<p>ತರೀಕೆರೆ: ‘ವಿದ್ಯಾರ್ಥಿಗಳು ತಾವೇ ತಮ್ಮ ಜೀವನದ ಶಿಲ್ಪಿಗಳಾಗಬೇಕು’ ಎಂದು ಲಿಂಗದಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಜಯಪ್ಪ ಸಿ.ಆರ್. ಹೇಳಿದರು.</p>.<p>ಪಟ್ಟಣದ ಎಸ್.ಜೆ.ಎಂ. ಪ್ರಥಮ ದರ್ಜೆ ಕಾಲೇಜಿನಲ್ಲಿ 2025– 26ನೇ ಶೈಕ್ಷಣಿಕ ಸಾಲಿನ ಕ್ರೀಡೆ, ಎನ್.ಎಸ್.ಎಸ್, ಯುವ ರೆಡ್ಕ್ರಾಸ್, ಸಾಂಸ್ಕೃತಿಕ ಹಾಗೂ ವಿದ್ಯಾರ್ಥಿ ಒಕ್ಕೂಟ ಚಟುವಟಿಕೆಗಳ ಸಮಾರೋಪ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ವಿದ್ಯಾರ್ಥಿಗಳ ಸಮಯ ವ್ಯರ್ಥವಾಗುತ್ತಿದೆ. ವಿದ್ಯಾರ್ಥಿ ದಿಸೆಯಲ್ಲಿಯೇ ಸಮಯದ ಮಹತ್ವ ಅರಿತುಕೊಳ್ಳಬೇಕು. ನಿಮ್ಮನ್ನು ಮುನ್ನಡೆಸುವ ಶಕ್ತಿ ನಿಮ್ಮಲ್ಲೇ ಇರುವುದರಿಂದ ಸಮಯ ವ್ಯರ್ಥ ಮಾಡದೆ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದರು.</p>.<p>ಮಾನಸ ಪದವಿಪೂರ್ವ ಕಾಲೇಜಿನ ಉದಯಶಂಕರ್ ಎಲ್.ಜಿ. ಮಾತನಾಡಿ, ‘ವಿದ್ಯಾರ್ಥಿ ದಿಸೆಯಲ್ಲಿಯೇ ಉತ್ತಮ ಸ್ನೇಹಿತರನ್ನು ಸಂಪಾದಿಸಿಕೊಳ್ಳಬೇಕು. ಓದಿದ ಕಾಲೇಜಿನ ಬಗ್ಗೆ ಅಭಿಮಾನ ಹೊಂದಿ ಶ್ರದ್ಧೆಯಿಂದ ಕಲಿಯಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈಗಿನಿಂದಲೇ ಸಿದ್ಧತೆ ನಡೆಸಬೇಕು’ ಎಂದರು.</p>.<p>ಎಸ್.ಜೆ.ಎಂ. ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧರ್ಮರಾಜ್ ಟಿ.ಎಸ್. ಮಾತನಾಡಿ, ‘ಸರಳ ಜೀವನ, ಉತ್ತಮ ಆಹಾರ, ಯೋಗ ಮತ್ತು ಪ್ರಾಣಾಯಾಮವನ್ನು ದಿನಚರಿಯಲ್ಲಿ ಅಳವಡಿಸಿಕೊಳ್ಳಬೇಕು. ತಂದೆ-ತಾಯಿಯನ್ನು ಗೌರವದಿಂದ ನೋಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕಾಲೇಜಿನ ಪ್ರಾಚಾರ್ಯ ಕೆ.ಜಿ. ಚವ್ಹಾಣ್ ಮಾತನಾಡಿದರು. ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಶಿವರಾಜಕುಮಾರ ಕೆ. ವರದಿ ಮಂಡಿಸಿದರು. ಐಕ್ಯುಎಸಿ ಸಂಯೋಜಕ ಸದಾಶಿವನಾಯ್ಕ ಎ. ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಬಹುಮಾನ ವಿತರಿಸಿದರು.</p>.<p>2024– 25ನೇ ಶೈಕ್ಷಣಿಕ ಸಾಲಿನಲ್ಲಿ ಹೆಚ್ಚು ಅಂಕ ಗಳಿಸಿದ ಬಿ.ಎ. ವಿಭಾಗದ ಶಾರೂನ್ ಫರ್ನಾಂಡಿಸ್ ಹಾಗೂ ಬಿ.ಕಾಂ. ವಿಭಾಗದ ಇಂದುಶ್ರೀ ಅವರಿಗೆ ದತ್ತಿ ನಿಧಿ ಪುರಸ್ಕಾರದ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.</p>.<p>ಅನುಷ ಜೆ.ಪಿ., ಸುವರ್ಣ ಎನ್., ಸಹನಾ ಕೆ., ಉಮ್ಮೆರುಖಯ್ಯಾ, ಸಿಬ್ಬಂದಿ, ವಿದ್ಯಾರ್ಥಿ ಒಕ್ಕೂಟದ ಪದಾಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-126-138268272</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತರೀಕೆರೆ: ‘ವಿದ್ಯಾರ್ಥಿಗಳು ತಾವೇ ತಮ್ಮ ಜೀವನದ ಶಿಲ್ಪಿಗಳಾಗಬೇಕು’ ಎಂದು ಲಿಂಗದಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಜಯಪ್ಪ ಸಿ.