<p>ತುಮಕೂರು: ರಾಷ್ಟ್ರೀಯ ಮಾದಿಗ ಪ್ರಚಾರಾಂದೋಲನ ಸಮಿತಿಯಿಂದ ಜಿಲ್ಲೆಯ ಮಾದಿಗ ಜನಾಂಗದ ಪ್ರಸ್ತುತ ಸಾಮಾಜಿಕ ಪರಿಸ್ಥಿತಿ ಕುರಿತು ಸಮಾಲೋಚನಾ ಸಭೆ ನಗರದಲ್ಲಿ ಭಾನುವಾರ ನಡೆಯಿತು.</p>.<p>ಮಾದಿಗ ಜನಾಂಗದ ಶ್ರೇಯೋಭಿವೃದ್ಧಿ ಒಳ ಗೊಂಡಿರುವ ಕರಪತ್ರವನ್ನು ಸಮುದಾ ಯದ ಪ್ರಮುಖರು ಬಿಡುಗಡೆ ಮಾಡಿದರು.</p>.<p>ಪರಿಶಿಷ್ಟರ ಜಾತಿ ನಿಂದನೆ ತಡೆ ಮೇಲುಸ್ತುವಾರಿ ಸಮಿತಿ ಮಾಜಿ ಸದಸ್ಯ ಎ.ನರಸಿಂಹಮೂರ್ತಿ, ‘ಜಿಲ್ಲೆಯಲ್ಲಿರುವ ಮಾದಿಗ ಜನಾಂಗದ ಕುಲಮೂಲಗಳ ಅಧ್ಯಯನವನ್ನು ತುಮಕೂರು ವಿಶ್ವವಿದ್ಯಾಲಯದ ಬಾಬೂ ಜನಜೀವನರಾಮ್ ಅಧ್ಯಯನ ಕೇಂದ್ರದಿಂದ ಕೈಗೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಜಿಲ್ಲೆಯಲ್ಲಿ ಮಾದಿಗರ ಮೇಲಿನ ಜಾತಿ ಆಧಾರಿತ ದೌರ್ಜನ್ಯಗಳು ಹೆಚ್ಚುತ್ತಲೇ ಇವೆ. ನಗರ ಪ್ರದೇಶದ 5 ಮಾದಿಗರ ಕಾಲೊನಿಗಳಲ್ಲಿ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಕಲಿಕಾ ಕೇಂದ್ರ ಪ್ರಾರಂಭಿಸುವ ಮೂಲಕ ಶಾಲೆಯಿಂದ ಹೊರಗುಳಿಯುತ್ತಿರುವ ಮಕ್ಕಳ ಪ್ರಮಾಣ ಕಡಿಮೆ ಮಾಡಬೇಕಿದೆ. ನಗರ ಪ್ರದೇಶದಲ್ಲಿ ಮಾದಿಗ ಸಮುದಾಯದ ಮಹಿಳೆಯರು ಅನುಭವಿಸುತ್ತಿರುವ ಸಮಸ್ಯೆಗಳ ಮೇಲೆ ಗಮನಹರಿಸಬೇಕಿದೆ ಎಂದು ಹೇಳಿದರು.</p>.<p>ಮುಖಂಡ ಗೋಪಾಲ್, ‘ಒಳಮೀಸಲಾತಿ ಸೌಲಭ್ಯ ಪಡೆದುಕೊಳ್ಳಲು ತಮ್ಮ ಮೂಲ ಜಾತಿಗಳ ಹೆಸರಿನಲ್ಲೇ ಪ್ರಮಾಣಪತ್ರ ಪಡೆದುಕೊಳ್ಳಬೇಕು’ ಎಂದರು.</p>.<p>ಜಿಲ್ಲಾ ಸಫಾಯಿ ಕರ್ಮಚಾರಿಗಳ ಕಾವಲು ಸಮಿತಿಯ ಸಿದ್ಧಲಿಂಗಯ್ಯ, ‘ಜಾತಿ ನಿಂದನೆಯಾದ ಸಂದರ್ಭದಲ್ಲಿ ಪರಿಣಾಮಕಾರಿಯಾಗಿ ಪ್ರಕರಣ ದಾಖಲಿಸುವ ಬಗ್ಗೆ ತರಬೇತಿ ನೀಡಬೇಕಿದೆ’ ಎಂದರು.</p>.<p>ಸಮಿತಿ ಕಾರ್ಯದರ್ಶಿ ತೇಜಸ್ ಕುಮಾರ್, ಸಂಘಟನಾ ಕಾರ್ಯದರ್ಶಿ ಮನೋಜ್ ಕುಮಾರ್, ಪ್ರಮುಖರಾದ ಅನುಪಮ, ಕಿಶೋರ್, ನಿಖಿಲ್ ಮೋಹನ್, ಕೆಂಪರಾಜು, ಆಕಾಶ್, ಚಿಕ್ಕಓಬಳಯ್ಯ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-17-457220520</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ರಾಷ್ಟ್ರೀಯ ಮಾದಿಗ ಪ್ರಚಾರಾಂದೋಲನ ಸಮಿತಿಯಿಂದ ಜಿಲ್ಲೆಯ ಮಾದಿಗ ಜನಾಂಗದ ಪ್ರಸ್ತುತ ಸಾಮಾಜಿಕ ಪರಿಸ್ಥಿತಿ ಕುರಿತು ಸಮಾಲೋಚನಾ ಸಭೆ ನಗರದಲ್ಲಿ ಭಾನುವಾರ ನಡೆಯಿತು.