<p>ತುಮಕೂರು: ಸಮಾಜ ಕಾರ್ಯದಲ್ಲಿ ತೊಡಗಿಸಿಕೊಂಡವರು ಕೇವಲ ಕನಿಕರ ತೋರಿಸುವುದಕ್ಕಿಂತ ಸಮಸ್ಯೆಗೆ ಸ್ಪಂದಿಸುವ ಸಂವೇದನಾಶೀಲತೆ ಬೆಳೆಸಿಕೊಳ್ಳಬೇಕು ಎಂದು ಮಹಾರಾಷ್ಟ್ರ ಹಿಂದುಳಿದ ವರ್ಗಗಳ ಆಯೋಗದ ಕಾರ್ಯದರ್ಶಿ ಹಾಗೂ ಸಮಾಜ ವಿಜ್ಞಾನಿ ಪ್ರೊ.ಅಂಬಾದಾಸ್ ವೈ.ಮೋಹಿತೆ ಸಲಹೆ ಮಾಡಿದರು.</p>.<p>ತುಮಕೂರು ವಿಶ್ವವಿದ್ಯಾಲಯ ಸಮಾಜ ಕಾರ್ಯ ಅಧ್ಯಯನ ಹಾಗೂ ಸಂಶೋಧನಾ ವಿಭಾಗವು ಭಾರತೀಯ ವೃತ್ತಿಪರ ಸಮಾಜ ಕಾರ್ಯಕರ್ತರ ಸಂಘದ ಸಹಕಾರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎರಡು ದಿನಗಳ ಸಮಾಜ ಕಾರ್ಯ ವಿದ್ಯಾರ್ಥಿಗಳ ಹಬ್ಬ ‘ಸ್ವರಂಗ್-2026’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಸಮಾಜ ಕಾರ್ಯ ವಿದ್ಯಾರ್ಥಿಗೆ ಸಹಾನುಭೂತಿ ಅತಿಮುಖ್ಯ. ವ್ಯಕ್ತಿಯ ನೋವನ್ನು ಅವರ ಸ್ಥಾನದಲ್ಲಿ ನಿಂತು ಅರ್ಥಮಾಡಿಕೊಳ್ಳುವ ಶಕ್ತಿ ಇರಬೇಕು. ತಾಳ್ಮೆಯಿಂದ ಕೇಳಿಸಿಕೊಂಡು ಸ್ಪಂದಿಸಬೇಕು ಎಂದು ಹೇಳಿದರು.</p>.<p>ವಿಶ್ರಾಂತ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ, ‘ಸಮಾಜ ಕಾರ್ಯದ ವೃತ್ತಿಪರ ನೈತಿಕತೆ ಪಾಲಿಸುವುದು ಅತಿಮುಖ್ಯ. ಫಲಾನುಭವಿಗಳ ವೈಯಕ್ತಿಕ ಮಾಹಿತಿ, ರಹಸ್ಯ ಕಾಪಾಡಬೇಕು. ತಾರತಮ್ಯವಿಲ್ಲದೆ ಜಾತಿ, ಧರ್ಮ, ಲಿಂಗ ಭೇದ ಮರೆತು ಸಮಾನವಾಗಿ ಕಾಣುವ ಗುಣವಿರಬೇಕು‘ ಎಂದು ತಿಳಿಸಿದರು.</p>.<p>ಸಾಮಾಜಿಕ ಬದಲಾವಣೆ ರಾತ್ರೋರಾತ್ರಿ ಸಂಭವಿಸುವುದಿಲ್ಲ. ಸವಾಲುಗಳು ಎದುರಾದಾಗ ಧೃತಿಗೆಡದೆ, ಸತತ ಪ್ರಯತ್ನ, ತಾಳ್ಮೆಯಿಂದ ಕೆಲಸ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.</p>.<p>ನಿಮ್ಹಾನ್ಸ್ನ ಪ್ರೊ.ಐ.ಎ.