ಆರ್. ಹೇಳಿದರು.</p>.<p>ಪಟ್ಟಣದ ಎಸ್.ಜೆ.ಎಂ. ಪ್ರಥಮ ದರ್ಜೆ ಕಾಲೇಜಿನಲ್ಲಿ 2025– 26ನೇ ಶೈಕ್ಷಣಿಕ ಸಾಲಿನ ಕ್ರೀಡೆ, ಎನ್.ಎಸ್.ಎಸ್, ಯುವ ರೆಡ್ಕ್ರಾಸ್, ಸಾಂಸ್ಕೃತಿಕ ಹಾಗೂ ವಿದ್ಯಾರ್ಥಿ ಒಕ್ಕೂಟ ಚಟುವಟಿಕೆಗಳ ಸಮಾರೋಪ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ವಿದ್ಯಾರ್ಥಿಗಳ ಸಮಯ ವ್ಯರ್ಥವಾಗುತ್ತಿದೆ. ವಿದ್ಯಾರ್ಥಿ ದಿಸೆಯಲ್ಲಿಯೇ ಸಮಯದ ಮಹತ್ವ ಅರಿತುಕೊಳ್ಳಬೇಕು. ನಿಮ್ಮನ್ನು ಮುನ್ನಡೆಸುವ ಶಕ್ತಿ ನಿಮ್ಮಲ್ಲೇ ಇರುವುದರಿಂದ ಸಮಯ ವ್ಯರ್ಥ ಮಾಡದೆ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದರು.</p>.<p>ಮಾನಸ ಪದವಿಪೂರ್ವ ಕಾಲೇಜಿನ ಉದಯಶಂಕರ್ ಎಲ್.ಜಿ. ಮಾತನಾಡಿ, ‘ವಿದ್ಯಾರ್ಥಿ ದಿಸೆಯಲ್ಲಿಯೇ ಉತ್ತಮ ಸ್ನೇಹಿತರನ್ನು ಸಂಪಾದಿಸಿಕೊಳ್ಳಬೇಕು. ಓದಿದ ಕಾಲೇಜಿನ ಬಗ್ಗೆ ಅಭಿಮಾನ ಹೊಂದಿ ಶ್ರದ್ಧೆಯಿಂದ ಕಲಿಯಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈಗಿನಿಂದಲೇ ಸಿದ್ಧತೆ ನಡೆಸಬೇಕು’ ಎಂದರು.</p>.<p>ಎಸ್.ಜೆ.ಎಂ. ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧರ್ಮರಾಜ್ ಟಿ.ಎಸ್. ಮಾತನಾಡಿ, ‘ಸರಳ ಜೀವನ, ಉತ್ತಮ ಆಹಾರ, ಯೋಗ ಮತ್ತು ಪ್ರಾಣಾಯಾಮವನ್ನು ದಿನಚರಿಯಲ್ಲಿ ಅಳವಡಿಸಿಕೊಳ್ಳಬೇಕು. ತಂದೆ-ತಾಯಿಯನ್ನು ಗೌರವದಿಂದ ನೋಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕಾಲೇಜಿನ ಪ್ರಾಚಾರ್ಯ ಕೆ.ಜಿ. ಚವ್ಹಾಣ್ ಮಾತನಾಡಿದರು. ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಶಿವರಾಜಕುಮಾರ ಕೆ. ವರದಿ ಮಂಡಿಸಿದರು. ಐಕ್ಯುಎಸಿ ಸಂಯೋಜಕ ಸದಾಶಿವನಾಯ್ಕ ಎ. ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಬಹುಮಾನ ವಿತರಿಸಿದರು.</p>.<p>2024– 25ನೇ ಶೈಕ್ಷಣಿಕ ಸಾಲಿನಲ್ಲಿ ಹೆಚ್ಚು ಅಂಕ ಗಳಿಸಿದ ಬಿ.ಎ. ವಿಭಾಗದ ಶಾರೂನ್ ಫರ್ನಾಂಡಿಸ್ ಹಾಗೂ ಬಿ.ಕಾಂ. ವಿಭಾಗದ ಇಂದುಶ್ರೀ ಅವರಿಗೆ ದತ್ತಿ ನಿಧಿ ಪುರಸ್ಕಾರದ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.</p>.<p>ಅನುಷ ಜೆ.ಪಿ., ಸುವರ್ಣ ಎನ್., ಸಹನಾ ಕೆ., ಉಮ್ಮೆರುಖಯ್ಯಾ, ಸಿಬ್ಬಂದಿ, ವಿದ್ಯಾರ್ಥಿ ಒಕ್ಕೂಟದ ಪದಾಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-126-138268272</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>