‘ಅಧಿಕಾರಿಗಳಿಗೆ ಸಾಮಾಜಿಕ ಜವಾಬ್ದಾರಿ ಇಲ್ಲದಿದ್ದರೆ ಹೀಗಾಗುತ್ತದೆ. 30ಕ್ಕೂ ಅಧಿಕ ಶಾಲೆಗಳಿಗೆ ಭೇಟಿ ನೀಡಿ ಈ ಬಗ್ಗೆ ಶಿಕ್ಷಕರಿಗೆ ತಿಳಿಸಿದ್ದೇವೆ. ಆದರೆ, ಶಿಕ್ಷಕರು ಏನೂ ಮಾಡುವಂತಿಲ್ಲ. ಪರೀಕ್ಷಾ ಮಂಡಳಿ, ಪಠ್ಯಪುಸ್ತಕ ಪರಿಷ್ಕರಣೆ ಮಂಡಳಿ ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಈ ಅಧಿಕಾರಿಗಳಿಗೆ ಸರಿಯಾದ ಸೂಚನೆಯನ್ನು ಶಿಕ್ಷಣ ಸಚಿವರು ನೀಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.