<p>ಗುಡಗೇರಿ: ‘ಹದಿಹರೆಯವು ವಿದ್ಯಾರ್ಥಿ ಜೀವನದ ಸಂಕ್ರಮಣ ಕಾಲ’ ಎಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಡಾ. ಸಂಜೀವ ಕುಲಕರ್ಣಿ ಹೇಳಿದರು.</p>.<p>ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪ ಈಚೆಗೆ ಆಯೋಜಿಸಿದ್ದ ‘ಹದಿಹರೆಯದ ಸಮಸ್ಯೆಗಳು ಹಾಗೂ ಪರಿಹಾರೋಪಾಯ’ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಹದಿಹರೆಯದಲ್ಲೇ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಈ ಅವಧಿಯಲ್ಲಿ ಭಾವನಾತ್ಮಕ, ದೈಹಿಕ ಹಾಗೂ ಮಾನಸಿಕವಾಗಿ ಬದಲಾವಣೆಗಳಾಗಿ ಸಿಟ್ಟು, ಖಿನ್ನತೆ, ಆತಂಕ, ಲೈಂಗಿಕ ಆಕರ್ಷಣೆ, ಹತಾಶ ಮನೋಭಾವ ಉಂಟಾಗುವುದು ಸಹಜ’ ಎಂದರು.</p>.<p>‘ತಾವು ಕಂಡ ಕನಸು ನನಸಾಗದೇ ಇದ್ದರೆ ದುಶ್ಚಟಗಳಿಗೆ ಬಲಿಯಾಗಬಹುದು. ಸಮೂಹ ಮಾಧ್ಯಮಗಳೂ ಸಹ ವಿದ್ಯಾರ್ಥಿಗಳ ಮನಸ್ಸನ್ನು ಕಲ್ಮಶಗೊಳಿಸುತ್ತವೆ. ಓದಿನಲ್ಲಿ ಆಸಕ್ತಿ ಕಡಿಮೆಯಾಗಿ ಏಕಾಗ್ರತೆಗೆ ಭಂಗ ಉಂಟಾಗುತ್ತದೆ. ಈ ದೆಸೆಯಲ್ಲಿ ಪೋಷಕರು ಹಾಗೂ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡಬೇಕು’ ಎಂದರು.</p>.<p>ಸಂಶಿ ಕೆ.ಎಲ್.ಇ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ರಮೇಶ ಅತ್ತಿಗೇರಿ ಮಾತನಾಡಿ, ‘ಹದಿಹರೆಯದಲ್ಲಿ ಎಂತಹ ಸಮಸ್ಯೆ ಎದುರಾದರೂ ಧೃತಿಗೆಡದೇ ಸಮರ್ಥವಾಗಿ ಎದುರಿಸಬೇಕು’ ಎಂದರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಮಾತನಾಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಅಪ್ಪಣ್ಣ ಹುಂಡೇಕಾರ ಉದ್ಘಾಟಿಸಿದರು.</p>.<p>ಪ್ರಾಚಾರ್ಯ ಗಂಗಾಧರ ಗುಮ್ಮಗೋಳಮಠ ಅಧ್ಯಕ್ಷತೆ ವಹಿಸಿದ್ದರು. ಶಂಭಯ್ಯ ಹಿರೇಮಠ, ಹನುಮಂತ ಕಲ್ಲೋಳಿಕರ, ದೇವರಾಜು, ಚೇತನಾ, ಸಂಗಮೇಶ ಬಸರಕೋಡ, ಮೆಹಬೂಬ ಶೇಖ, ವೀರೇಶ ಶಹಪೂರಕರ, ವೈ.ಎಚ್. ಬೀರಣ್ಣವರ, ವೀರಣ್ಣ ಒಡ್ಡೀನ, ಭೀಮೇಶ ಯರಡೋಣಿ, ಬಿ.