ಶರೀಫ್, ‘ಸಮಾಜದ ದುರ್ಬಲ ವರ್ಗದವರಿಗೆ ನ್ಯಾಯ ಕೊಡಿಸಲು ಸಂವಿಧಾನ, ಮೂಲಭೂತ ಹಕ್ಕು, ಮಹಿಳೆ, ಮಕ್ಕಳ ರಕ್ಷಣಾ ಕಾಯ್ದೆ, ಮಾನವ ಹಕ್ಕುಗಳ ಬಗ್ಗೆ ಕನಿಷ್ಠ ಜ್ಞಾನವಿರಬೇಕು‘ ಎಂದು ಹೇಳಿದರು.</p>.<p>ಬೆಂಗಳೂರು ನಗರ ವಿ.ವಿ ಕುಲಪತಿ ಪ್ರೊ.ಬಿ.ರಮೇಶ್, ‘ಕಾರ್ಪೋರೇಟ್ ವಲಯದಲ್ಲಿ ಗುರುತಿಸಿಕೊಳ್ಳುವುದರ ಜತೆಗೆ ಸೇವೆಯಲ್ಲೂ ತೊಗಡಿಸಿಕೊಳ್ಳಬೇಕು‘ ಎಂದು ಸಲಹೆ ಮಾಡಿದರು.</p>.<p>ಸಿಂಡಿಕೇಟ್ ಸದಸ್ಯ ಎಚ್.ಆರ್.ಮನೋಜ್, ಕುಲಸಚಿವರಾದ ನಾಹಿದಾ ಜಮ್ ಜಮ್, ವಿ.ವಿ ಕಲಾ ನಿಕಾಯದ ಡೀನ್ ಹಾಗೂ ಸಮಾಜ ಕಾರ್ಯ ವಿಭಾಗದ ಅಧ್ಯಕ್ಷ ಪ್ರೊ.ಕೆ.ಜಿ.ಪರಶುರಾಮ, ಐಎಸ್ಪಿಎಸ್ಡಬ್ಲ್ಯೂ ಪ್ರಧಾನ ಕಾರ್ಯದರ್ಶಿ ಆರ್.ಧನಶೇಖರ ಪಾಂಡಿಯನ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-17-629679233</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಸಮಾಜ ಕಾರ್ಯದಲ್ಲಿ ತೊಡಗಿಸಿಕೊಂಡವರು ಕೇವಲ ಕನಿಕರ ತೋರಿಸುವುದಕ್ಕಿಂತ ಸಮಸ್ಯೆಗೆ ಸ್ಪಂದಿಸುವ ಸಂವೇದನಾಶೀಲತೆ ಬೆಳೆಸಿಕೊಳ್ಳಬೇಕು ಎಂದು ಮಹಾರಾಷ್ಟ್ರ ಹಿಂದುಳಿದ ವರ್ಗಗಳ ಆಯೋಗದ ಕಾರ್ಯದರ್ಶಿ ಹಾಗೂ ಸಮಾಜ ವಿಜ್ಞಾನಿ ಪ್ರೊ.ಅಂಬಾದಾಸ್ ವೈ.ಮೋಹಿತೆ ಸಲಹೆ ಮಾಡಿದರು.</p>.<p>ತುಮಕೂರು ವಿಶ್ವವಿದ್ಯಾಲಯ ಸಮಾಜ ಕಾರ್ಯ ಅಧ್ಯಯನ ಹಾಗೂ ಸಂಶೋಧನಾ ವಿಭಾಗವು ಭಾರತೀಯ ವೃತ್ತಿಪರ ಸಮಾಜ ಕಾರ್ಯಕರ್ತರ ಸಂಘದ ಸಹಕಾರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎರಡು ದಿನಗಳ ಸಮಾಜ ಕಾರ್ಯ ವಿದ್ಯಾರ್ಥಿಗಳ ಹಬ್ಬ ‘ಸ್ವರಂಗ್-2026’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಸಮಾಜ ಕಾರ್ಯ ವಿದ್ಯಾರ್ಥಿಗೆ ಸಹಾನುಭೂತಿ ಅತಿಮುಖ್ಯ. ವ್ಯಕ್ತಿಯ ನೋವನ್ನು ಅವರ ಸ್ಥಾನದಲ್ಲಿ ನಿಂತು ಅರ್ಥಮಾಡಿಕೊಳ್ಳುವ ಶಕ್ತಿ ಇರಬೇಕು. ತಾಳ್ಮೆಯಿಂದ ಕೇಳಿಸಿಕೊಂಡು ಸ್ಪಂದಿಸಬೇಕು ಎಂದು ಹೇಳಿದರು.