<p>ಸುರಪುರ: ‘ಕನಕದಾಸರು ಸಮಾಜದಲ್ಲಿ ಬೇರೂರಿದ್ದ ಜಾತಿ ಪದ್ಧತಿ, ಮೂಢನಂಬಿಕೆ, ಅಸ್ಪೃಶ್ಯತೆ ಹೋಗಲಾಡಿಸಲು ತಮ್ಮ ಸಾಹಿತ್ಯದ ಮೂಲಕ ಅವಿರತವಾಗಿ ಶ್ರಮಿಸಿದ ಶ್ರೇಷ್ಠ ಸಂತರು’ ಎಂದು ಜಾಲಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ದೇವು ಹೆಬ್ಬಾಳ ಹೇಳಿದರು.</p>.<p>ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಬುಧವಾರ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಸಗರದ ಕಲಾನಿಕೇತನ ಟ್ರಸ್ಟ್ ಆಯೋಜಿಸಿದ್ದ ಸಂತ ಕವಿ ಕನಕದಾಸರ ಕುರಿತು ‘ಕನಕ ದರ್ಶನ ವಿಶೇಷ ಉಪನ್ಯಾಸ ಮಾಲಿಕೆ’ಯಲ್ಲಿ ಅವರು ಮಾತನಾಡಿದರು.</p>.<p>‘ಕನಕದಾಸರ ವೈಚಾರಿಕತೆ, ಚಿಂತನೆ ಅವರ ಮೌಲ್ಯಯುತ ಬದುಕು ಇಂದಿನ ಯುವ ಸಮೂಹಕ್ಕೆ ಮತ್ತಷ್ಟು ಪರಿಚಯಿಸುವ ಕೆಲಸವನ್ನು ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ’ ಎಂದರು.</p>.<p>ಸಾಹಿತಿ ಶರಣಗೌಡ ಪಾಟೀಲ ಜೈನಾಪುರ ಮಾತನಾಡಿ, ‘ರಾಜ ವೈಭೋಗದಲ್ಲಿದ್ದ ಕನಕದಾಸರು ಎಲ್ಲವನ್ನು ತ್ಯಾಗ ಮಾಡಿ ಸಮಾಜಕ್ಕಾಗಿ ಹಗಲಿರುಳು ಶ್ರಮಿಸಿದರು. ಅವರ ಸಾಹಿತ್ಯ ಶ್ರೇಷ್ಠ ಮಟ್ಟದ್ದು. ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಡೆದು ಎಲ್ಲರು ಆದರ್ಶ ಬದುಕು ಕಟ್ಟಿಕೊಳ್ಳಬೇಕು’ ಎಂದು ಹೇಳಿದರು.</p>.<p>ಉಪನ್ಯಾಸಕ ಎಚ್.ಎಂ ವಗ್ಗಾ, ಅಧ್ಯಕ್ಷತೆ ವಹಿಸಿದ್ದ ಉಪನ್ಯಾಸಕ ಜಗದೀಶಕುಮಾರ ಮಾತನಾಡಿದರು. ಕಲಾನಿಕೇತನ ಟ್ರಸ್ಟ್ ಅಧ್ಯಕ್ಷ ಬಸವರಾಜ ಸಿನ್ನೂರ ಪ್ರಾಸ್ತವಿಕವಾಗಿ ಮಾತನಾಡಿದರು.</p>.<p>ಬಿಆರ್ಸಿ ರಾಜಶೇಖರ ದೇಸಾಯಿ, ಪಿ.ಕೆ.ಕುಲಕರ್ಣಿ, ಹನುಮಂತರಾಯ ದೊಡ್ಮನಿ, ಮಹಾದೇವಪ್ಪ, ಮಾರುತಿ, ಪ್ರಭುಗೌಡ ಪಾಟೀಲ ವೇದಿಕೆಯಲ್ಲಿದ್ದರು. ಶಾಂತು ನಾಯಕ ಸ್ವಾಗತಿಸಿದರು. ಹನುಮಂತ ಸಿಂಘೆ ನಿರೂಪಿಸಿದರು. ಬಸವರಾಜ ಪೂಜಾರಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-30-832119423</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುರಪುರ: ‘ಕನಕದಾಸರು ಸಮಾಜದಲ್ಲಿ ಬೇರೂರಿದ್ದ ಜಾತಿ ಪದ್ಧತಿ, ಮೂಢನಂಬಿಕೆ, ಅಸ್ಪೃಶ್ಯತೆ ಹೋಗಲಾಡಿಸಲು ತಮ್ಮ ಸಾಹಿತ್ಯದ ಮೂಲಕ ಅವಿರತವಾಗಿ ಶ್ರಮಿಸಿದ ಶ್ರೇಷ್ಠ ಸಂತರು’ ಎಂದು ಜಾಲಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ದೇವು ಹೆಬ್ಬಾಳ ಹೇಳಿದರು.</p>.<p>ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಬುಧವಾರ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಸಗರದ ಕಲಾನಿಕೇತನ ಟ್ರಸ್ಟ್ ಆಯೋಜಿಸಿದ್ದ ಸಂತ ಕವಿ ಕನಕದಾಸರ ಕುರಿತು ‘ಕನಕ ದರ್ಶನ ವಿಶೇಷ ಉಪನ್ಯಾಸ ಮಾಲಿಕೆ’ಯಲ್ಲಿ ಅವರು ಮಾತನಾಡಿದರು.</p>.<p>‘ಕನಕದಾಸರ ವೈಚಾರಿಕತೆ, ಚಿಂತನೆ ಅವರ ಮೌಲ್ಯಯುತ ಬದುಕು ಇಂದಿನ ಯುವ ಸಮೂಹಕ್ಕೆ ಮತ್ತಷ್ಟು ಪರಿಚಯಿಸುವ ಕೆಲಸವನ್ನು ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ’ ಎಂದರು.</p>.<p>ಸಾಹಿತಿ ಶರಣಗೌಡ ಪಾಟೀಲ ಜೈನಾಪುರ ಮಾತನಾಡಿ, ‘ರಾಜ ವೈಭೋಗದಲ್ಲಿದ್ದ ಕನಕದಾಸರು ಎಲ್ಲವನ್ನು ತ್ಯಾಗ ಮಾಡಿ ಸಮಾಜಕ್ಕಾಗಿ ಹಗಲಿರುಳು ಶ್ರಮಿಸಿದರು. ಅವರ ಸಾಹಿತ್ಯ ಶ್ರೇಷ್ಠ ಮಟ್ಟದ್ದು. ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಡೆದು ಎಲ್ಲರು ಆದರ್ಶ ಬದುಕು ಕಟ್ಟಿಕೊಳ್ಳಬೇಕು’ ಎಂದು ಹೇಳಿದರು.</p>.<p>ಉಪನ್ಯಾಸಕ ಎಚ್.ಎಂ ವಗ್ಗಾ, ಅಧ್ಯಕ್ಷತೆ ವಹಿಸಿದ್ದ ಉಪನ್ಯಾಸಕ ಜಗದೀಶಕುಮಾರ ಮಾತನಾಡಿದರು. ಕಲಾನಿಕೇತನ ಟ್ರಸ್ಟ್ ಅಧ್ಯಕ್ಷ ಬಸವರಾಜ ಸಿನ್ನೂರ ಪ್ರಾಸ್ತವಿಕವಾಗಿ ಮಾತನಾಡಿದರು.</p>.<p>ಬಿಆರ್ಸಿ ರಾಜಶೇಖರ ದೇಸಾಯಿ, ಪಿ.ಕೆ.ಕುಲಕರ್ಣಿ, ಹನುಮಂತರಾಯ ದೊಡ್ಮನಿ, ಮಹಾದೇವಪ್ಪ, ಮಾರುತಿ, ಪ್ರಭುಗೌಡ ಪಾಟೀಲ ವೇದಿಕೆಯಲ್ಲಿದ್ದರು. ಶಾಂತು ನಾಯಕ ಸ್ವಾಗತಿಸಿದರು. ಹನುಮಂತ ಸಿಂಘೆ ನಿರೂಪಿಸಿದರು. ಬಸವರಾಜ ಪೂಜಾರಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-30-832119423</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>