<p>ಉಡುಪಿ: ಬೇಸಿಗೆಯ ರಜೆ ಕಳೆದು ಮರಳಿ ಶಾಲೆಗೆ ಬಂದ ವಿದ್ಯಾರ್ಥಿಗಳನ್ನು ಜಿಲ್ಲೆಯಾದ್ಯಂತ ಶಿಕ್ಷಕರು ಸೋಮವಾರ ಆತ್ಮೀಯವಾಗಿ ಬರಮಾಡಿಕೊಂಡರು.</p>.<p>ಜಿಲ್ಲೆಯ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶಾಲೆಯ ಆವರಣ ಪ್ರವೇಶಿಸುತ್ತಿದ್ದಂತೆ ಅವರಿಗೆ ಹೂವು, ಪೆನ್, ಪೆನ್ಸಿಲ್ ನೀಡಿ ಸ್ವಾಗತಿಸಲಾಯಿತು. ಪ್ರಾರಂಭೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನೂ ವಿತರಿಸಲಾಯಿತು.</p>.<p>ತಾಲ್ಲೂಕು ಮಟ್ಟದಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು, ಊರಿನ ಗಣ್ಯರು ಪಾಲ್ಗೊಂಡಿದ್ದರು. ಪ್ರಾರಂಭೋತ್ಸವ ಕಾರ್ಯಕ್ರಮದಲ್ಲೇ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನೂ ವಿತರಿಸಲಾಯಿತು.</p>.<p>ಕೆಲವು ಶಾಲೆಗಳಲ್ಲಿ ಪ್ರಾರಂಭೋತ್ಸವದ ಬಳಿಕ ಶಿಕ್ಷಕರ ಮತ್ತು ಪೋಷಕರ ಸಭೆ ಆಯೋಜಿಲಾಗಿತ್ತು.</p>.<p>ಶಿಕ್ಷಣವೇ ಅಡಿಪಾಯ: ‘ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ವಿದ್ಯಾವಂತ ಯುವ ಜನತೆಯ ಕೊಡುಗೆ ಅಪಾರವಾಗಿದ್ದು, ಸದೃಢ ಭಾರತ ನಿರ್ಮಾಣಕ್ಕೆ ಗುಣಮಟ್ಟದ ಶಿಕ್ಷಣವೇ ಅಡಿಪಾಯ ವಾಗಿದೆ’ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.</p>.<p>2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ ಕಾರ್ಯಕ್ರಮಕ್ಕೆ ಒಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಉಡುಪಿ ಜಿಲ್ಲೆಯ ಶೈಕ್ಷಣಿಕ ಸಾಧನೆಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಹಾಗೂ ದಾನಿಗಳ ಕೊಡುಗೆ ಅಪಾರವಾಗಿದ್ದು, ಮುಂದಿನ ದಿನಗಳಲ್ಲಿಯೂ ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಅಗ್ರ ಸ್ಥಾನವನ್ನು ಅಲಂಕರಿಸಲಿ’ ಎಂದು ಹೇಳಿದರು.</p>.<p>ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡೆಕಾರು, ಒಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆ, ಗಾಂಧಿ ಶತಾಬ್ದಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಪೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಿ, ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಸವಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-28-1435095258</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಬೇಸಿಗೆಯ ರಜೆ ಕಳೆದು ಮರಳಿ ಶಾಲೆಗೆ ಬಂದ ವಿದ್ಯಾರ್ಥಿಗಳನ್ನು ಜಿಲ್ಲೆಯಾದ್ಯಂತ ಶಿಕ್ಷಕರು ಸೋಮವಾರ ಆತ್ಮೀಯವಾಗಿ ಬರಮಾಡಿಕೊಂಡರು.</p>.<p>ಜಿಲ್ಲೆಯ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶಾಲೆಯ ಆವರಣ ಪ್ರವೇಶಿಸುತ್ತಿದ್ದಂತೆ ಅವರಿಗೆ ಹೂವು, ಪೆನ್, ಪೆನ್ಸಿಲ್ ನೀಡಿ ಸ್ವಾಗತಿಸಲಾಯಿತು. ಪ್ರಾರಂಭೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನೂ ವಿತರಿಸಲಾಯಿತು.</p>.<p>ತಾಲ್ಲೂಕು ಮಟ್ಟದಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು, ಊರಿನ ಗಣ್ಯರು ಪಾಲ್ಗೊಂಡಿದ್ದರು. ಪ್ರಾರಂಭೋತ್ಸವ ಕಾರ್ಯಕ್ರಮದಲ್ಲೇ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನೂ ವಿತರಿಸಲಾಯಿತು.</p>.<p>ಕೆಲವು ಶಾಲೆಗಳಲ್ಲಿ ಪ್ರಾರಂಭೋತ್ಸವದ ಬಳಿಕ ಶಿಕ್ಷಕರ ಮತ್ತು ಪೋಷಕರ ಸಭೆ ಆಯೋಜಿಲಾಗಿತ್ತು.</p>.<p>ಶಿಕ್ಷಣವೇ ಅಡಿಪಾಯ: ‘ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ವಿದ್ಯಾವಂತ ಯುವ ಜನತೆಯ ಕೊಡುಗೆ ಅಪಾರವಾಗಿದ್ದು, ಸದೃಢ ಭಾರತ ನಿರ್ಮಾಣಕ್ಕೆ ಗುಣಮಟ್ಟದ ಶಿಕ್ಷಣವೇ ಅಡಿಪಾಯ ವಾಗಿದೆ’ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.</p>.<p>2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ ಕಾರ್ಯಕ್ರಮಕ್ಕೆ ಒಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಉಡುಪಿ ಜಿಲ್ಲೆಯ ಶೈಕ್ಷಣಿಕ ಸಾಧನೆಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಹಾಗೂ ದಾನಿಗಳ ಕೊಡುಗೆ ಅಪಾರವಾಗಿದ್ದು, ಮುಂದಿನ ದಿನಗಳಲ್ಲಿಯೂ ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಅಗ್ರ ಸ್ಥಾನವನ್ನು ಅಲಂಕರಿಸಲಿ’ ಎಂದು ಹೇಳಿದರು.</p>.<p>ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡೆಕಾರು, ಒಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆ, ಗಾಂಧಿ ಶತಾಬ್ದಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಪೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಿ, ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಸವಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-28-1435095258</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>