<p>ತುಮಕೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮೇ 28ರಂದು ನಗರದ ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪಿ.ಜಿ.ತಿಮ್ಮೇಗೌಡ ಹೇಳಿದರು.</p>.<p>ನಗರದ ಡಿಡಿಪಿಐ ಕಚೇರಿಗೆ ಮಂಗಳವಾರ ಭೇಟಿ ನೀಡಿದ ಸಂಘದ ನೂತನ ಪದಾಧಿಕಾರಿಗಳು ಡಿಡಿಪಿಐ ಕೆ.ಜೆ.ರಘುಚಂದ್ರ ಅವರಿಗೆ ಅಭಿನಂದನೆ ಸಲ್ಲಿಸಿದರು. ಸಂಘದ ಕಾರ್ಯ ಚಟುವಟಿಕೆಗಳಿಗೆ ಸಹಕಾರ ನೀಡುವಂತೆ ಕೋರಿದರು.</p>.<p>‘2025– 2031ರ ಅವಧಿಗೆ ಆಯ್ಕೆಯಾದ ಮಂಡಳಿಯಲ್ಲಿ ನುರಿತ ಶಿಕ್ಷಕರಿದ್ದಾರೆ. ಮಕ್ಕಳ ಸ್ನೇಹಿಯಾಗಿ ಕೆಲಸ ಮಾಡಲಿದ್ದಾರೆ. ಇಲಾಖೆಯ ಹಿರಿಯ ಅಧಿಕಾರಿಗಳು ಸಹಕಾರ ನೀಡಬೇಕು. ಪದಗ್ರಹಣ ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕರು ಭಾಗವಹಿಸಬೇಕು’ ಎಂದು ತಿಮ್ಮೇಗೌಡ ಮನವಿ ಮಾಡಿದರು.</p>.<p>‘ಜಿಲ್ಲೆಯ ಯಾವ ತಾಲ್ಲೂಕಿನ ಬಿಇಒ ಕಚೇರಿಯಲ್ಲಿಯೂ ಲಂಚಕ್ಕೆ ಆಸ್ಪದವಿಲ್ಲ. ಇದನ್ನು ಎಲ್ಲಾ ಶಿಕ್ಷಕರಿಗೆ ತಿಳಿಸಬೇಕು. ಸಂಘದ ಜತೆಗೆ ಇಲಾಖೆಯ ಗೌರವ ಎತ್ತಿ ಹಿಡಿಯಬೇಕು’ ಎಂದು ರಘುಚಂದ್ರ ತಿಳಿಸಿದರು.</p>.<p>ಸಂಘದ ಪದಾಧಿಕಾರಿಗಳಾದ ಪರಮೇಶ್, ಮರುಳಸಿದ್ದಯ್ಯ, ಕೋಮಲಾ, ವಿಜಯಕುಮಾರ್, ಮೋಹನಕುಮಾರ್, ಸಂಗೀತ, ಎಂ.ಟಿ.ಭವ್ಯಾ, ಮಹೇಶ್, ಈಶ್ವರಯ್ಯ, ಬಸವರಾಜು, ಶ್ರೀನಿವಾಸ್, ಉಮೇಶ್, ಸವಿತಾ, ಮಂಗಳಗೌರಮ್ಮ, ನಂದಿನಿ, ಶಾಂತಕುಮಾರಿ, ಹರೀಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-17-1003862379</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮೇ 28ರಂದು ನಗರದ ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪಿ.ಜಿ.ತಿಮ್ಮೇಗೌಡ ಹೇಳಿದರು.</p>.<p>ನಗರದ ಡಿಡಿಪಿಐ ಕಚೇರಿಗೆ ಮಂಗಳವಾರ ಭೇಟಿ ನೀಡಿದ ಸಂಘದ ನೂತನ ಪದಾಧಿಕಾರಿಗಳು ಡಿಡಿಪಿಐ ಕೆ.ಜೆ.ರಘುಚಂದ್ರ ಅವರಿಗೆ ಅಭಿನಂದನೆ ಸಲ್ಲಿಸಿದರು. ಸಂಘದ ಕಾರ್ಯ ಚಟುವಟಿಕೆಗಳಿಗೆ ಸಹಕಾರ ನೀಡುವಂತೆ ಕೋರಿದರು.</p>.<p>‘2025– 2031ರ ಅವಧಿಗೆ ಆಯ್ಕೆಯಾದ ಮಂಡಳಿಯಲ್ಲಿ ನುರಿತ ಶಿಕ್ಷಕರಿದ್ದಾರೆ. ಮಕ್ಕಳ ಸ್ನೇಹಿಯಾಗಿ ಕೆಲಸ ಮಾಡಲಿದ್ದಾರೆ. ಇಲಾಖೆಯ ಹಿರಿಯ ಅಧಿಕಾರಿಗಳು ಸಹಕಾರ ನೀಡಬೇಕು. ಪದಗ್ರಹಣ ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕರು ಭಾಗವಹಿಸಬೇಕು’ ಎಂದು ತಿಮ್ಮೇಗೌಡ ಮನವಿ ಮಾಡಿದರು.</p>.<p>‘ಜಿಲ್ಲೆಯ ಯಾವ ತಾಲ್ಲೂಕಿನ ಬಿಇಒ ಕಚೇರಿಯಲ್ಲಿಯೂ ಲಂಚಕ್ಕೆ ಆಸ್ಪದವಿಲ್ಲ. ಇದನ್ನು ಎಲ್ಲಾ ಶಿಕ್ಷಕರಿಗೆ ತಿಳಿಸಬೇಕು. ಸಂಘದ ಜತೆಗೆ ಇಲಾಖೆಯ ಗೌರವ ಎತ್ತಿ ಹಿಡಿಯಬೇಕು’ ಎಂದು ರಘುಚಂದ್ರ ತಿಳಿಸಿದರು.</p>.<p>ಸಂಘದ ಪದಾಧಿಕಾರಿಗಳಾದ ಪರಮೇಶ್, ಮರುಳಸಿದ್ದಯ್ಯ, ಕೋಮಲಾ, ವಿಜಯಕುಮಾರ್, ಮೋಹನಕುಮಾರ್, ಸಂಗೀತ, ಎಂ.ಟಿ.ಭವ್ಯಾ, ಮಹೇಶ್, ಈಶ್ವರಯ್ಯ, ಬಸವರಾಜು, ಶ್ರೀನಿವಾಸ್, ಉಮೇಶ್, ಸವಿತಾ, ಮಂಗಳಗೌರಮ್ಮ, ನಂದಿನಿ, ಶಾಂತಕುಮಾರಿ, ಹರೀಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-17-1003862379</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>