<p>ಸುರಪುರ: ‘ಕನ್ನಡ ಸಾಹಿತ್ಯ ಪರಿಷತ್ತು ನಾಡಿನಾದ್ಯಂತ ಸಾಹಿತ್ಯ, ಸಂಸ್ಕೃತಿಯನ್ನು ಪಸರಿಸುವ ಮೂಲಕ ಕನ್ನಡಿಗರ ಮನೆ ಮಾತಾಗಿದೆ’ ಎಂದು ಕೆವೈಡಿಸಿಸಿ ಬ್ಯಾಂಕ್ ನಿರ್ದೇಶಕ ಸುರೇಶ ಸಜ್ಜನ್ ಹೇಳಿದರು.</p>.<p>ಇಲ್ಲಿಯ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ‘ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.</p>.<p>‘ಕಸಾಪ ಕನ್ನಡಿಗರ ಹೆಮ್ಮೆಯ ಸಂಸ್ಕೃತಿ, ಕನ್ನಡ ಸಾಹಿತ್ಯದ ಪರಂಪರೆಯ ಸಾರ. ಕನ್ನಡ ಸಾಹಿತ್ಯವು ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಜೀವನ ಮೌಲ್ಯಗಳನ್ನು ಪ್ರತಿಬಿಂಬಿಸುವ ಶಕ್ತಿಯಾಗಿದೆ’ ಎಂದು ತಿಳಿಸಿದರು.</p>.<p>‘ಯುವ ಪೀಳಿಗೆ ಕನ್ನಡ ಸಾಹಿತ್ಯದತ್ತ ಹೆಚ್ಚು ಆಸಕ್ತಿ ತೋರಬೇಕು. ಕನ್ನಡ ಭಾಷೆ ಮತ್ತು ಸಾಹಿತ್ಯದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು’ ಎಂದು ಕರೆ ನೀಡಿದರು.</p>.<p>ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ಅಧ್ಯಕ್ಷ ಅರವಿಂದಕುಮಾರ ಮಾತನಾಡಿ, ‘ಕಸಾಪ ಸಾಹಿತಿಗಳನ್ನು ಪ್ರೋತ್ಸಾಹಿಸುವ ಜೊತೆಗೆ ಗ್ರಾಮೀಣ ಭಾಗಗಳಲ್ಲಿ ಕನ್ನಡ ಅಭಿಮಾನವನ್ನು ಬೆಳೆಸುವ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಸಾಪ ಅಧ್ಯಕ್ಷ ಶರಣಬಸಪ್ಪ ಯಾಳವಾರ ಮಾತನಾಡಿ, ‘ಕನ್ನಡ ಭಾಷೆಯು 2000 ವರ್ಷಗಳಿಗಿಂತಲೂ ಹೆಚ್ಚಿನ ಇತಿಹಾಸ ಹಾಗೂ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ’ ಎಂದರು.</p>.<p>ಸಾಹಿತಿ ಕನಕಪ್ಪ ವಾಗನಗೇರಿ ಅವರು ಕಸಾಪ ಸಂಸ್ಥಾಪನಾ ದಿನಾಚರಣೆಯ ಮಹತ್ವದ ಕುರಿತು ವಿಶೇಷ ಉಪನ್ಯಾಸ ನೀಡಿದರು.</p>.<p>ಪ್ರಮುಖರಾದ ರಾಮನಗೌಡ ಸುಬೇದಾರ್, ರಾಘವೇಂದ್ರ ಬಾಡಿಯಾಳ, ಯಲ್ಲಪ್ಪ ಹುಲಿಕಲ್, ಪ್ರಕಾಶ ಅಲಬನೂರ, ರಜಾಕ್ ಬಾಗವಾನ್, ಜಾವೇದ್ ಹುಸೇನ್ ಹವಲ್ದಾರ್, ಅನ್ವರ್ ಜಮಾದಾರ್, ರಾಘವೇಂದ್ರ ಭಕ್ರಿ, ಶರಣಬಸವ ಹೂಗಾರ ಸೇರಿ ಕನ್ನಡಾಭಿಮಾನಿಗಳು ಭಾಗವಹಿಸಿದ್ದರು.</p>.<p>ಶ್ರೀಶೈಲ ಯಂಕಂಚಿ ಸ್ವಾಗತಿಸಿದರು. ವೆಂಕಟೇಶ ಪಾಟೀಲ ನಿರೂಪಿಸಿದರು. ಸಾಹೇಬರೆಡ್ಡಿ ಇಟಗಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-30-2005025110</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುರಪುರ: ‘ಕನ್ನಡ ಸಾಹಿತ್ಯ ಪರಿಷತ್ತು ನಾಡಿನಾದ್ಯಂತ ಸಾಹಿತ್ಯ, ಸಂಸ್ಕೃತಿಯನ್ನು ಪಸರಿಸುವ ಮೂಲಕ ಕನ್ನಡಿಗರ ಮನೆ ಮಾತಾಗಿದೆ’ ಎಂದು ಕೆವೈಡಿಸಿಸಿ ಬ್ಯಾಂಕ್ ನಿರ್ದೇಶಕ ಸುರೇಶ ಸಜ್ಜನ್ ಹೇಳಿದರು.