<p>ತೇರದಾಳ: ಶಿಕ್ಷಣ ಇಂದು ಜಾಗತಿಕ ಮಟ್ಟದಲ್ಲಿ ತನ್ನದೆಯಾದ ಮಹತ್ವ ಪಡೆದುಕೊಳ್ಳುತ್ತಿದೆ. ಬದುಕಿನ ನೆಲೆಗೆ ಶಿಕ್ಷಣವೇ ಮೂಲ ಅಸ್ತ್ರವಾಗಿದೆ. ಆದ್ದರಿಂದ ರೈತರ ಮಕ್ಕಳೂ ಕೂಡ ಉನ್ನತ ಪಡೆಯುವಂತಾಗಲಿ ಎಂದು ಅವಳಿ ಜಿಲ್ಲಾ ಕೆಎಂಎಫ್ ನಿರ್ದೇಶಕ ಲಕ್ಕಪ್ಪ ಪಾಟೀಲ ಹೇಳಿದರು.</p>.<p>ತೇರದಾಳ ತಾಲ್ಲೂಕಿನಾದ್ಯಂತ ರೈತ ಕಲ್ಯಾಣ ಸಂಘ ಯೋಜನೆಯಡಿ ಹಾಲು ಉತ್ಪಾದಕರ ಸಂಘ ಮಕ್ಕಳಿಗೆ ಈಚೆಗೆ ಪಟ್ಟಣದಲ್ಲಿ ಕೆಎಂಎಫ್ನಿಂದ ಶಿಷ್ಯ ವೇತನ ಹಾಗೂ ಮರಣ ಹೊಂದಿದ ಸಂಘದ ಸದಸ್ಯರ ವಾರಸುದಾರರಿಗೆ ಸಹಾಯ ಧನ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕೆಎಂಎಫ್ ಸಂಸ್ಥೆಯಿಂದ ರೈತರ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳಿವೆ. ಮೇಲಿಂದ ಮೇಲೆ ಅಧಿಕಾರಿಗಳನ್ನು ಸಂಪರ್ಕಿಸುವ ಮೂಲಕ ಯೋಜನೆಗಳ ಲಾಭ ಪಡೆದುಕೊಳ್ಳುವಂತೆ ಸಲಹೆ ನೀಡಿದರು.</p>.<p>ಒಕ್ಕೂಟದ ಅಧಿಕಾರಿ ಎಸ್.ಎಸ್. ಅಥಣಿ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಸಹಾಯಕ ವ್ಯವಸ್ಥಾಪಕರಾದ ಸಂಗೀತಾ ಬೆಂಡೆ, ಪರಮೇಶ ಜಾಧವ, ಶ್ರೀದೇವಿ ಆದಬಸವ್ವಗೋಳ, ಜಬೀನಾ ಲಾಡಖಾನ್ ಹಾಗೂ ವಿಸ್ತರಣಾಧಿಕಾರಿಗಳು ಸಂಘಗಳ ಕಾರ್ಯದರ್ಶಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-19-649295021</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೇರದಾಳ: ಶಿಕ್ಷಣ ಇಂದು ಜಾಗತಿಕ ಮಟ್ಟದಲ್ಲಿ ತನ್ನದೆಯಾದ ಮಹತ್ವ ಪಡೆದುಕೊಳ್ಳುತ್ತಿದೆ. ಬದುಕಿನ ನೆಲೆಗೆ ಶಿಕ್ಷಣವೇ ಮೂಲ ಅಸ್ತ್ರವಾಗಿದೆ. ಆದ್ದರಿಂದ ರೈತರ ಮಕ್ಕಳೂ ಕೂಡ ಉನ್ನತ ಪಡೆಯುವಂತಾಗಲಿ ಎಂದು ಅವಳಿ ಜಿಲ್ಲಾ ಕೆಎಂಎಫ್ ನಿರ್ದೇಶಕ ಲಕ್ಕಪ್ಪ ಪಾಟೀಲ ಹೇಳಿದರು.</p>.<p>ತೇರದಾಳ ತಾಲ್ಲೂಕಿನಾದ್ಯಂತ ರೈತ ಕಲ್ಯಾಣ ಸಂಘ ಯೋಜನೆಯಡಿ ಹಾಲು ಉತ್ಪಾದಕರ ಸಂಘ ಮಕ್ಕಳಿಗೆ ಈಚೆಗೆ ಪಟ್ಟಣದಲ್ಲಿ ಕೆಎಂಎಫ್ನಿಂದ ಶಿಷ್ಯ ವೇತನ ಹಾಗೂ ಮರಣ ಹೊಂದಿದ ಸಂಘದ ಸದಸ್ಯರ ವಾರಸುದಾರರಿಗೆ ಸಹಾಯ ಧನ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕೆಎಂಎಫ್ ಸಂಸ್ಥೆಯಿಂದ ರೈತರ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳಿವೆ. ಮೇಲಿಂದ ಮೇಲೆ ಅಧಿಕಾರಿಗಳನ್ನು ಸಂಪರ್ಕಿಸುವ ಮೂಲಕ ಯೋಜನೆಗಳ ಲಾಭ ಪಡೆದುಕೊಳ್ಳುವಂತೆ ಸಲಹೆ ನೀಡಿದರು.</p>.<p>ಒಕ್ಕೂಟದ ಅಧಿಕಾರಿ ಎಸ್.ಎಸ್. ಅಥಣಿ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಸಹಾಯಕ ವ್ಯವಸ್ಥಾಪಕರಾದ ಸಂಗೀತಾ ಬೆಂಡೆ, ಪರಮೇಶ ಜಾಧವ, ಶ್ರೀದೇವಿ ಆದಬಸವ್ವಗೋಳ, ಜಬೀನಾ ಲಾಡಖಾನ್ ಹಾಗೂ ವಿಸ್ತರಣಾಧಿಕಾರಿಗಳು ಸಂಘಗಳ ಕಾರ್ಯದರ್ಶಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-19-649295021</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>