<p>ಉಡುಪಿ: ಇಂದಿನ ಸ್ವರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಬಹಳ ಪ್ರತಿಭಾನ್ವಿತರಾಗಿತ್ತಾರೆ. ಹಾಗಾಗಿ ಶಿಕ್ಷಕರು ಪ್ರತಿವರ್ಷ ವೃತ್ತಿ ಪ್ರವೃತ್ತಿಯಲ್ಲಿ ಕ್ರಿಯಾಶೀಲರಾಗಿ ಮಕ್ಕಳ ಮನೋಭಾವವನ್ನು ಅರಿತು ಬೋಧಿಸಬೇಕಾಗುತ್ತದೆ ಎಂದು ಮಣಿಪಾಲದ ಮಾಹೆಯ ಔದ್ಯೋಗಿಕ ಪ್ರಕ್ರಿಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶಾಲಿನಿ ಕ್ವಾಡ್ರಸ್ ಹೇಳಿದರು.</p>.<p>ಸಂತೆಕಟ್ಟೆಯ ಮೌಂಟ್ ರೋಸರಿ ಶಾಲಾ ಶಿಕ್ಷಕರಿಗೆ ಏರ್ಪಡಿಸಿದ ಪುನಶ್ಚೇತನ ಕಾರ್ಯಾಗಾರದಲ್ಲಿ ಅವರು ಮಾತನಾಡಿ, ಹಳೆಯ ಉದಾಹರಣೆಗಳ ಬದಲಿಗೆ ಪ್ರಚಲಿತ ವಿಷಯಗಳ ಉದಾಹರಣೆ ನೀಡಿ ಪಾಠಮಾಡಬೇಕು. ಯಾಕೆಂದರೆ ವಿದ್ಯಾರ್ಥಿಗಳು ಲವಲವಿಕೆ ಪಾಠವನ್ನು ಇಷ್ಟಪಡುತ್ತಾರೆ ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯಸ್ಥೆ ಆನ್ಸಿಲ್ಲಾ ಡಿಮೆಲ್ಲೊ ಮಾತನಾಡಿ, ಶಿಕ್ಷಕರು ಸದಾ ವಿದ್ಯಾರ್ಥಿಗಳಂತೆ ತಮ್ಮ ವಿಷಯದಲ್ಲಿ ಹೊಸತನವನ್ನು ಅಳವಡಿಸಿಕೊಳ್ಳಲು ಉತ್ಸುಕರಾಗಬೇಕು ಎಂದು ಹೇಳಿದರು.</p>.<p>ಶಿಕ್ಷಕಿ ಅಮೃತಾ ಸ್ವಾಗತಿಸಿದರು. ಮಾರ್ತ ಅತಿಥಿಗಳ ಪರಿಚಯ ಮಾಡಿಕೊಟ್ಟರು. ದಿವ್ಯಾಜೋತಿ ನಿರೂಪಿಸಿದರು. ಸಾರಾ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-28-1770785280</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಇಂದಿನ ಸ್ವರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಬಹಳ ಪ್ರತಿಭಾನ್ವಿತರಾಗಿತ್ತಾರೆ. ಹಾಗಾಗಿ ಶಿಕ್ಷಕರು ಪ್ರತಿವರ್ಷ ವೃತ್ತಿ ಪ್ರವೃತ್ತಿಯಲ್ಲಿ ಕ್ರಿಯಾಶೀಲರಾಗಿ ಮಕ್ಕಳ ಮನೋಭಾವವನ್ನು ಅರಿತು ಬೋಧಿಸಬೇಕಾಗುತ್ತದೆ ಎಂದು ಮಣಿಪಾಲದ ಮಾಹೆಯ ಔದ್ಯೋಗಿಕ ಪ್ರಕ್ರಿಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶಾಲಿನಿ ಕ್ವಾಡ್ರಸ್ ಹೇಳಿದರು.</p>.<p>ಸಂತೆಕಟ್ಟೆಯ ಮೌಂಟ್ ರೋಸರಿ ಶಾಲಾ ಶಿಕ್ಷಕರಿಗೆ ಏರ್ಪಡಿಸಿದ ಪುನಶ್ಚೇತನ ಕಾರ್ಯಾಗಾರದಲ್ಲಿ ಅವರು ಮಾತನಾಡಿ, ಹಳೆಯ ಉದಾಹರಣೆಗಳ ಬದಲಿಗೆ ಪ್ರಚಲಿತ ವಿಷಯಗಳ ಉದಾಹರಣೆ ನೀಡಿ ಪಾಠಮಾಡಬೇಕು. ಯಾಕೆಂದರೆ ವಿದ್ಯಾರ್ಥಿಗಳು ಲವಲವಿಕೆ ಪಾಠವನ್ನು ಇಷ್ಟಪಡುತ್ತಾರೆ ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯಸ್ಥೆ ಆನ್ಸಿಲ್ಲಾ ಡಿಮೆಲ್ಲೊ ಮಾತನಾಡಿ, ಶಿಕ್ಷಕರು ಸದಾ ವಿದ್ಯಾರ್ಥಿಗಳಂತೆ ತಮ್ಮ ವಿಷಯದಲ್ಲಿ ಹೊಸತನವನ್ನು ಅಳವಡಿಸಿಕೊಳ್ಳಲು ಉತ್ಸುಕರಾಗಬೇಕು ಎಂದು ಹೇಳಿದರು.</p>.<p>ಶಿಕ್ಷಕಿ ಅಮೃತಾ ಸ್ವಾಗತಿಸಿದರು. ಮಾರ್ತ ಅತಿಥಿಗಳ ಪರಿಚಯ ಮಾಡಿಕೊಟ್ಟರು. ದಿವ್ಯಾಜೋತಿ ನಿರೂಪಿಸಿದರು. ಸಾರಾ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-28-1770785280</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>