<p>ಕೋಲಾರ: ಕೃಷಿ ಪದ್ಧತಿ, ಕೃಷಿ ಮಾರುಕಟ್ಟೆ, ಆನ್ಲೈನ್ ವಹಿವಾಟು ಕುರಿತು ತುಮಕೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳೊಂದಿಗೆ ನಗರದಲ್ಲಿ ಸಂವಾದ ಮತ್ತು ಚರ್ಚೆ ನಡೆಯಿತು.</p>.<p>ಟೊಮೆಟೊ ಬೆಳೆಗಾರ ಹಾಗೂ ಮಂಡಿ ಮಾಲೀಕ ಸಿಎಂಆರ್ ಶ್ರೀನಾಥ್ ಜೊತೆ ಸಾಂಪ್ರದಾಯಿಕ ಮಾರುಕಟ್ಟೆ ವ್ಯವಸ್ಥೆಯಿಂದ ಹಿಡಿದು ಈಗಿನ ಎಐ ವರೆಗೆ ಕೃಷಿ ಮತ್ತು ಮಾರುಕಟ್ಟೆಯ ವಿವಿಧ ವಿಚಾರಗಳನ್ನು ವಿದ್ಯಾರ್ಥಿಗಳು ಚರ್ಚಿಸಿದರು.</p>.<p>ಕೃಷಿ ಉತ್ಪನ್ನಗಳ ಬೇಡಿಕೆ, ಪೂರೈಕೆಯಲ್ಲಿ ಸಮತೋಲನ ಕಾಪಾಡುವುದು ಹಾಗೂ ಖಾಸಗಿ ಕಂಪನಿಗಳ ಪಾತ್ರದ ಕುರಿತು ಪ್ರಶ್ನೆ ಕೇಳಿದರು.</p>.<p>ಉತ್ಪನ್ನಗಳನ್ನು ಶೀತಲಗೃಹಗಳಲ್ಲಿ ಶೇಖರಣೆ ಹಾಗೂ ಮೌಲ್ಯಾಧಾರಿತ ಉತ್ಪನ್ನಗಳ ತಯಾರಿಕೆ ಮತ್ತು ಅವುಗಳ ಮಾರಾಟದಿಂದ ವ್ಯವಸ್ಥೆಯಲ್ಲಿ ಸುಧಾರಿಸಬಹುದಾಗಿದೆ ಎಂದು ಸಿಎಂಆರ್ ಶ್ರೀನಾಥ್ ತಿಳಿಸಿದರು.</p>.<p>ರೈತರಿಗೆ ಅತ್ಯುತ್ತಮ ಬೆಲೆ ಸಿಗುವಂತೆ, ಗ್ರಾಹಕರಿಗೆ ಹೊರೆಯಾಗದಂತೆ ಪಾರದರ್ಶಕ ವಹಿವಾಟು ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ರೀತಿಯಲ್ಲಿ ವಿದ್ಯಾರ್ಥಿಗಳು ಅಧ್ಯಯನ ಮಾಡಿ ಕಾರ್ಯ ಪ್ರವೃತ್ತರಾದರೆ ಆರ್ಥಿಕ ವ್ಯವಸ್ಥೆ ಪರಿಣಾಮಕಾರಿಯಾಗಿರುತ್ತದೆ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ರವೀಂದ್ರಕುಮಾರ್ ಹಾಗೂ ಸಹ ಪ್ರಾಧ್ಯಾಪಕರಾದ ಮುನಿರಾಜು, ನೀಲಕಂಠ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-18-228040234</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಕೃಷಿ ಪದ್ಧತಿ, ಕೃಷಿ ಮಾರುಕಟ್ಟೆ, ಆನ್ಲೈನ್ ವಹಿವಾಟು ಕುರಿತು ತುಮಕೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳೊಂದಿಗೆ ನಗರದಲ್ಲಿ ಸಂವಾದ ಮತ್ತು ಚರ್ಚೆ ನಡೆಯಿತು.</p>.<p>ಟೊಮೆಟೊ ಬೆಳೆಗಾರ ಹಾಗೂ ಮಂಡಿ ಮಾಲೀಕ ಸಿಎಂಆರ್ ಶ್ರೀನಾಥ್ ಜೊತೆ ಸಾಂಪ್ರದಾಯಿಕ ಮಾರುಕಟ್ಟೆ ವ್ಯವಸ್ಥೆಯಿಂದ ಹಿಡಿದು ಈಗಿನ ಎಐ ವರೆಗೆ ಕೃಷಿ ಮತ್ತು ಮಾರುಕಟ್ಟೆಯ ವಿವಿಧ ವಿಚಾರಗಳನ್ನು ವಿದ್ಯಾರ್ಥಿಗಳು ಚರ್ಚಿಸಿದರು.</p>.<p>ಕೃಷಿ ಉತ್ಪನ್ನಗಳ ಬೇಡಿಕೆ, ಪೂರೈಕೆಯಲ್ಲಿ ಸಮತೋಲನ ಕಾಪಾಡುವುದು ಹಾಗೂ ಖಾಸಗಿ ಕಂಪನಿಗಳ ಪಾತ್ರದ ಕುರಿತು ಪ್ರಶ್ನೆ ಕೇಳಿದರು.</p>.<p>ಉತ್ಪನ್ನಗಳನ್ನು ಶೀತಲಗೃಹಗಳಲ್ಲಿ ಶೇಖರಣೆ ಹಾಗೂ ಮೌಲ್ಯಾಧಾರಿತ ಉತ್ಪನ್ನಗಳ ತಯಾರಿಕೆ ಮತ್ತು ಅವುಗಳ ಮಾರಾಟದಿಂದ ವ್ಯವಸ್ಥೆಯಲ್ಲಿ ಸುಧಾರಿಸಬಹುದಾಗಿದೆ ಎಂದು ಸಿಎಂಆರ್ ಶ್ರೀನಾಥ್ ತಿಳಿಸಿದರು.</p>.<p>ರೈತರಿಗೆ ಅತ್ಯುತ್ತಮ ಬೆಲೆ ಸಿಗುವಂತೆ, ಗ್ರಾಹಕರಿಗೆ ಹೊರೆಯಾಗದಂತೆ ಪಾರದರ್ಶಕ ವಹಿವಾಟು ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ರೀತಿಯಲ್ಲಿ ವಿದ್ಯಾರ್ಥಿಗಳು ಅಧ್ಯಯನ ಮಾಡಿ ಕಾರ್ಯ ಪ್ರವೃತ್ತರಾದರೆ ಆರ್ಥಿಕ ವ್ಯವಸ್ಥೆ ಪರಿಣಾಮಕಾರಿಯಾಗಿರುತ್ತದೆ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ರವೀಂದ್ರಕುಮಾರ್ ಹಾಗೂ ಸಹ ಪ್ರಾಧ್ಯಾಪಕರಾದ ಮುನಿರಾಜು, ನೀಲಕಂಠ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-18-228040234</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>