<p>ತರೀಕೆರೆ: ತಾಲ್ಲೂಕಿನ ಬೆಟ್ಟದಹಳ್ಳಿಯ ಶ್ರೀ ಜಯಪ್ರಕಾಶ ನಾರಾಯಣ ಪ್ರೌಢಶಾಲೆಯಲ್ಲಿ ಈಚೆಗೆ ಶಾಲೆಯ ಹಿರಿಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಗುರುವಂದನಾ ಮತ್ತು ಸ್ನೇಹ ಸಂಗಮ ಕಾರ್ಯಕ್ರಮ ನಡೆಯಿತು.</p>.<p>ಶಾಲೆಯ ನಿವೃತ್ತ ಶಿಕ್ಷಕರು ಮತ್ತು ಸಿಬ್ಬಂದಿಯನ್ನು ಕುಂಭ ಮೆರವಣಿಗೆ ಹಾಗೂ ವಾದ್ಯಗೋಷ್ಠಿಗಳೊಂದಿಗೆ ಕರೆ ತರಲಾಯಿತು. ಹಳೆಯ ವಿದ್ಯಾರ್ಥಿಗಳು ಪುಷ್ಪಾರ್ಚನೆ ಮಾಡುವ ಮೂಲಕ ಗುರುಗಳಿಗೆ ಗೌರವ ಸಲ್ಲಿಸಿದರು.</p>.<p>ನಿವೃತ್ತ ಯೋಧ ಸೋಮಶೇಖರ್ ಕಾರ್ಯಕ್ರಮ ಉದ್ಘಾಟಿಸಿದರು. ಸಾಹಿತಿ ಚಟ್ನಳ್ಳಿ ಮಹೇಶ್ ಉಪನ್ಯಾಸ ನೀಡಿದರು. ಹುಲಿಕಲ್ ನಟರಾಜ್ ಅವರು ಮೂಢನಂಬಿಕೆಗಳ ಬಗ್ಗೆ ಜಾಗೃತಿ ಮೂಡಿಸಿದರು.</p>.<p>ಗೀತಗಾಯನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಹಳೆಯ ವಿದ್ಯಾರ್ಥಿಗಳ ಮಕ್ಕಳು ಪ್ರದರ್ಶಿಸಿದ ಭರತನಾಟ್ಯ ವಿಶೇಷ ಆಕರ್ಷಣೆಯಾಗಿತ್ತು.</p>.<p>ಗೌರವ ಸ್ವೀಕರಿಸಿದ ಶಿಕ್ಷಕರು ಅನುಭವ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘವನ್ನು ಉದ್ಘಾಟಿಸಲಾಯಿತು. ಆಡಳಿತ ಮಂಡಳಿಯ ಕಾರ್ಯದರ್ಶಿ ರವಿಕುಮಾರ್, ಡಾ.ಗಿರೀಶ್, ಡಾ. ಸಂತೋಷ್, ಮುಖ್ಯಶಿಕ್ಷಕಿ ಹೇಮಾವತಿ ನೀಲಕಂಠಪ್ಪ, ಶಿಕ್ಷಕರಾದ ಎಚ್.ಆರ್.ಪ್ರಕಾಶ್, ಎಚ್.ಡಿ. ಪ್ರಕಾಶ್, ಓಂಕಾರಪ್ಪ, ಎಚ್.ಜಿ. ಮಲ್ಲೇಶಪ್ಪ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-126-598830869</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತರೀಕೆರೆ: ತಾಲ್ಲೂಕಿನ ಬೆಟ್ಟದಹಳ್ಳಿಯ ಶ್ರೀ ಜಯಪ್ರಕಾಶ ನಾರಾಯಣ ಪ್ರೌಢಶಾಲೆಯಲ್ಲಿ ಈಚೆಗೆ ಶಾಲೆಯ ಹಿರಿಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಗುರುವಂದನಾ ಮತ್ತು ಸ್ನೇಹ ಸಂಗಮ ಕಾರ್ಯಕ್ರಮ ನಡೆಯಿತು.</p>.<p>ಶಾಲೆಯ ನಿವೃತ್ತ ಶಿಕ್ಷಕರು ಮತ್ತು ಸಿಬ್ಬಂದಿಯನ್ನು ಕುಂಭ ಮೆರವಣಿಗೆ ಹಾಗೂ ವಾದ್ಯಗೋಷ್ಠಿಗಳೊಂದಿಗೆ ಕರೆ ತರಲಾಯಿತು. ಹಳೆಯ ವಿದ್ಯಾರ್ಥಿಗಳು ಪುಷ್ಪಾರ್ಚನೆ ಮಾಡುವ ಮೂಲಕ ಗುರುಗಳಿಗೆ ಗೌರವ ಸಲ್ಲಿಸಿದರು.</p>.<p>ನಿವೃತ್ತ ಯೋಧ ಸೋಮಶೇಖರ್ ಕಾರ್ಯಕ್ರಮ ಉದ್ಘಾಟಿಸಿದರು. ಸಾಹಿತಿ ಚಟ್ನಳ್ಳಿ ಮಹೇಶ್ ಉಪನ್ಯಾಸ ನೀಡಿದರು. ಹುಲಿಕಲ್ ನಟರಾಜ್ ಅವರು ಮೂಢನಂಬಿಕೆಗಳ ಬಗ್ಗೆ ಜಾಗೃತಿ ಮೂಡಿಸಿದರು.</p>.<p>ಗೀತಗಾಯನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಹಳೆಯ ವಿದ್ಯಾರ್ಥಿಗಳ ಮಕ್ಕಳು ಪ್ರದರ್ಶಿಸಿದ ಭರತನಾಟ್ಯ ವಿಶೇಷ ಆಕರ್ಷಣೆಯಾಗಿತ್ತು.</p>.<p>ಗೌರವ ಸ್ವೀಕರಿಸಿದ ಶಿಕ್ಷಕರು ಅನುಭವ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘವನ್ನು ಉದ್ಘಾಟಿಸಲಾಯಿತು. ಆಡಳಿತ ಮಂಡಳಿಯ ಕಾರ್ಯದರ್ಶಿ ರವಿಕುಮಾರ್, ಡಾ.ಗಿರೀಶ್, ಡಾ. ಸಂತೋಷ್, ಮುಖ್ಯಶಿಕ್ಷಕಿ ಹೇಮಾವತಿ ನೀಲಕಂಠಪ್ಪ, ಶಿಕ್ಷಕರಾದ ಎಚ್.ಆರ್.ಪ್ರಕಾಶ್, ಎಚ್.ಡಿ. ಪ್ರಕಾಶ್, ಓಂಕಾರಪ್ಪ, ಎಚ್.ಜಿ. ಮಲ್ಲೇಶಪ್ಪ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-126-598830869</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>