<p>ಶಿಡ್ಲಘಟ್ಟ: ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಗುರಿ ಇಟ್ಟುಕೊಂಡು, ಶ್ರದ್ಧೆ, ಭಕ್ತಿಯಿಂದ ವಿದ್ಯೆ ಕಲಿತರೆ ಯಶಸ್ಸು ತಾನಾಗಿಯೇ ಬರುತ್ತದೆ ಎಂದು ಶಿಕ್ಷಕ ಆರ್.ಟಿ.ವೇಣುಗೋಪಾಲ್ ಹೇಳಿದರು.</p>.<p>ತಾಲ್ಲೂಕಿನ ಮೇಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ 2010-11ನೇ ಸಾಲಿನ ವಿದ್ಯಾರ್ಥಿಗಳಿಂದ ಆಯೋಜಿಸಲಾಗಿದ್ದ ಗುರುವಂದನ ಕಾರ್ಯಕ್ರಮ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ವಿದ್ಯಾರ್ಥಿಗಳು ಪ್ರಾಯೋಜಕರಾಗಿ, ಸಮಾಜಕ್ಕೆ ಉಪಕಾರ ಮಾಡುವಂತಹ ವ್ಯಕ್ತಿಗಳಾದಾಗ ಮಾತ್ರವೇ, ಶಿಕ್ಷಕನ ಜೀವನ ಸಾರ್ಥಕವಾಗುತ್ತದೆ ಎಂದರು.</p>.<p>ಹಿರಿಯ ಶಿಕ್ಷಕ ಜಿ.ಆರ್.ರಂಗಪ್ಪ ಮಾತನಾಡಿ, ಸ್ವಾರ್ಥ ತುಂಬಿರುವ ಸಮಾಜದಲ್ಲಿ ಇಂದಿಗೂ ಗುರುಗಳನ್ನು ನೆನಪಿನಲ್ಲಿಟ್ಟುಕೊಂಡು ಅವರು ಕಲಿಸಿರುವ ವಿದ್ಯೆಯನ್ನು ಸ್ಮರಿಸುವ ವಿದ್ಯಾರ್ಥಿಗಳಿರುವುದು ನಮ್ಮೆಲ್ಲರ ಸೌಭಾಗ್ಯ ಎಂದರು.</p>.<p>ಮೇಲೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ಎ.ಉಮೇಶ್ ಮಾತನಾಡಿ, ಸಮಾಜದಲ್ಲಿ ನಾವು ಎಲ್ಲವನ್ನೂ ಪಡೆಯಬಹುದು. ಆದರೆ, ತಂದೆ-ತಾಯಿ, ವಿದ್ಯೆ ಕಲಿಸಿದ ಗುರುಗಳನ್ನು ಪರ್ಯಾಯವಾಗಿ ಪಡೆಯುವುದಕ್ಕೆ ಸಾಧ್ಯವಿಲ್ಲ. ಶಿಕ್ಷಕರು ಕಲಿಸಿದ ವಿದ್ಯೆಯಿಂದ ನಾವು ಇಲ್ಲಿ ವ್ಯಕ್ತಿಗಳಾಗಿದ್ದೇವೆ. ಅವರ ಆಶೀರ್ವಾದ ಪಡೆಯುವ ಮೂಲಕ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದರು.</p>.<p>ಶಿಕ್ಷಕರನ್ನು ಗೌರವಿಸ ಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ನಂದಿನಿ, ಮುಖ್ಯಶಿಕ್ಷಕ ಎಚ್.ಎಂ.ಭಾಸ್ಕರ್, ಆರ್.ಮಂಜುಳಾ, ಸಿ.ಕೆಂಪಣ್ಣ, ಶಿವಕುಮಾರ್ ಬಾಬು ಪಟ್ಟೇದ್, ಕೆ.ಆರ್.ಆಶಾ, ಎಂ.ಸಿ.ರೇಣುಕಾ, ಜೆ.ಸುಷ್ಮಾ, ಸಿ.ಸುಜಾತ, ಮಾಲತೇಶ್ ಕೊರಚರ, ಡಿ.ವಿದ್ಯಾ, ಎಂ.ಬಿ.ಪೊನ್ನಮ್ಮ, ಎ.