<p>ತಿಪಟೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ತುಮಕೂರು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಕ್ರೀಡೆ ಸಾಂಸ್ಕೃತಿಕ, ಎನ್ಎಸ್ಎಸ್, ಎನ್ಸಿಸಿ, ಯುವ ರೆಡ್ಕ್ರಾಸ್ ಇನ್ನಿತರ ಚಟುವಟಿಕೆಗಳ ಸಮಾರೋಪ ಸಮಾರಂಭ ನಡೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಎಸ್ವಿಪಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್. ರೇಣುಕಯ್ಯ, ಯುವಶಕ್ತಿ ಪ್ರವಾಹ ಇದ್ದಂತೆ. ದೇಶದ ಯುವಶಕ್ತಿಯನ್ನು ವ್ಯರ್ಥ ಮಾಡಬಾರದು, ಸದ್ಭಳಕೆ ಮಾಡಿಕೊಳ್ಳಬೇಕು ಎಂಬ ಸದುದ್ದೇಶದಿಂದ ಮಹಾತ್ಮ ಗಾಂಧೀಜಿ ಎನ್ಎಸ್ಎಸ್ ಪ್ರಾರಂಭಿಸಿದ್ದರು ಎಂದು ಹೇಳಿದರು.</p>.<p>ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಜ್ಯದಲ್ಲಿ ಅತಿ ದೊಡ್ಡ ಪದವಿ ಕಾಲೇಜಾಗಿ ಹೊರಹೊಮ್ಮಿದೆ. ಪ್ರತಿವರ್ಷ ವಿದ್ಯಾರ್ಥಿಗಳ ಸಂಖ್ಯೆ 3ರಿಂದ 4ಸಾವಿರ ಇದ್ದು, ರಾಜ್ಯದಲ್ಲಿಯೇ ದಾಖಲೆ ಪ್ರವೇಶಾತಿ ಪಡೆದ ಹೆಗ್ಗಳಿಗೆ ಹೊಂದಿದೆ ಎಂದರು.</p>.<p>ಸಾಹಿತಿ ಚಿಕ್ಕಮಗಳೂರಿನ ಚಟ್ನಳ್ಳಿ ಮಹೇಶ್ ಮಾತನಾಡಿ, ಯುವಶಕ್ತಿಗೆ ಸರಿಯಾದ ದಾರಿಯಲ್ಲಿ ನಡೆಯುವ ಮಾರ್ಗದರ್ಶನ ಅವಶ್ಯಕ. ಇಲ್ಲವಾದರೆ ಸಮಾಜಕ್ಕೆ ದುಸ್ವಪ್ನವಾಗುತ್ತದೆ. ಶಿಕ್ಷಣದ ಜೊತೆ ಸಾಹಿತ್ಯ ಓದಬೇಕು. ಕನಿಷ್ಠ ದಿನದ ಅರ್ಧ ಗಂಟೆಯಾದರೂ ಪಠ್ಯೇತರ ಸಾಹಿತ್ಯ ಓದಬೇಕು ಎಂದು ಸಲಹೆ ನೀಡಿದರು.</p>.<p>ಪ್ರಾಂಶುಪಾಲ ಶಶಿಕುಮಾರ್ ಎಚ್.ಸಿ., ಉಪನ್ಯಾಸಕರಾದ ಸ್ಮಿತಾ ಎಚ್.ಎಸ್., ಭಾವನ, ಸುಭದ್ರಮ್ಮ, ಸಯ್ಯದ್ ಪಾಷ ಉಪಸ್ಥಿತರಿದ್ದರು. ತೇಜಸ್ವಿನಿ ಜಿ.ಎಂ., ಮೋಹನ್ಕುಮಾರ್ ನಿರೂಪಿಸಿ, ಅನುಪ್ರಸಾದ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-17-1542505014</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಪಟೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ತುಮಕೂರು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಕ್ರೀಡೆ ಸಾಂಸ್ಕೃತಿಕ, ಎನ್ಎಸ್ಎಸ್, ಎನ್ಸಿಸಿ, ಯುವ ರೆಡ್ಕ್ರಾಸ್ ಇನ್ನಿತರ ಚಟುವಟಿಕೆಗಳ ಸಮಾರೋಪ ಸಮಾರಂಭ ನಡೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಎಸ್ವಿಪಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್. ರೇಣುಕಯ್ಯ, ಯುವಶಕ್ತಿ ಪ್ರವಾಹ ಇದ್ದಂತೆ. ದೇಶದ ಯುವಶಕ್ತಿಯನ್ನು ವ್ಯರ್ಥ ಮಾಡಬಾರದು, ಸದ್ಭಳಕೆ ಮಾಡಿಕೊಳ್ಳಬೇಕು ಎಂಬ ಸದುದ್ದೇಶದಿಂದ ಮಹಾತ್ಮ ಗಾಂಧೀಜಿ ಎನ್ಎಸ್ಎಸ್ ಪ್ರಾರಂಭಿಸಿದ್ದರು ಎಂದು ಹೇಳಿದರು.</p>.<p>ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಜ್ಯದಲ್ಲಿ ಅತಿ ದೊಡ್ಡ ಪದವಿ ಕಾಲೇಜಾಗಿ ಹೊರಹೊಮ್ಮಿದೆ. ಪ್ರತಿವರ್ಷ ವಿದ್ಯಾರ್ಥಿಗಳ ಸಂಖ್ಯೆ 3ರಿಂದ 4ಸಾವಿರ ಇದ್ದು, ರಾಜ್ಯದಲ್ಲಿಯೇ ದಾಖಲೆ ಪ್ರವೇಶಾತಿ ಪಡೆದ ಹೆಗ್ಗಳಿಗೆ ಹೊಂದಿದೆ ಎಂದರು.</p>.<p>ಸಾಹಿತಿ ಚಿಕ್ಕಮಗಳೂರಿನ ಚಟ್ನಳ್ಳಿ ಮಹೇಶ್ ಮಾತನಾಡಿ, ಯುವಶಕ್ತಿಗೆ ಸರಿಯಾದ ದಾರಿಯಲ್ಲಿ ನಡೆಯುವ ಮಾರ್ಗದರ್ಶನ ಅವಶ್ಯಕ. ಇಲ್ಲವಾದರೆ ಸಮಾಜಕ್ಕೆ ದುಸ್ವಪ್ನವಾಗುತ್ತದೆ. ಶಿಕ್ಷಣದ ಜೊತೆ ಸಾಹಿತ್ಯ ಓದಬೇಕು. ಕನಿಷ್ಠ ದಿನದ ಅರ್ಧ ಗಂಟೆಯಾದರೂ ಪಠ್ಯೇತರ ಸಾಹಿತ್ಯ ಓದಬೇಕು ಎಂದು ಸಲಹೆ ನೀಡಿದರು.</p>.<p>ಪ್ರಾಂಶುಪಾಲ ಶಶಿಕುಮಾರ್ ಎಚ್.ಸಿ., ಉಪನ್ಯಾಸಕರಾದ ಸ್ಮಿತಾ ಎಚ್.ಎಸ್., ಭಾವನ, ಸುಭದ್ರಮ್ಮ, ಸಯ್ಯದ್ ಪಾಷ ಉಪಸ್ಥಿತರಿದ್ದರು. ತೇಜಸ್ವಿನಿ ಜಿ.ಎಂ., ಮೋಹನ್ಕುಮಾರ್ ನಿರೂಪಿಸಿ, ಅನುಪ್ರಸಾದ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-17-1542505014</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>