ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಜರಾತಿ ಕಡಿಮೆಯಿದ್ದರೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅವಕಾಶ

ಆರ್‌ಟಿಇ ಶುಲ್ಕ ಮರುಪಾವತಿ ನಿಯಮಗಳಲ್ಲಿಯೂ ವಿನಾಯಿತಿ
Last Updated 23 ಫೆಬ್ರುವರಿ 2021, 3:38 IST
ಅಕ್ಷರ ಗಾತ್ರ

ಬೆಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯಿದ್ದರೂ ಈ ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಅವಕಾಶ ನೀಡಿದೆ.

ಕೋವಿಡ್ ಕಾರಣದಿಂದ ಶಾಲೆಗಳು ತಡವಾಗಿ ಆರಂಭವಾಗಿರುವುದು ಮತ್ತು ಪ್ರಸ್ತುತ ವರ್ಷ ಹಾಜರಾತಿ ಕಡ್ಡಾಯವಲ್ಲ ಎಂದು ಇಲಾಖೆಯೇ ಆದೇಶಿಸಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೆ, ಆರ್‌ಟಿಇ ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಹಾಜರಾತಿ ಮತ್ತು ದಾಖಲಾತಿ ಕುರಿತು ನಿಯಮದಲ್ಲಿ ಸಡಿಲಿಕೆ ಮಾಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

‘ಖಾಸಗಿ ಅನುದಾನ ರಹಿತ ಶಾಲೆಗಳ ಹಿತವನ್ನು ಕಾಯುವ ಉದ್ದೇಶದಿಂದ ಈ ವಿನಾಯಿತಿಯನ್ನು ನೀಡಲಾಗಿದೆ. ಆದರೆ, ಆರ್‌ಟಿಇ ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಉಳಿದ ಷರತ್ತುಗಳನ್ನು ಖಚಿತಪಡಿಸಿಕೊಂಡು ಕ್ರಮಕೈಗೊಳ್ಳಬೇಕು’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT