<p>ತುಮಕೂರು: ನಗರ ಹೊರವಲಯದ ವರಿನ್ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ಐಸಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ವರಿನ್ ಶಾಲೆಯು 2025–26ನೇ ಸಾಲಿನ ಐಸಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದಿದೆ. ಒಟ್ಟು 134 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 82 ವಿದ್ಯಾರ್ಥಿ ಗಳು ಅತ್ಯುನ್ನತ ಶ್ರೇಣಿ ಪಡೆದಿದ್ದಾರೆ. 52 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.</p>.<p>ಎನ್.ಡಿ.ಬಬಿತಾ ಶೇ 99ರಷ್ಟು ಅಂಕ ಗಳಿಸಿ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸಿ.ಧವನ್ ಶೇ 98.2 ಅಂಕ ಗಳಿಸಿದ್ದಾರೆ. ಎಂ.ಧನ್ವಿ ಶೇ 97.20 ಅಂಕ ಗಳಿಸಿದ್ದಾರೆ. ಒಟ್ಟು 27 ವಿದ್ಯಾರ್ಥಿಗಳು ಮತ್ತು ಅವರ ಪೋಷಕರನ್ನು ಗೌರವಿಸಲಾಯಿತು.</p>.<p>ಸನ್ಮಾನ ಸ್ವೀಕರಿಸಿದ ಮಕ್ಕಳು ತಮ್ಮ ಅಭಿಪ್ರಾಯ ಹಂಚಿಕೊಂಡರು. ಶಾಲೆ, ಶಿಕ್ಷಕರು ಮತ್ತು ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು. ಶೈಕ್ಷಣಿಕ ಸಾಧನೆಗೆ ಸಹಕಾರ, ಉತ್ತೇಜನ, ಮಾರ್ಗದರ್ಶನ ನೀಡಿದವರನ್ನು ನೆನಪಿಸಿಕೊಂಡರು.</p>.<p>ವಿರಾಟ್ ಟ್ರಸ್ಟ್ ಅಧ್ಯಕ್ಷ ಕೃಷ್ಣಯ್ಯ, ಕಾರ್ಯದರ್ಶಿ ಮಮತಾ ಸುರೇಶ್, ನಿರ್ದೇಶಕಿ ಅಮ್ಮಜಮ್ಮ, ಸಿಇಒ ಕೃಷ್ಣಪ್ಪ, ಪ್ರಾಂಶುಪಾಲ ಎಸ್.ಕೆ.ಶಿವಕುಮಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-17-1599522175</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ನಗರ ಹೊರವಲಯದ ವರಿನ್ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ಐಸಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ವರಿನ್ ಶಾಲೆಯು 2025–26ನೇ ಸಾಲಿನ ಐಸಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದಿದೆ. ಒಟ್ಟು 134 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 82 ವಿದ್ಯಾರ್ಥಿ ಗಳು ಅತ್ಯುನ್ನತ ಶ್ರೇಣಿ ಪಡೆದಿದ್ದಾರೆ. 52 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.</p>.<p>ಎನ್.ಡಿ.ಬಬಿತಾ ಶೇ 99ರಷ್ಟು ಅಂಕ ಗಳಿಸಿ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸಿ.ಧವನ್ ಶೇ 98.2 ಅಂಕ ಗಳಿಸಿದ್ದಾರೆ. ಎಂ.ಧನ್ವಿ ಶೇ 97.20 ಅಂಕ ಗಳಿಸಿದ್ದಾರೆ. ಒಟ್ಟು 27 ವಿದ್ಯಾರ್ಥಿಗಳು ಮತ್ತು ಅವರ ಪೋಷಕರನ್ನು ಗೌರವಿಸಲಾಯಿತು.</p>.<p>ಸನ್ಮಾನ ಸ್ವೀಕರಿಸಿದ ಮಕ್ಕಳು ತಮ್ಮ ಅಭಿಪ್ರಾಯ ಹಂಚಿಕೊಂಡರು. ಶಾಲೆ, ಶಿಕ್ಷಕರು ಮತ್ತು ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು. ಶೈಕ್ಷಣಿಕ ಸಾಧನೆಗೆ ಸಹಕಾರ, ಉತ್ತೇಜನ, ಮಾರ್ಗದರ್ಶನ ನೀಡಿದವರನ್ನು ನೆನಪಿಸಿಕೊಂಡರು.</p>.<p>ವಿರಾಟ್ ಟ್ರಸ್ಟ್ ಅಧ್ಯಕ್ಷ ಕೃಷ್ಣಯ್ಯ, ಕಾರ್ಯದರ್ಶಿ ಮಮತಾ ಸುರೇಶ್, ನಿರ್ದೇಶಕಿ ಅಮ್ಮಜಮ್ಮ, ಸಿಇಒ ಕೃಷ್ಣಪ್ಪ, ಪ್ರಾಂಶುಪಾಲ ಎಸ್.ಕೆ.ಶಿವಕುಮಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-17-1599522175</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>