<p>ಉಪ್ಪಿನಬೆಟಗೇರಿ: ’ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಬಿಸಿಯೂಟ, ಸಮವಸ್ತ್ರ, ಪಠ್ಯಪುಸ್ತಕ ಸೇರಿ ಅನೇಕ ಸೌಲಭ್ಯಗಳು ನೀಡಲಾಗುತ್ತಿದೆ. ಪಾಲಕರು ಮಕ್ಕಳನ್ನು ಶಾಲೆಗೆ ದಾಖಲಿಸಬೇಕು’ ಎಂದು ಬೈಲಹೊಂಗಲ ಸಕ್ಕರೆ ಕಾರ್ಖಾನೆ ನಿರ್ದೇಶಕ ಮಲ್ಲಣ್ಣ ಅಷ್ಟಗಿ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆಡಳಿತ ಸೋಮವಾರ ಏರ್ಪಡಿಸಿದ್ದ ’ಶಾಲಾ ಪ್ರಾರಂಭೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಪಿಡಿಒ ಮಧುಸೂಧನ ದೇಶಪಾಂಡೆ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ವಿದ್ಯಾವಂತ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದು, ಗುಣಮಟ್ಟದ ಶಿಕ್ಷಣ ದೊರಕುತ್ತದೆ ಎಂದರು.</p>.<p>ಎಸ್.ಡಿ.ಎಂ.ಸಿ. ಅಧ್ಯಕ್ಷ ನಿಜಗುಣಿ ಹೂಲಿ, ಪ್ರವೀಣ ಓಂಕಾರಿ ಮುಖ್ಯ ಶಿಕ್ಷಕ ಎಫ್.ಎಚ್.ಕಾಲೆಕಾನವರ ಮಾತನಾಡಿದರು.</p>.<p>ಶಾಲಾ ಮಕ್ಕಳಿಗೆ ಸಾಂಕೇತಿಕವಾಗಿ ಪಠ್ಯಪುಸ್ತಕ, ಸಮವಸ್ತ್ರ ನೀಡಲಾಯಿತು. ಎಸ್.ಡಿ.ಎಂ.ಸಿ.ಯ ನಾಗಪ್ಪ ದಿವಟಗಿ, ಗಂಗಪ್ಪ ತಳವಾರ, ರಮೇಶ ಹಳಮನಿ, ಮಾಬೂಸಬಾನಿ ನದಾಫ್ ,ಶಿಕ್ಷಕರಾದ ಸಂತೋಷ ನಾಯ್ಕರ, ಜಿ.ಎಸ್.ಬಡಸದ, ಜಿ.ಎಸ್.ಚವಾಣ, ಎ.ಎಂ.ಮೆಣಸಗಿ, ನೀಲಮ್ಮ ಬಂಗಡಿ, ದ್ರಾಕ್ಷಾಯಿಣಿ ಹಡಪದ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-24-1942473073</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಪ್ಪಿನಬೆಟಗೇರಿ: ’ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಬಿಸಿಯೂಟ, ಸಮವಸ್ತ್ರ, ಪಠ್ಯಪುಸ್ತಕ ಸೇರಿ ಅನೇಕ ಸೌಲಭ್ಯಗಳು ನೀಡಲಾಗುತ್ತಿದೆ. ಪಾಲಕರು ಮಕ್ಕಳನ್ನು ಶಾಲೆಗೆ ದಾಖಲಿಸಬೇಕು’ ಎಂದು ಬೈಲಹೊಂಗಲ ಸಕ್ಕರೆ ಕಾರ್ಖಾನೆ ನಿರ್ದೇಶಕ ಮಲ್ಲಣ್ಣ ಅಷ್ಟಗಿ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆಡಳಿತ ಸೋಮವಾರ ಏರ್ಪಡಿಸಿದ್ದ ’ಶಾಲಾ ಪ್ರಾರಂಭೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಪಿಡಿಒ ಮಧುಸೂಧನ ದೇಶಪಾಂಡೆ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ವಿದ್ಯಾವಂತ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದು, ಗುಣಮಟ್ಟದ ಶಿಕ್ಷಣ ದೊರಕುತ್ತದೆ ಎಂದರು.</p>.<p>ಎಸ್.ಡಿ.ಎಂ.ಸಿ. ಅಧ್ಯಕ್ಷ ನಿಜಗುಣಿ ಹೂಲಿ, ಪ್ರವೀಣ ಓಂಕಾರಿ ಮುಖ್ಯ ಶಿಕ್ಷಕ ಎಫ್.ಎಚ್.ಕಾಲೆಕಾನವರ ಮಾತನಾಡಿದರು.</p>.<p>ಶಾಲಾ ಮಕ್ಕಳಿಗೆ ಸಾಂಕೇತಿಕವಾಗಿ ಪಠ್ಯಪುಸ್ತಕ, ಸಮವಸ್ತ್ರ ನೀಡಲಾಯಿತು. ಎಸ್.ಡಿ.ಎಂ.ಸಿ.ಯ ನಾಗಪ್ಪ ದಿವಟಗಿ, ಗಂಗಪ್ಪ ತಳವಾರ, ರಮೇಶ ಹಳಮನಿ, ಮಾಬೂಸಬಾನಿ ನದಾಫ್ ,ಶಿಕ್ಷಕರಾದ ಸಂತೋಷ ನಾಯ್ಕರ, ಜಿ.ಎಸ್.ಬಡಸದ, ಜಿ.ಎಸ್.ಚವಾಣ, ಎ.ಎಂ.ಮೆಣಸಗಿ, ನೀಲಮ್ಮ ಬಂಗಡಿ, ದ್ರಾಕ್ಷಾಯಿಣಿ ಹಡಪದ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-24-1942473073</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>