<p>ಸುರಹೊನ್ನೆ (ನ್ಯಾಮತಿ): ‘ಪ್ರಾಥಮಿಕ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಹಣಕಾಸಿನ ವ್ಯವಹಾರ ಜ್ಞಾನವನ್ನು ಕಲಿಸುವ ಉದ್ದೇಶದಿಂದ ಆರ್ಥಿಕ ಸಾಕ್ಷರತಾ ಶಿಕ್ಷಣ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಶಾಲೆಯ ಮುಖ್ಯಶಿಕ್ಷಕ ಡಿ.ರಾಮಪ್ಪ ತಿಳಿಸಿದರು.</p>.<p>ಮಂಗಳವಾರ ಸುರಹೊನ್ನೆ ಗ್ರಾಮದ ಪಿ.ಎಂ.ಶ್ರೀ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳನ್ನು ನ್ಯಾಮತಿಯ ವಿವಿಧ ಬ್ಯಾಂಕ್ಗಳಿಗೆ ಕರೆದುಕೊಂಡು ಹೋಗಿ ಹಣಕಾಸಿನ ವಹಿವಾಟು ಹೇಗೆ ನಡೆಯುತ್ತದೆ ಎಂಬ ಬಗ್ಗೆ ಅರಿವು ಮೂಡಿಸಿ ಅವರು ಮಾತನಾಡಿದರು.</p>.<p>ಇದೇ ಸಂದರ್ಭದಲ್ಲಿ ಪೋಷಕರಿಗೆ ಶಾಲೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು.</p>.<p>ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮರಿಗೌಡ, ಉಪಾಧ್ಯಕ್ಷೆ ಆಶಾ, ಸುರಹೊನ್ನೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೇವರಾಜ, ಶಾಲೆಯ ಸಹಶಿಕ್ಷಕರು, ಎಸ್ಡಿಎಂಸಿ ಸದಸ್ಯರು ಜಾಥಾದಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-43-958921844</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುರಹೊನ್ನೆ (ನ್ಯಾಮತಿ): ‘ಪ್ರಾಥಮಿಕ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಹಣಕಾಸಿನ ವ್ಯವಹಾರ ಜ್ಞಾನವನ್ನು ಕಲಿಸುವ ಉದ್ದೇಶದಿಂದ ಆರ್ಥಿಕ ಸಾಕ್ಷರತಾ ಶಿಕ್ಷಣ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಶಾಲೆಯ ಮುಖ್ಯಶಿಕ್ಷಕ ಡಿ.ರಾಮಪ್ಪ ತಿಳಿಸಿದರು.</p>.<p>ಮಂಗಳವಾರ ಸುರಹೊನ್ನೆ ಗ್ರಾಮದ ಪಿ.ಎಂ.ಶ್ರೀ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳನ್ನು ನ್ಯಾಮತಿಯ ವಿವಿಧ ಬ್ಯಾಂಕ್ಗಳಿಗೆ ಕರೆದುಕೊಂಡು ಹೋಗಿ ಹಣಕಾಸಿನ ವಹಿವಾಟು ಹೇಗೆ ನಡೆಯುತ್ತದೆ ಎಂಬ ಬಗ್ಗೆ ಅರಿವು ಮೂಡಿಸಿ ಅವರು ಮಾತನಾಡಿದರು.</p>.<p>ಇದೇ ಸಂದರ್ಭದಲ್ಲಿ ಪೋಷಕರಿಗೆ ಶಾಲೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು.</p>.<p>ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮರಿಗೌಡ, ಉಪಾಧ್ಯಕ್ಷೆ ಆಶಾ, ಸುರಹೊನ್ನೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೇವರಾಜ, ಶಾಲೆಯ ಸಹಶಿಕ್ಷಕರು, ಎಸ್ಡಿಎಂಸಿ ಸದಸ್ಯರು ಜಾಥಾದಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-43-958921844</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>