<p>ಉಡುಪಿ: ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆಯಡಿ ಜಿಲ್ಲೆಯ 35 ವಿದ್ಯಾರ್ಥಿಗಳಿಗೆ ಬ್ರಹ್ಮಾವರದ ಕ್ರಾಸ್ಲ್ಯಾಂಡ್ ಕಾಲೇಜಿನಲ್ಲಿ ತರಬೇತಿ ಹಮ್ಮಿಕೊಂಡಿದ್ದು, ಪ್ರಶಿಕ್ಷಣಾರ್ಥಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಈಚೆಗೆ ಉಚಿತ ಕಿಟ್ ವಿತರಿಸಿದರು.</p>.<p>ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಈ ಯೋಜನೆಯು 18ರಿಂದ 35 ವರ್ಷ ವಯಸ್ಸಿನ ಗ್ರಾಮೀಣ ಬಡ ಯುವಕರಿಗೆ ಉಚಿತ ತರಬೇತಿ ಮತ್ತು ಉದ್ಯೋಗ ಒದಗಿಸುವ ಗುರಿ ಹೊಂದಿದೆ. ತರಬೇತಿದಾರರಿಗೆ 3 ತಿಂಗಳ ಉಚಿತ ತರಬೇತಿ ನೀಡಿ ಮಾಸಿಕವಾಗಿ ₹3,500 ಶಿಷ್ಯವೇತನ ನೀಡಲಾಗುತ್ತಿದ್ದು, ಉದ್ಯೋಗ ದೊರೆತ ನಂತರ ಪ್ರತಿ ತಿಂಗಳು ₹1,200ರಂತೆ ಒಟ್ಟು 6 ತಿಂಗಳ ಅವಧಿಗೆ ₹7,200 ಅನ್ನು ಸಹಾಯಧನವಾಗಿ ಪಾವತಿಸಲಾಗುತ್ತದೆ ಎಂದರು.</p>.<p>ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ದೇಶದ ಅಭಿವೃದ್ಧಿಗೆ ಕೌಶಲಾಧಾರಿತ ತರಬೇತಿ ಮತ್ತು ಉದ್ಯೋಗ ಅತ್ಯಂತ ಪ್ರಮುಖವಾಗಿದ್ದು, ಕೇಂದ್ರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ವಿಜಯ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ರಾಸ್ಲ್ಯಾಂಡ್ ಕಾಲೇಜಿನ ಪ್ರಾಂಶುಪಾಲ ರಾಬರ್ಟ್ ಕ್ಲೈವ್, ತರಬೇತಿಯ ಮುಖ್ಯಸ್ಥ ಗಣೇಶ್ ಪೂಜಾರಿ ಇದ್ದರು. ದೀಪಾ ಅನಂತರಾವ್ ಕಿತ್ತೂರು ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-28-1443786571</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆಯಡಿ ಜಿಲ್ಲೆಯ 35 ವಿದ್ಯಾರ್ಥಿಗಳಿಗೆ ಬ್ರಹ್ಮಾವರದ ಕ್ರಾಸ್ಲ್ಯಾಂಡ್ ಕಾಲೇಜಿನಲ್ಲಿ ತರಬೇತಿ ಹಮ್ಮಿಕೊಂಡಿದ್ದು, ಪ್ರಶಿಕ್ಷಣಾರ್ಥಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಈಚೆಗೆ ಉಚಿತ ಕಿಟ್ ವಿತರಿಸಿದರು.</p>.<p>ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಈ ಯೋಜನೆಯು 18ರಿಂದ 35 ವರ್ಷ ವಯಸ್ಸಿನ ಗ್ರಾಮೀಣ ಬಡ ಯುವಕರಿಗೆ ಉಚಿತ ತರಬೇತಿ ಮತ್ತು ಉದ್ಯೋಗ ಒದಗಿಸುವ ಗುರಿ ಹೊಂದಿದೆ. ತರಬೇತಿದಾರರಿಗೆ 3 ತಿಂಗಳ ಉಚಿತ ತರಬೇತಿ ನೀಡಿ ಮಾಸಿಕವಾಗಿ ₹3,500 ಶಿಷ್ಯವೇತನ ನೀಡಲಾಗುತ್ತಿದ್ದು, ಉದ್ಯೋಗ ದೊರೆತ ನಂತರ ಪ್ರತಿ ತಿಂಗಳು ₹1,200ರಂತೆ ಒಟ್ಟು 6 ತಿಂಗಳ ಅವಧಿಗೆ ₹7,200 ಅನ್ನು ಸಹಾಯಧನವಾಗಿ ಪಾವತಿಸಲಾಗುತ್ತದೆ ಎಂದರು.</p>.<p>ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ದೇಶದ ಅಭಿವೃದ್ಧಿಗೆ ಕೌಶಲಾಧಾರಿತ ತರಬೇತಿ ಮತ್ತು ಉದ್ಯೋಗ ಅತ್ಯಂತ ಪ್ರಮುಖವಾಗಿದ್ದು, ಕೇಂದ್ರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ವಿಜಯ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ರಾಸ್ಲ್ಯಾಂಡ್ ಕಾಲೇಜಿನ ಪ್ರಾಂಶುಪಾಲ ರಾಬರ್ಟ್ ಕ್ಲೈವ್, ತರಬೇತಿಯ ಮುಖ್ಯಸ್ಥ ಗಣೇಶ್ ಪೂಜಾರಿ ಇದ್ದರು. ದೀಪಾ ಅನಂತರಾವ್ ಕಿತ್ತೂರು ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-28-1443786571</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>