</p>.<p>ಇಲ್ಲಿಯ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ‘ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.</p>.<p>‘ಕಸಾಪ ಕನ್ನಡಿಗರ ಹೆಮ್ಮೆಯ ಸಂಸ್ಕೃತಿ, ಕನ್ನಡ ಸಾಹಿತ್ಯದ ಪರಂಪರೆಯ ಸಾರ. ಕನ್ನಡ ಸಾಹಿತ್ಯವು ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಜೀವನ ಮೌಲ್ಯಗಳನ್ನು ಪ್ರತಿಬಿಂಬಿಸುವ ಶಕ್ತಿಯಾಗಿದೆ’ ಎಂದು ತಿಳಿಸಿದರು.</p>.<p>‘ಯುವ ಪೀಳಿಗೆ ಕನ್ನಡ ಸಾಹಿತ್ಯದತ್ತ ಹೆಚ್ಚು ಆಸಕ್ತಿ ತೋರಬೇಕು. ಕನ್ನಡ ಭಾಷೆ ಮತ್ತು ಸಾಹಿತ್ಯದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು’ ಎಂದು ಕರೆ ನೀಡಿದರು.</p>.<p>ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ಅಧ್ಯಕ್ಷ ಅರವಿಂದಕುಮಾರ ಮಾತನಾಡಿ, ‘ಕಸಾಪ ಸಾಹಿತಿಗಳನ್ನು ಪ್ರೋತ್ಸಾಹಿಸುವ ಜೊತೆಗೆ ಗ್ರಾಮೀಣ ಭಾಗಗಳಲ್ಲಿ ಕನ್ನಡ ಅಭಿಮಾನವನ್ನು ಬೆಳೆಸುವ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಸಾಪ ಅಧ್ಯಕ್ಷ ಶರಣಬಸಪ್ಪ ಯಾಳವಾರ ಮಾತನಾಡಿ, ‘ಕನ್ನಡ ಭಾಷೆಯು 2000 ವರ್ಷಗಳಿಗಿಂತಲೂ ಹೆಚ್ಚಿನ ಇತಿಹಾಸ ಹಾಗೂ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ’ ಎಂದರು.</p>.<p>ಸಾಹಿತಿ ಕನಕಪ್ಪ ವಾಗನಗೇರಿ ಅವರು ಕಸಾಪ ಸಂಸ್ಥಾಪನಾ ದಿನಾಚರಣೆಯ ಮಹತ್ವದ ಕುರಿತು ವಿಶೇಷ ಉಪನ್ಯಾಸ ನೀಡಿದರು.</p>.<p>ಪ್ರಮುಖರಾದ ರಾಮನಗೌಡ ಸುಬೇದಾರ್, ರಾಘವೇಂದ್ರ ಬಾಡಿಯಾಳ, ಯಲ್ಲಪ್ಪ ಹುಲಿಕಲ್, ಪ್ರಕಾಶ ಅಲಬನೂರ, ರಜಾಕ್ ಬಾಗವಾನ್, ಜಾವೇದ್ ಹುಸೇನ್ ಹವಲ್ದಾರ್, ಅನ್ವರ್ ಜಮಾದಾರ್, ರಾಘವೇಂದ್ರ ಭಕ್ರಿ, ಶರಣಬಸವ ಹೂಗಾರ ಸೇರಿ ಕನ್ನಡಾಭಿಮಾನಿಗಳು ಭಾಗವಹಿಸಿದ್ದರು.</p>.<p>ಶ್ರೀಶೈಲ ಯಂಕಂಚಿ ಸ್ವಾಗತಿಸಿದರು. ವೆಂಕಟೇಶ ಪಾಟೀಲ ನಿರೂಪಿಸಿದರು. ಸಾಹೇಬರೆಡ್ಡಿ ಇಟಗಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-30-2005025110</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>