<p>ತಿಪಟೂರು: ತಾಲ್ಲೂಕಿನ ಹೊನ್ನಹಳ್ಳಿ ಹೋಬಳಿ ಬಳಬನೇರಲು ಗ್ರಾಮದಲ್ಲಿ 2010-11ನೇ ಸಾಲಿನ ಎಸ್ಎಸ್ಎಲ್ಸಿ ಹಳೆ ವಿದ್ಯಾರ್ಥಿಗಳ ಸಂಘದಿಂದ ಗುರುವಾರ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.</p>.<p>ಶಿಕ್ಷಕರಾದ ಪುಟ್ಟಸ್ವಾಮಿ, ಕೆ.ಆರ್. ಹುಚ್ಚಪ್ಪ, ಮಲ್ಲಿಕಾರ್ಜುನ ಕೆ.ಸತೀಶ್, ವಿಜಯ ಪ್ರಕಾಶ್, ಶಂಕರ್ ಗುರು, ಟಿ.ಎನ್.ಗೀತಾರಾಣಿ ಎ.ಭಾಗ್ಯ ಹಾಗೂ ತ್ರಿವೇಣಿ ಅವರನ್ನು ಹಳೆ ವಿದ್ಯಾರ್ಥಿಗಳ ಸಂಘದಿಂದ ಸತ್ಕರಿಸಲಾಯಿತು.</p>.<p>ಶಿಕ್ಷಕ ಸತೀಶ್ ಮಾತನಾಡಿ, ಹಳೆ ವಿದ್ಯಾರ್ಥಿಗಳು ತಮ್ಮ ಗುರುಗಳನ್ನು ಸ್ಮರಿಸುವುದು ಶ್ಲಾಘನೀಯ. ಇಂತಹ ಕಾರ್ಯಕ್ರಮಗಳು ಗುರು-ಶಿಷ್ಯ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆ ಎಂದು ಅಭಿಪ್ರಾಯಪಟ್ಟರು.</p>.<p>ಶಿವರಾಮಶೆಟ್ಟಿ ಮಾತನಾಡಿ, ಹಳೆ ವಿದ್ಯಾರ್ಥಿಗಳು ಶಾಲೆಯೊಂದಿಗಿನ ಬಾಂಧವ್ಯವನ್ನು ಉಳಿಸಿಕೊಂಡು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದರು.</p>.<p>ಎಸ್ಡಿಎಂಸಿ ಅಧ್ಯಕ್ಷ ಬಸವರಾಜು, ಪಿಡಿಒ ಗುರುಮೂರ್ತಿ, ಶಿಕ್ಷಕರಾದ ದಕ್ಷಿಣಮೂರ್ತಿ, ಸಿದ್ದಯ್ಯ, ಸುಂದರಮೂರ್ತಿ, ಸಿದ್ದಮಲ್ಲಪ್ಪ, ಮರುಳಪ್ಪ, ಶಿವಸ್ವಾಮಿ, ಮುಖ್ಯಶಿಕ್ಷಕ ಸತೀಶ್ ಜೆ.ಪಿ., ಪುಟ್ಟರಾಮೇಗೌಡ, ಶಿವರಾಮಶೆಟ್ಟಿ ಸೇರಿದಂತೆ 2010-11ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-17-692060751</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಪಟೂರು: ತಾಲ್ಲೂಕಿನ ಹೊನ್ನಹಳ್ಳಿ ಹೋಬಳಿ ಬಳಬನೇರಲು ಗ್ರಾಮದಲ್ಲಿ 2010-11ನೇ ಸಾಲಿನ ಎಸ್ಎಸ್ಎಲ್ಸಿ ಹಳೆ ವಿದ್ಯಾರ್ಥಿಗಳ ಸಂಘದಿಂದ ಗುರುವಾರ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.</p>.<p>ಶಿಕ್ಷಕರಾದ ಪುಟ್ಟಸ್ವಾಮಿ, ಕೆ.ಆರ್. ಹುಚ್ಚಪ್ಪ, ಮಲ್ಲಿಕಾರ್ಜುನ ಕೆ.ಸತೀಶ್, ವಿಜಯ ಪ್ರಕಾಶ್, ಶಂಕರ್ ಗುರು, ಟಿ.ಎನ್.ಗೀತಾರಾಣಿ ಎ.ಭಾಗ್ಯ ಹಾಗೂ ತ್ರಿವೇಣಿ ಅವರನ್ನು ಹಳೆ ವಿದ್ಯಾರ್ಥಿಗಳ ಸಂಘದಿಂದ ಸತ್ಕರಿಸಲಾಯಿತು.</p>.<p>ಶಿಕ್ಷಕ ಸತೀಶ್ ಮಾತನಾಡಿ, ಹಳೆ ವಿದ್ಯಾರ್ಥಿಗಳು ತಮ್ಮ ಗುರುಗಳನ್ನು ಸ್ಮರಿಸುವುದು ಶ್ಲಾಘನೀಯ. ಇಂತಹ ಕಾರ್ಯಕ್ರಮಗಳು ಗುರು-ಶಿಷ್ಯ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆ ಎಂದು ಅಭಿಪ್ರಾಯಪಟ್ಟರು.</p>.<p>ಶಿವರಾಮಶೆಟ್ಟಿ ಮಾತನಾಡಿ, ಹಳೆ ವಿದ್ಯಾರ್ಥಿಗಳು ಶಾಲೆಯೊಂದಿಗಿನ ಬಾಂಧವ್ಯವನ್ನು ಉಳಿಸಿಕೊಂಡು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದರು.</p>.<p>ಎಸ್ಡಿಎಂಸಿ ಅಧ್ಯಕ್ಷ ಬಸವರಾಜು, ಪಿಡಿಒ ಗುರುಮೂರ್ತಿ, ಶಿಕ್ಷಕರಾದ ದಕ್ಷಿಣಮೂರ್ತಿ, ಸಿದ್ದಯ್ಯ, ಸುಂದರಮೂರ್ತಿ, ಸಿದ್ದಮಲ್ಲಪ್ಪ, ಮರುಳಪ್ಪ, ಶಿವಸ್ವಾಮಿ, ಮುಖ್ಯಶಿಕ್ಷಕ ಸತೀಶ್ ಜೆ.ಪಿ., ಪುಟ್ಟರಾಮೇಗೌಡ, ಶಿವರಾಮಶೆಟ್ಟಿ ಸೇರಿದಂತೆ 2010-11ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-17-692060751</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>