<p>ತುಮಕೂರು: ವಿದ್ಯೋದಯ ಕಾನೂನು ಕಾಲೇಜಿನ ರೆಡ್ಕ್ರಾಸ್, ಎನ್ಎಸ್ಎಸ್ ಘಟಕದಿಂದ ನಗರದ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.</p>.<p>ಸಿದ್ಧಾರ್ಥ ಕಾಲೇಜಿನ ಪ್ರಾಧ್ಯಾಪಕ ಡಾ.ರಾಜೇಂದ್ರ ಪ್ರಸಾದ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ರಕ್ತದಾನದ ಮಹತ್ವದ ಕುರಿತು ಅರಿವು ಮೂಡಿಸಿದರು. ವಿದ್ಯಾರ್ಥಿಗಳು ಅತ್ಯಂತ ಕ್ರಿಯಾಶೀಲವಾಗಿ ರಕ್ತದಾನ ಶಿಬಿರದಲ್ಲಿ ಭಾಗವಹಿಸುವಂತೆ ಸಲಹೆ ಮಾಡಿದರು.</p>.<p>ವಿದ್ಯೋದಯ ಫೌಂಡೇಷನ್ ಟ್ರಸ್ಟ್ನ ಟ್ರಸ್ಟಿ ಎಚ್.ಎಸ್.ರಾಜು, ‘ಸಂಸ್ಥೆಯಿಂದ ಪ್ರತಿ ವರ್ಷ ರಕ್ತದಾನ ಶಿಬಿರ ನಡೆಸಲಾಗುತ್ತಿದೆ. ಇದು ಹೀಗೆ ಮುಂದುವರಿಯಲಿದೆ. ವಿದ್ಯಾರ್ಥಿಗಳು ತುರ್ತು ಸಮಯದಲ್ಲಿ ಅಗತ್ಯ ಇರುವವರಿಗೆ ರಕ್ತ ನೀಡಿ ನೆರವಾಗುತ್ತಿದ್ದಾರೆ’ ಎಂದರು.</p>.<p>ವಿದ್ಯೋದಯ ಕಾಲೇಜು ಸಿಇಒ ಪ್ರೊ.ಕೆ.ಚಂದ್ರಣ್ಣ, ಪ್ರಾಂಶುಪಾಲರಾದ ಶಮಾ ಸೈಯದಿ, ರೆಡ್ಕ್ರಾಸ್ ಸಂಚಾಲಕಿ ಕೆ.ಎಸ್.ಪುಷ್ಪಾ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ವಿ.ಕಿಶೋರ್ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-17-1566190065</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ವಿದ್ಯೋದಯ ಕಾನೂನು ಕಾಲೇಜಿನ ರೆಡ್ಕ್ರಾಸ್, ಎನ್ಎಸ್ಎಸ್ ಘಟಕದಿಂದ ನಗರದ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.</p>.<p>ಸಿದ್ಧಾರ್ಥ ಕಾಲೇಜಿನ ಪ್ರಾಧ್ಯಾಪಕ ಡಾ.ರಾಜೇಂದ್ರ ಪ್ರಸಾದ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ರಕ್ತದಾನದ ಮಹತ್ವದ ಕುರಿತು ಅರಿವು ಮೂಡಿಸಿದರು. ವಿದ್ಯಾರ್ಥಿಗಳು ಅತ್ಯಂತ ಕ್ರಿಯಾಶೀಲವಾಗಿ ರಕ್ತದಾನ ಶಿಬಿರದಲ್ಲಿ ಭಾಗವಹಿಸುವಂತೆ ಸಲಹೆ ಮಾಡಿದರು.</p>.<p>ವಿದ್ಯೋದಯ ಫೌಂಡೇಷನ್ ಟ್ರಸ್ಟ್ನ ಟ್ರಸ್ಟಿ ಎಚ್.ಎಸ್.ರಾಜು, ‘ಸಂಸ್ಥೆಯಿಂದ ಪ್ರತಿ ವರ್ಷ ರಕ್ತದಾನ ಶಿಬಿರ ನಡೆಸಲಾಗುತ್ತಿದೆ. ಇದು ಹೀಗೆ ಮುಂದುವರಿಯಲಿದೆ. ವಿದ್ಯಾರ್ಥಿಗಳು ತುರ್ತು ಸಮಯದಲ್ಲಿ ಅಗತ್ಯ ಇರುವವರಿಗೆ ರಕ್ತ ನೀಡಿ ನೆರವಾಗುತ್ತಿದ್ದಾರೆ’ ಎಂದರು.</p>.<p>ವಿದ್ಯೋದಯ ಕಾಲೇಜು ಸಿಇಒ ಪ್ರೊ.ಕೆ.ಚಂದ್ರಣ್ಣ, ಪ್ರಾಂಶುಪಾಲರಾದ ಶಮಾ ಸೈಯದಿ, ರೆಡ್ಕ್ರಾಸ್ ಸಂಚಾಲಕಿ ಕೆ.ಎಸ್.ಪುಷ್ಪಾ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ವಿ.ಕಿಶೋರ್ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-17-1566190065</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>