</p>.<p>ಮಾದಿಗ ಜನಾಂಗದ ಶ್ರೇಯೋಭಿವೃದ್ಧಿ ಒಳ ಗೊಂಡಿರುವ ಕರಪತ್ರವನ್ನು ಸಮುದಾ ಯದ ಪ್ರಮುಖರು ಬಿಡುಗಡೆ ಮಾಡಿದರು.</p>.<p>ಪರಿಶಿಷ್ಟರ ಜಾತಿ ನಿಂದನೆ ತಡೆ ಮೇಲುಸ್ತುವಾರಿ ಸಮಿತಿ ಮಾಜಿ ಸದಸ್ಯ ಎ.ನರಸಿಂಹಮೂರ್ತಿ, ‘ಜಿಲ್ಲೆಯಲ್ಲಿರುವ ಮಾದಿಗ ಜನಾಂಗದ ಕುಲಮೂಲಗಳ ಅಧ್ಯಯನವನ್ನು ತುಮಕೂರು ವಿಶ್ವವಿದ್ಯಾಲಯದ ಬಾಬೂ ಜನಜೀವನರಾಮ್ ಅಧ್ಯಯನ ಕೇಂದ್ರದಿಂದ ಕೈಗೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಜಿಲ್ಲೆಯಲ್ಲಿ ಮಾದಿಗರ ಮೇಲಿನ ಜಾತಿ ಆಧಾರಿತ ದೌರ್ಜನ್ಯಗಳು ಹೆಚ್ಚುತ್ತಲೇ ಇವೆ. ನಗರ ಪ್ರದೇಶದ 5 ಮಾದಿಗರ ಕಾಲೊನಿಗಳಲ್ಲಿ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಕಲಿಕಾ ಕೇಂದ್ರ ಪ್ರಾರಂಭಿಸುವ ಮೂಲಕ ಶಾಲೆಯಿಂದ ಹೊರಗುಳಿಯುತ್ತಿರುವ ಮಕ್ಕಳ ಪ್ರಮಾಣ ಕಡಿಮೆ ಮಾಡಬೇಕಿದೆ. ನಗರ ಪ್ರದೇಶದಲ್ಲಿ ಮಾದಿಗ ಸಮುದಾಯದ ಮಹಿಳೆಯರು ಅನುಭವಿಸುತ್ತಿರುವ ಸಮಸ್ಯೆಗಳ ಮೇಲೆ ಗಮನಹರಿಸಬೇಕಿದೆ ಎಂದು ಹೇಳಿದರು.</p>.<p>ಮುಖಂಡ ಗೋಪಾಲ್, ‘ಒಳಮೀಸಲಾತಿ ಸೌಲಭ್ಯ ಪಡೆದುಕೊಳ್ಳಲು ತಮ್ಮ ಮೂಲ ಜಾತಿಗಳ ಹೆಸರಿನಲ್ಲೇ ಪ್ರಮಾಣಪತ್ರ ಪಡೆದುಕೊಳ್ಳಬೇಕು’ ಎಂದರು.</p>.<p>ಜಿಲ್ಲಾ ಸಫಾಯಿ ಕರ್ಮಚಾರಿಗಳ ಕಾವಲು ಸಮಿತಿಯ ಸಿದ್ಧಲಿಂಗಯ್ಯ, ‘ಜಾತಿ ನಿಂದನೆಯಾದ ಸಂದರ್ಭದಲ್ಲಿ ಪರಿಣಾಮಕಾರಿಯಾಗಿ ಪ್ರಕರಣ ದಾಖಲಿಸುವ ಬಗ್ಗೆ ತರಬೇತಿ ನೀಡಬೇಕಿದೆ’ ಎಂದರು.</p>.<p>ಸಮಿತಿ ಕಾರ್ಯದರ್ಶಿ ತೇಜಸ್ ಕುಮಾರ್, ಸಂಘಟನಾ ಕಾರ್ಯದರ್ಶಿ ಮನೋಜ್ ಕುಮಾರ್, ಪ್ರಮುಖರಾದ ಅನುಪಮ, ಕಿಶೋರ್, ನಿಖಿಲ್ ಮೋಹನ್, ಕೆಂಪರಾಜು, ಆಕಾಶ್, ಚಿಕ್ಕಓಬಳಯ್ಯ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-17-457220520</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>