<p>ಉಡುಪಿ: 'ಜಗತ್ತು ವೇಗವಾಗಿ, ಆಕರ್ಷಕವಾಗಿ ಬೆಳೆಯುತ್ತಿದೆ. ವಿದ್ಯಾರ್ಥಿಗಳು ಮೋಹಕ್ಕೆ ಒಳಗಾಗದೆ ಚಿತ್ತವನ್ನು ನಿಗ್ರಹಿಸಿಕೊಂಡು, ಸಮಯವನ್ನು ಸದುಪಯೋಗ ಪಡಿಸಿಕೊಂಡು ಶಿಕ್ಷಣವನ್ನು ಸಾರ್ಥಕಗೊಳಿಸಿಕೊಳ್ಳಬೇಕು’ ಎಂದು ಪೂರ್ಣಪ್ರಜ್ಞ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಈಶಪ್ರಿಯತೀರ್ಥ ಶ್ರೀಪಾದರು ಹೇಳಿದರು.</p>.<p>ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಅವರು ಆಶೀರ್ವಚನ ನೀ ಡಿದರು.</p>.<p>ಕೋಟ ಪಡುಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ರಾಜೇಂದ್ರ ನಾಯಕ್ ಮಾತನಾಡಿ, ಸಂಸ್ಕಾರಯುತ ಶಿಕ್ಷಣ ನೀಡುವ ಮೂಲಕ ಉತ್ತಮ ನಾಗರಿಕ ಸಮಾಜ ನಿರ್ಮಿಸುವಲ್ಲಿ ಸಂಸ್ಥೆಯ ಪಾತ್ರ ಬಹಳ ದೊಡ್ಡದು ಎಂದರು.</p>.<p>ಪ್ರಾಂಶುಪಾಲ ಚಂದ್ರಕಾಂತ್ ಭಟ್, ಆಂತರಿಕ ಗುಣಮಟ್ಟ ಖಾತರಿ ಘಟಕದ ಸಂಯೋಜಕ ರಾಘವೇಂದ್ರ ಎಲ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ವಿನಾಯಕ್ ಪೈ ಬಿ, ಪ್ರಜ್ಞಾ ಮಾರ್ಪಳ್ಳಿ, ಗಗನ್ ಕೆ. ಸುವರ್ಣ, ಧೀರಜ್, ಖುಷಿ ಶೆಟ್ಟಿ, ಉಜ್ವಲ್ ನಾಯಕ್ ಭಾಗವಹಿಸಿದ್ದರು.</p>.<p>ಕಾಲೇಜಿನ ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಎ.ಟಿ. ಪ್ರಶಾಂತ್ ಹೊಳ್ಳ ಸ್ವಾಗತಿಸಿದರು. ವಿನಾಯಕ್ ಪೈ ಬಿ. ವಂದಿಸಿದರು. ರಾನಿಯಾ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-28-548538191</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: 'ಜಗತ್ತು ವೇಗವಾಗಿ, ಆಕರ್ಷಕವಾಗಿ ಬೆಳೆಯುತ್ತಿದೆ. ವಿದ್ಯಾರ್ಥಿಗಳು ಮೋಹಕ್ಕೆ ಒಳಗಾಗದೆ ಚಿತ್ತವನ್ನು ನಿಗ್ರಹಿಸಿಕೊಂಡು, ಸಮಯವನ್ನು ಸದುಪಯೋಗ ಪಡಿಸಿಕೊಂಡು ಶಿಕ್ಷಣವನ್ನು ಸಾರ್ಥಕಗೊಳಿಸಿಕೊಳ್ಳಬೇಕು’ ಎಂದು ಪೂರ್ಣಪ್ರಜ್ಞ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಈಶಪ್ರಿಯತೀರ್ಥ ಶ್ರೀಪಾದರು ಹೇಳಿದರು.</p>.<p>ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಅವರು ಆಶೀರ್ವಚನ ನೀ ಡಿದರು.</p>.<p>ಕೋಟ ಪಡುಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ರಾಜೇಂದ್ರ ನಾಯಕ್ ಮಾತನಾಡಿ, ಸಂಸ್ಕಾರಯುತ ಶಿಕ್ಷಣ ನೀಡುವ ಮೂಲಕ ಉತ್ತಮ ನಾಗರಿಕ ಸಮಾಜ ನಿರ್ಮಿಸುವಲ್ಲಿ ಸಂಸ್ಥೆಯ ಪಾತ್ರ ಬಹಳ ದೊಡ್ಡದು ಎಂದರು.</p>.<p>ಪ್ರಾಂಶುಪಾಲ ಚಂದ್ರಕಾಂತ್ ಭಟ್, ಆಂತರಿಕ ಗುಣಮಟ್ಟ ಖಾತರಿ ಘಟಕದ ಸಂಯೋಜಕ ರಾಘವೇಂದ್ರ ಎಲ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ವಿನಾಯಕ್ ಪೈ ಬಿ, ಪ್ರಜ್ಞಾ ಮಾರ್ಪಳ್ಳಿ, ಗಗನ್ ಕೆ. ಸುವರ್ಣ, ಧೀರಜ್, ಖುಷಿ ಶೆಟ್ಟಿ, ಉಜ್ವಲ್ ನಾಯಕ್ ಭಾಗವಹಿಸಿದ್ದರು.</p>.<p>ಕಾಲೇಜಿನ ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಎ.ಟಿ. ಪ್ರಶಾಂತ್ ಹೊಳ್ಳ ಸ್ವಾಗತಿಸಿದರು. ವಿನಾಯಕ್ ಪೈ ಬಿ. ವಂದಿಸಿದರು. ರಾನಿಯಾ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-28-548538191</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>