ನಾರಾಯಣ ಸ್ವಾಮಿ, ಗಾಯತ್ರಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-16-930755751</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಡ್ಲಘಟ್ಟ: ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಗುರಿ ಇಟ್ಟುಕೊಂಡು, ಶ್ರದ್ಧೆ, ಭಕ್ತಿಯಿಂದ ವಿದ್ಯೆ ಕಲಿತರೆ ಯಶಸ್ಸು ತಾನಾಗಿಯೇ ಬರುತ್ತದೆ ಎಂದು ಶಿಕ್ಷಕ ಆರ್.ಟಿ.ವೇಣುಗೋಪಾಲ್ ಹೇಳಿದರು.</p>.<p>ತಾಲ್ಲೂಕಿನ ಮೇಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ 2010-11ನೇ ಸಾಲಿನ ವಿದ್ಯಾರ್ಥಿಗಳಿಂದ ಆಯೋಜಿಸಲಾಗಿದ್ದ ಗುರುವಂದನ ಕಾರ್ಯಕ್ರಮ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ವಿದ್ಯಾರ್ಥಿಗಳು ಪ್ರಾಯೋಜಕರಾಗಿ, ಸಮಾಜಕ್ಕೆ ಉಪಕಾರ ಮಾಡುವಂತಹ ವ್ಯಕ್ತಿಗಳಾದಾಗ ಮಾತ್ರವೇ, ಶಿಕ್ಷಕನ ಜೀವನ ಸಾರ್ಥಕವಾಗುತ್ತದೆ ಎಂದರು.</p>.<p>ಹಿರಿಯ ಶಿಕ್ಷಕ ಜಿ.ಆರ್.ರಂಗಪ್ಪ ಮಾತನಾಡಿ, ಸ್ವಾರ್ಥ ತುಂಬಿರುವ ಸಮಾಜದಲ್ಲಿ ಇಂದಿಗೂ ಗುರುಗಳನ್ನು ನೆನಪಿನಲ್ಲಿಟ್ಟುಕೊಂಡು ಅವರು ಕಲಿಸಿರುವ ವಿದ್ಯೆಯನ್ನು ಸ್ಮರಿಸುವ ವಿದ್ಯಾರ್ಥಿಗಳಿರುವುದು ನಮ್ಮೆಲ್ಲರ ಸೌಭಾಗ್ಯ ಎಂದರು.</p>.<p>ಮೇಲೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ಎ.ಉಮೇಶ್ ಮಾತನಾಡಿ, ಸಮಾಜದಲ್ಲಿ ನಾವು ಎಲ್ಲವನ್ನೂ ಪಡೆಯಬಹುದು. ಆದರೆ, ತಂದೆ-ತಾಯಿ, ವಿದ್ಯೆ ಕಲಿಸಿದ ಗುರುಗಳನ್ನು ಪರ್ಯಾಯವಾಗಿ ಪಡೆಯುವುದಕ್ಕೆ ಸಾಧ್ಯವಿಲ್ಲ. ಶಿಕ್ಷಕರು ಕಲಿಸಿದ ವಿದ್ಯೆಯಿಂದ ನಾವು ಇಲ್ಲಿ ವ್ಯಕ್ತಿಗಳಾಗಿದ್ದೇವೆ. ಅವರ ಆಶೀರ್ವಾದ ಪಡೆಯುವ ಮೂಲಕ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದರು.</p>.<p>ಶಿಕ್ಷಕರನ್ನು ಗೌರವಿಸ ಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ನಂದಿನಿ, ಮುಖ್ಯಶಿಕ್ಷಕ ಎಚ್.ಎಂ.ಭಾಸ್ಕರ್, ಆರ್.ಮಂಜುಳಾ, ಸಿ.ಕೆಂಪಣ್ಣ, ಶಿವಕುಮಾರ್ ಬಾಬು ಪಟ್ಟೇದ್, ಕೆ.ಆರ್.ಆಶಾ, ಎಂ.ಸಿ.ರೇಣುಕಾ, ಜೆ.ಸುಷ್ಮಾ, ಸಿ.ಸುಜಾತ, ಮಾಲತೇಶ್ ಕೊರಚರ, ಡಿ.ವಿದ್ಯಾ, ಎಂ.ಬಿ.ಪೊನ್ನಮ್ಮ, ಎ.ನಾರಾಯಣ ಸ್ವಾಮಿ, ಗಾಯತ್ರಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-16-930755751</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>