜನ್ಮ ದಿನದ ವಾರ್ಷಿಕೋತ್ಸವದ ನಿಮಿತ್ತ ಶುಶ್ರೂಷಕಿಯರ ದಿನವನ್ನು ಆಚರಿಸಲಾಗುತ್ತಿದೆ. ಅವರು ಪ್ರತಿಯೊಬ್ಬ ಶುಶ್ರೂಷಕಿಯರಿಗೆ ಮಾದರಿಯಾಗಿದ್ದು, ಅವರ ಮಾರ್ಗದಲ್ಲಿ ಮುನ್ನಡೆಯಬೇಕು’ ಎಂದರು.</p>.<p>ಶುಶ್ರೂಷಕಿಯರಾದ ಅರುಂಧತಿ, ಜಯಲಕ್ಷ್ಮಿ, ಎಲಿಸಮ್ಮ ಸೀಮಾನಾಯಕ್, ರಶ್ಮಿ, ಶ್ವೇತಾ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಹರಿಪ್ರಸಾದ್ ರೈ ಕಾರ್ಯಕ್ರಮ ಉದ್ಘಾಟಿಸಿದರು.</p>.<p>ಪ್ರಾಂಶುಪಾಲರಾದ ಜಿ.ಭಾಗ್ಯಾ, ಡಾ. ಪ್ರಭು ಸಾಹುಕಾರ್, ಡಾ. ನಾಗರಾಜ್ ನಾಯಕ್, ಡಾ.ಗುಡ್ಡಪ್ಪ, ಡಾ.ಶ್ರೀಕೃಷ್ಣ, ಡಾ.ಹರ್ಷವರ್ಧನ್, ಸಿ.ಕೆ ಬಲೀಂದ್ರಪ್ಪ, ಎಚ್.ಕೆ ಶಿಲ್ಪಾ, ಜ್ಯೋತಿ ಸೇರಿ ಇತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-42-1550983747</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೊರಬ: ‘ಶುಶ್ರೂಷಕಿಯರ ಕಾಯಕವು ತಾಯಿಯ ಕೆಲಸ ಇದ್ದಂತೆ. ಹೀಗಾಗಿ ಈ ಕೆಲಸವನ್ನು ಬರೀ ದುಡಿಮೆಯ ದೃಷ್ಟಿಯಲ್ಲಿ ನೋಡಬಾರದು’ ಎಂದು ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಪ್ರಸೂತಿ ತಜ್ಞ ನಾಗೇಂದ್ರಪ್ಪ ಹೇಳಿದರು.</p>.<p>ಪಟ್ಟಣದ ರಂಗಮಂದಿರದಲ್ಲಿ ಎಚ್ಪಿಆರ್ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಆ್ಯಂಡ್ ಪ್ಯಾರಾ ಮೆಡಿಕಲ್ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಶುಶ್ರೂಷಕಿಯರ ದಿನ, ಲ್ಯಾಪ್ ಲೈಟಿಂಗ್ ಮತ್ತು ಜಿಎನ್ಎಂ ಹಾಗೂ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಫ್ಲಾರೆನ್ಸ್ ನೈಟಿಂಗೇಲ್ ಅವರ ಸೇವೆ ಪರಿಗಣಿಸಿ ಅವರ ಜನ್ಮ ದಿನದ ವಾರ್ಷಿಕೋತ್ಸವದ ನಿಮಿತ್ತ ಶುಶ್ರೂಷಕಿಯರ ದಿನವನ್ನು ಆಚರಿಸಲಾಗುತ್ತಿದೆ. ಅವರು ಪ್ರತಿಯೊಬ್ಬ ಶುಶ್ರೂಷಕಿಯರಿಗೆ ಮಾದರಿಯಾಗಿದ್ದು, ಅವರ ಮಾರ್ಗದಲ್ಲಿ ಮುನ್ನಡೆಯಬೇಕು’ ಎಂದರು.</p>.<p>ಶುಶ್ರೂಷಕಿಯರಾದ ಅರುಂಧತಿ, ಜಯಲಕ್ಷ್ಮಿ, ಎಲಿಸಮ್ಮ ಸೀಮಾನಾಯಕ್, ರಶ್ಮಿ, ಶ್ವೇತಾ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಹರಿಪ್ರಸಾದ್ ರೈ ಕಾರ್ಯಕ್ರಮ ಉದ್ಘಾಟಿಸಿದರು.</p>.<p>ಪ್ರಾಂಶುಪಾಲರಾದ ಜಿ.ಭಾಗ್ಯಾ, ಡಾ. ಪ್ರಭು ಸಾಹುಕಾರ್, ಡಾ. ನಾಗರಾಜ್ ನಾಯಕ್, ಡಾ.ಗುಡ್ಡಪ್ಪ, ಡಾ.ಶ್ರೀಕೃಷ್ಣ, ಡಾ.ಹರ್ಷವರ್ಧನ್, ಸಿ.ಕೆ ಬಲೀಂದ್ರಪ್ಪ, ಎಚ್.ಕೆ ಶಿಲ್ಪಾ, ಜ್ಯೋತಿ ಸೇರಿ ಇತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-42-1550983747</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>