ಸಿ. ಅಮಾತಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-24-1962268238</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಡಗೇರಿ: ‘ಹದಿಹರೆಯವು ವಿದ್ಯಾರ್ಥಿ ಜೀವನದ ಸಂಕ್ರಮಣ ಕಾಲ’ ಎಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಡಾ. ಸಂಜೀವ ಕುಲಕರ್ಣಿ ಹೇಳಿದರು.</p>.<p>ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪ ಈಚೆಗೆ ಆಯೋಜಿಸಿದ್ದ ‘ಹದಿಹರೆಯದ ಸಮಸ್ಯೆಗಳು ಹಾಗೂ ಪರಿಹಾರೋಪಾಯ’ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಹದಿಹರೆಯದಲ್ಲೇ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಈ ಅವಧಿಯಲ್ಲಿ ಭಾವನಾತ್ಮಕ, ದೈಹಿಕ ಹಾಗೂ ಮಾನಸಿಕವಾಗಿ ಬದಲಾವಣೆಗಳಾಗಿ ಸಿಟ್ಟು, ಖಿನ್ನತೆ, ಆತಂಕ, ಲೈಂಗಿಕ ಆಕರ್ಷಣೆ, ಹತಾಶ ಮನೋಭಾವ ಉಂಟಾಗುವುದು ಸಹಜ’ ಎಂದರು.</p>.<p>‘ತಾವು ಕಂಡ ಕನಸು ನನಸಾಗದೇ ಇದ್ದರೆ ದುಶ್ಚಟಗಳಿಗೆ ಬಲಿಯಾಗಬಹುದು. ಸಮೂಹ ಮಾಧ್ಯಮಗಳೂ ಸಹ ವಿದ್ಯಾರ್ಥಿಗಳ ಮನಸ್ಸನ್ನು ಕಲ್ಮಶಗೊಳಿಸುತ್ತವೆ. ಓದಿನಲ್ಲಿ ಆಸಕ್ತಿ ಕಡಿಮೆಯಾಗಿ ಏಕಾಗ್ರತೆಗೆ ಭಂಗ ಉಂಟಾಗುತ್ತದೆ. ಈ ದೆಸೆಯಲ್ಲಿ ಪೋಷಕರು ಹಾಗೂ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡಬೇಕು’ ಎಂದರು.</p>.<p>ಸಂಶಿ ಕೆ.ಎಲ್.ಇ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ರಮೇಶ ಅತ್ತಿಗೇರಿ ಮಾತನಾಡಿ, ‘ಹದಿಹರೆಯದಲ್ಲಿ ಎಂತಹ ಸಮಸ್ಯೆ ಎದುರಾದರೂ ಧೃತಿಗೆಡದೇ ಸಮರ್ಥವಾಗಿ ಎದುರಿಸಬೇಕು’ ಎಂದರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಮಾತನಾಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಅಪ್ಪಣ್ಣ ಹುಂಡೇಕಾರ ಉದ್ಘಾಟಿಸಿದರು.</p>.<p>ಪ್ರಾಚಾರ್ಯ ಗಂಗಾಧರ ಗುಮ್ಮಗೋಳಮಠ ಅಧ್ಯಕ್ಷತೆ ವಹಿಸಿದ್ದರು. ಶಂಭಯ್ಯ ಹಿರೇಮಠ, ಹನುಮಂತ ಕಲ್ಲೋಳಿಕರ, ದೇವರಾಜು, ಚೇತನಾ, ಸಂಗಮೇಶ ಬಸರಕೋಡ, ಮೆಹಬೂಬ ಶೇಖ, ವೀರೇಶ ಶಹಪೂರಕರ, ವೈ.ಎಚ್. ಬೀರಣ್ಣವರ, ವೀರಣ್ಣ ಒಡ್ಡೀನ, ಭೀಮೇಶ ಯರಡೋಣಿ, ಬಿ.ಸಿ. ಅಮಾತಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-24-1962268238</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>