<p>ಸುರಪುರ: ‘ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ಚೆನ್ನಾಗಿ ಓದಬೇಕು. ಈಗ ಕಷ್ಟಪಟ್ಟು ಓದಿ ಉತ್ತಮ ಅಂಕ ಪಡೆದರೆ ಭವಿಷ್ಯದಲ್ಲಿ ನೀವು ನೆಮ್ಮದಿಯ ಜೀವನ ನಡೆಸಬಹುದು’ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹೇಳಿದರು.</p>.<p>ತಮ್ಮ ಕಚೇರಿಯಲ್ಲಿ ಶನಿವಾರ ಸುರಪುರದ ಶರಣಬಸವ ವಸತಿ ಶಾಲೆ ಮತ್ತು ಶರಣಬಸವ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.</p>.<p>‘ಈ ಬಾರಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಜಿಲ್ಲೆಗೆ ಉತ್ತಮ ಎನ್ನಬಹುದಾದ ಫಲಿತಾಂಶ ಬಂದಿದೆ. ಮಕ್ಕಳು ಚೆನ್ನಾಗಿ ಅಭ್ಯಾಸ ಮಾಡಿದರೆ ಯುಪಿಎಸ್ಸಿ ಪರೀಕ್ಷೆಯಲ್ಲೂ ಯಶಸ್ಸು ಸಾಧಿಸಬಹುದು. ಜಿಲ್ಲೆಯ 4 ಜನ ಈ ಬಾರಿ ಯುಪಿಎಸ್ಸಿ ಪಾಸ್ ಮಾಡಿದ್ದು ಇದಕ್ಕೆ ನಿದರ್ಶನ’ ಎಂದರು.</p>.<p>ಎಸ್ಎಸ್ಎಲ್ಸಿಯಲ್ಲಿ ತಾಲ್ಲೂಕಿಗೆ ಟಾಪರ್ ಆಗಿರುವ ಸಮರ್ಥ ಮನೀಶಕುಮಾರ, ಮೋನಿಕಾ ಗಣೇಶ ಮತ್ತು ಪಿಯು ವಿಜ್ಞಾನದಲ್ಲಿ ಉತ್ತಮ ಅಂಕ ಪಡೆದಿರುವ ಶ್ವೇತಾ ಹನುಮಂತ, ವಾಣಿಜ್ಯ ವಿಭಾಗದ ಸೌಮ್ಯ ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು.</p>.<p>ಸಂಸ್ಥೆಯ ಜಂಟಿ ಕಾರ್ಯದರ್ಶಿ ದೊಡ್ಡಪ್ಪ ನಿಷ್ಠಿ, ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯ ಶರಣಬಸಪ್ಪ ಸಾಲಿ, ನಾನಾಗೌಡ ದೇಸಾಯಿ, ವಿವೇಕ ಗಂಜಿ, ರೇವಪ್ಪ ಪಾಟೀಲ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-30-1363134234</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುರಪುರ: ‘ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ಚೆನ್ನಾಗಿ ಓದಬೇಕು. ಈಗ ಕಷ್ಟಪಟ್ಟು ಓದಿ ಉತ್ತಮ ಅಂಕ ಪಡೆದರೆ ಭವಿಷ್ಯದಲ್ಲಿ ನೀವು ನೆಮ್ಮದಿಯ ಜೀವನ ನಡೆಸಬಹುದು’ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹೇಳಿದರು.</p>.<p>ತಮ್ಮ ಕಚೇರಿಯಲ್ಲಿ ಶನಿವಾರ ಸುರಪುರದ ಶರಣಬಸವ ವಸತಿ ಶಾಲೆ ಮತ್ತು ಶರಣಬಸವ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.</p>.<p>‘ಈ ಬಾರಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಜಿಲ್ಲೆಗೆ ಉತ್ತಮ ಎನ್ನಬಹುದಾದ ಫಲಿತಾಂಶ ಬಂದಿದೆ. ಮಕ್ಕಳು ಚೆನ್ನಾಗಿ ಅಭ್ಯಾಸ ಮಾಡಿದರೆ ಯುಪಿಎಸ್ಸಿ ಪರೀಕ್ಷೆಯಲ್ಲೂ ಯಶಸ್ಸು ಸಾಧಿಸಬಹುದು. ಜಿಲ್ಲೆಯ 4 ಜನ ಈ ಬಾರಿ ಯುಪಿಎಸ್ಸಿ ಪಾಸ್ ಮಾಡಿದ್ದು ಇದಕ್ಕೆ ನಿದರ್ಶನ’ ಎಂದರು.</p>.<p>ಎಸ್ಎಸ್ಎಲ್ಸಿಯಲ್ಲಿ ತಾಲ್ಲೂಕಿಗೆ ಟಾಪರ್ ಆಗಿರುವ ಸಮರ್ಥ ಮನೀಶಕುಮಾರ, ಮೋನಿಕಾ ಗಣೇಶ ಮತ್ತು ಪಿಯು ವಿಜ್ಞಾನದಲ್ಲಿ ಉತ್ತಮ ಅಂಕ ಪಡೆದಿರುವ ಶ್ವೇತಾ ಹನುಮಂತ, ವಾಣಿಜ್ಯ ವಿಭಾಗದ ಸೌಮ್ಯ ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು.</p>.<p>ಸಂಸ್ಥೆಯ ಜಂಟಿ ಕಾರ್ಯದರ್ಶಿ ದೊಡ್ಡಪ್ಪ ನಿಷ್ಠಿ, ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯ ಶರಣಬಸಪ್ಪ ಸಾಲಿ, ನಾನಾಗೌಡ ದೇಸಾಯಿ, ವಿವೇಕ ಗಂಜಿ, ರೇವಪ್ಪ ಪಾಟೀಲ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-30-1363134234</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>