ಕೋವಿಡ್ ಕಾರಣದಿಂದ ಶಾಲೆಗಳು ತಡವಾಗಿ ಆರಂಭವಾಗಿರುವುದು ಮತ್ತು ಪ್ರಸ್ತುತ ವರ್ಷ ಹಾಜರಾತಿ ಕಡ್ಡಾಯವಲ್ಲ ಎಂದು ಇಲಾಖೆಯೇ ಆದೇಶಿಸಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೆ, ಆರ್ಟಿಇ ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಹಾಜರಾತಿ ಮತ್ತು ದಾಖಲಾತಿ ಕುರಿತು ನಿಯಮದಲ್ಲಿ ಸಡಿಲಿಕೆ ಮಾಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.