</p>.<p>ವಿಶ್ರಾಂತ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ, ‘ಸಮಾಜ ಕಾರ್ಯದ ವೃತ್ತಿಪರ ನೈತಿಕತೆ ಪಾಲಿಸುವುದು ಅತಿಮುಖ್ಯ. ಫಲಾನುಭವಿಗಳ ವೈಯಕ್ತಿಕ ಮಾಹಿತಿ, ರಹಸ್ಯ ಕಾಪಾಡಬೇಕು. ತಾರತಮ್ಯವಿಲ್ಲದೆ ಜಾತಿ, ಧರ್ಮ, ಲಿಂಗ ಭೇದ ಮರೆತು ಸಮಾನವಾಗಿ ಕಾಣುವ ಗುಣವಿರಬೇಕು‘ ಎಂದು ತಿಳಿಸಿದರು.</p>.<p>ಸಾಮಾಜಿಕ ಬದಲಾವಣೆ ರಾತ್ರೋರಾತ್ರಿ ಸಂಭವಿಸುವುದಿಲ್ಲ. ಸವಾಲುಗಳು ಎದುರಾದಾಗ ಧೃತಿಗೆಡದೆ, ಸತತ ಪ್ರಯತ್ನ, ತಾಳ್ಮೆಯಿಂದ ಕೆಲಸ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.</p>.<p>ನಿಮ್ಹಾನ್ಸ್ನ ಪ್ರೊ.ಐ.ಎ.ಶರೀಫ್, ‘ಸಮಾಜದ ದುರ್ಬಲ ವರ್ಗದವರಿಗೆ ನ್ಯಾಯ ಕೊಡಿಸಲು ಸಂವಿಧಾನ, ಮೂಲಭೂತ ಹಕ್ಕು, ಮಹಿಳೆ, ಮಕ್ಕಳ ರಕ್ಷಣಾ ಕಾಯ್ದೆ, ಮಾನವ ಹಕ್ಕುಗಳ ಬಗ್ಗೆ ಕನಿಷ್ಠ ಜ್ಞಾನವಿರಬೇಕು‘ ಎಂದು ಹೇಳಿದರು.</p>.<p>ಬೆಂಗಳೂರು ನಗರ ವಿ.ವಿ ಕುಲಪತಿ ಪ್ರೊ.ಬಿ.ರಮೇಶ್, ‘ಕಾರ್ಪೋರೇಟ್ ವಲಯದಲ್ಲಿ ಗುರುತಿಸಿಕೊಳ್ಳುವುದರ ಜತೆಗೆ ಸೇವೆಯಲ್ಲೂ ತೊಗಡಿಸಿಕೊಳ್ಳಬೇಕು‘ ಎಂದು ಸಲಹೆ ಮಾಡಿದರು.</p>.<p>ಸಿಂಡಿಕೇಟ್ ಸದಸ್ಯ ಎಚ್.ಆರ್.ಮನೋಜ್, ಕುಲಸಚಿವರಾದ ನಾಹಿದಾ ಜಮ್ ಜಮ್, ವಿ.ವಿ ಕಲಾ ನಿಕಾಯದ ಡೀನ್ ಹಾಗೂ ಸಮಾಜ ಕಾರ್ಯ ವಿಭಾಗದ ಅಧ್ಯಕ್ಷ ಪ್ರೊ.ಕೆ.ಜಿ.ಪರಶುರಾಮ, ಐಎಸ್ಪಿಎಸ್ಡಬ್ಲ್ಯೂ ಪ್ರಧಾನ ಕಾರ್ಯದರ್ಶಿ ಆರ್.ಧನಶೇಖರ ಪಾಂಡಿಯನ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-17-629679233</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>