<p>ಮಂಡ್ಯ: ‘ಭಕ್ತಿಯೊಂದಿಗೆ ಜ್ಞಾನ ಗಳಿಕೆಗೂ ಆದ್ಯತೆ ನೀಡಬೇಕು. ದೇವರ ಮನೆ ಪಕ್ಕ ಗ್ರಂಥಾಲಯ ನಿರ್ಮಿಸಿಕೊಳ್ಳಬೇಕು’ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಸಲಹೆ ನೀಡಿದರು.</p>.<p>ಇಲ್ಲಿನ ಶಂಕರ ನಗರದ ಲೇಖಕ ಚಂದ್ರಶೇಖರ ದ.ಕೋ.ಹಳ್ಳಿ ಅವರ ನಿವಾಸದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ, ಜಿಲ್ಲಾ ಜಾಗೃತ ಸಮಿತಿ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ‘ಮನೆಗೊಂದು ಗ್ರಂಥಾಲಯ ಅನುಷ್ಠಾನ’ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪ್ರತಿಯೊಬ್ಬರೂ ಪ್ರತಿದಿನ 10 ನಿಮಿಷವಾದರೂ ಪುಸ್ತಕಗಳನ್ನು ಓದಬೇಕು. ಮನಸ್ಸಿನ ಒತ್ತಡವನ್ನು ತೊಡೆದುಹಾಕುವ ಶಕ್ತಿ ಪುಸ್ತಕಗಳಿಗಿವೆ’ ಎಂದರು.</p>.<p>ಕವಯತ್ರಿ ಎಚ್.ಆರ್.ಕನ್ನಿಕಾ, ಶಿಕ್ಷಕ ಕೊತ್ತತ್ತಿ ರಾಜು ಮಾತನಾಡಿದರು. ಜಿಲ್ಲಾ ಜಾಗೃತ ಸಮಿತಿ ಸಂಚಾಲಕ ಕಾರಸವಾಡಿ ಮಹದೇವ ಅಧ್ಯಕ್ಷತೆ ವಹಿಸಿದ್ದರು.</p>.<p>ಸಮಿತಿಯ ಸದಸ್ಯೆ ಎಂ.ಕೆಂಪಮ್ಮ, ಪ್ರಕಾಶಕರಾದ ಮಂಜು ಮುತ್ತೇಗೆರೆ, ಶಿವಕುಮಾರ ಆರಾಧ್ಯ, ಸದ್ದಾಂ ತಗ್ಗಹಳ್ಳಿ, ಕರ್ನಾಟಕ ಜಾನಪದ ಅಕಾಡೆಮಿ ಸಿಂಡಿಕೇಟ್ ಸದಸ್ಯ ಗೊರವಾಲೆ ಚಂದ್ರಶೇಖರ್, ಸಂಘಟಕ ಕೀಲಾರ ಕೃಷ್ಣೇಗೌಡ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-40-1254145350</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ‘ಭಕ್ತಿಯೊಂದಿಗೆ ಜ್ಞಾನ ಗಳಿಕೆಗೂ ಆದ್ಯತೆ ನೀಡಬೇಕು. ದೇವರ ಮನೆ ಪಕ್ಕ ಗ್ರಂಥಾಲಯ ನಿರ್ಮಿಸಿಕೊಳ್ಳಬೇಕು’ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಸಲಹೆ ನೀಡಿದರು.</p>.<p>ಇಲ್ಲಿನ ಶಂಕರ ನಗರದ ಲೇಖಕ ಚಂದ್ರಶೇಖರ ದ.ಕೋ.ಹಳ್ಳಿ ಅವರ ನಿವಾಸದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ, ಜಿಲ್ಲಾ ಜಾಗೃತ ಸಮಿತಿ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ‘ಮನೆಗೊಂದು ಗ್ರಂಥಾಲಯ ಅನುಷ್ಠಾನ’ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪ್ರತಿಯೊಬ್ಬರೂ ಪ್ರತಿದಿನ 10 ನಿಮಿಷವಾದರೂ ಪುಸ್ತಕಗಳನ್ನು ಓದಬೇಕು. ಮನಸ್ಸಿನ ಒತ್ತಡವನ್ನು ತೊಡೆದುಹಾಕುವ ಶಕ್ತಿ ಪುಸ್ತಕಗಳಿಗಿವೆ’ ಎಂದರು.</p>.<p>ಕವಯತ್ರಿ ಎಚ್.ಆರ್.ಕನ್ನಿಕಾ, ಶಿಕ್ಷಕ ಕೊತ್ತತ್ತಿ ರಾಜು ಮಾತನಾಡಿದರು. ಜಿಲ್ಲಾ ಜಾಗೃತ ಸಮಿತಿ ಸಂಚಾಲಕ ಕಾರಸವಾಡಿ ಮಹದೇವ ಅಧ್ಯಕ್ಷತೆ ವಹಿಸಿದ್ದರು.</p>.<p>ಸಮಿತಿಯ ಸದಸ್ಯೆ ಎಂ.ಕೆಂಪಮ್ಮ, ಪ್ರಕಾಶಕರಾದ ಮಂಜು ಮುತ್ತೇಗೆರೆ, ಶಿವಕುಮಾರ ಆರಾಧ್ಯ, ಸದ್ದಾಂ ತಗ್ಗಹಳ್ಳಿ, ಕರ್ನಾಟಕ ಜಾನಪದ ಅಕಾಡೆಮಿ ಸಿಂಡಿಕೇಟ್ ಸದಸ್ಯ ಗೊರವಾಲೆ ಚಂದ್ರಶೇಖರ್, ಸಂಘಟಕ ಕೀಲಾರ ಕೃಷ್ಣೇಗೌಡ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-40-1254145350</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>