<p><strong>ಬೆಂಗಳೂರು:</strong> ಕೊರೊನಾ ಸೋಂಕು ಹರಡುತ್ತಿರುವ ಈ ಸ್ಥಿತಿಯಲ್ಲಿ ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಲು ಮೇಲಿಂದ ಮೇಲೆ ಒತ್ತಡ ಹಾಕುವ ತಂತ್ರವನ್ನು ಸರ್ಕಾರ ಅನುಸರಿಸಿದರೆ ಮೌಲ್ಯಮಾಪನ ಬಹಿಷ್ಕಾರದಂತಹ ಕ್ರಮ ಅನಿವಾರ್ಯ ಎಂದು ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಎಚ್ಚರಿಸಿದ್ದಾರೆ.</p>.<p>ಈ ಬಗ್ಗೆ ಶುಕ್ರವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಅವರು, ‘ಮೌಲ್ಯಮಾಪನಕ್ಕೆ ಹಾಜರಾತಿ ಕಡ್ಡಾಯವಲ್ಲ ಎಂದು ಹೇಳುತ್ತಲೇ ಡಿಡಿಪಿಯುಗಳಿಂದ ಫೋನ್ ಕರೆ ಮಾಡಿಸಿ, ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗುತ್ತಿದೆ. ಸೂಕ್ತ ಸಾರಿಗೆ, ವಸತಿ ಇಲ್ಲದ ಈ ಸ್ಥಿತಿಯಲ್ಲಿ ಹೊರ ಜಿಲ್ಲೆಗಳಿಂದ ಬಂದು ಮೌಲ್ಯಮಾಪನ ಮಾಡುವುದು ಸಾಧ್ಯವೇ ಇಲ್ಲ. ಸರ್ಕಾರ ತನ್ನ ಹಟವನ್ನೇ ಮುಂದುವರಿಸಿದರೆ ಉಪನ್ಯಾಸಕರ ಸಂಘದೊಂದಿಗೆ ಚರ್ಚಿಸಿ ರಾಜ್ಯದಾದ್ಯಂತ ಮೌಲ್ಯಮಾಪನ ಬಹಿಷ್ಕಾರ ಮಾಡಬೇಕಾಗುತ್ತದೆ’ ಎಂದು ಹೇಳಿದ್ದಾರೆ.</p>.<p>‘ಯಾವುದೇ ಪೂರ್ವಸಿದ್ಧತೆ ಇಲ್ಲದೆ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಿರುವುದು ಆತುರದ ನಿರ್ಧಾರ. ಎಲ್ಲರೂ ಮೌಲ್ಯಮಾಪನ ಕೇಂದ್ರಕ್ಕೆ ಬಂದರೆ ಅಲ್ಲಿಯೇ ಕೊರೊನಾ ಸೋಂಕು ಹರಡುವ ಸಾಧ್ಯತೆಯೂ ಇದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.</p>.<p><strong>ಸೋಮವಾರ ನಿರ್ಧಾರ:</strong> ‘ಡಿಡಿಪಿಯುಗಳಿಂದ ಒತ್ತಡ ತಂತ್ರ ಫಲಿಸುವುದಿಲ್ಲ ಎಂದು ಗೊತ್ತಾಗಿ ಇದೀಗ ಜಿಲ್ಲಾಧಿಕಾರಿಗಳಿಂದಲೇ ಉಪನ್ಯಾಸಕರಿಗೆ ಒತ್ತಡ ಹಾಕಲಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಮೌಲ್ಯಮಾಪನಕ್ಕೆ ತೆರಳದಿದ್ದರೆ ವೇತನ ರಹಿತ ರಜೆ ಎಂದು ಪರಿಗಣಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ. ಮೌಲ್ಯಮಾಪನ ವಿಕೇಂದ್ರೀಕರಣ ಮಾಡದ ಸರ್ಕಾರ ಈ ರೀತಿ ಒತ್ತಡ ತಂತ್ರ ರೂಪಿಸಿದರೆ ಮೌಲ್ಯಮಾಪನ ಬಹಿಷ್ಕಾರ ಕುರಿತು ಸೋಮವಾರದ ಬಳಿಕ ನಿರ್ಧಾರಕ್ಕೆ ಬರಬೇಕಾಗುತ್ತದೆ’ ಎಂದು ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡ ಎಚ್ಚರಿಸಿದ್ದಾರೆ.</p>.<p>ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಸಹ ಕಡ್ಡಾಯ ಮೌಲ್ಯಮಾಪನದಿಂದ ಉಪನ್ಯಾಸಕರಿಗೆ ಈ ಬಾರಿ ವಿನಾಯಿತಿ ಕೊಡಲೇಬೇಕು ಎಂದು ಕೋರಿ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೊರೊನಾ ಸೋಂಕು ಹರಡುತ್ತಿರುವ ಈ ಸ್ಥಿತಿಯಲ್ಲಿ ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಲು ಮೇಲಿಂದ ಮೇಲೆ ಒತ್ತಡ ಹಾಕುವ ತಂತ್ರವನ್ನು ಸರ್ಕಾರ ಅನುಸರಿಸಿದರೆ ಮೌಲ್ಯಮಾಪನ ಬಹಿಷ್ಕಾರದಂತಹ ಕ್ರಮ ಅನಿವಾರ್ಯ ಎಂದು ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಎಚ್ಚರಿಸಿದ್ದಾರೆ.</p>.<p>ಈ ಬಗ್ಗೆ ಶುಕ್ರವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಅವರು, ‘ಮೌಲ್ಯಮಾಪನಕ್ಕೆ ಹಾಜರಾತಿ ಕಡ್ಡಾಯವಲ್ಲ ಎಂದು ಹೇಳುತ್ತಲೇ ಡಿಡಿಪಿಯುಗಳಿಂದ ಫೋನ್ ಕರೆ ಮಾಡಿಸಿ, ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗುತ್ತಿದೆ. ಸೂಕ್ತ ಸಾರಿಗೆ, ವಸತಿ ಇಲ್ಲದ ಈ ಸ್ಥಿತಿಯಲ್ಲಿ ಹೊರ ಜಿಲ್ಲೆಗಳಿಂದ ಬಂದು ಮೌಲ್ಯಮಾಪನ ಮಾಡುವುದು ಸಾಧ್ಯವೇ ಇಲ್ಲ. ಸರ್ಕಾರ ತನ್ನ ಹಟವನ್ನೇ ಮುಂದುವರಿಸಿದರೆ ಉಪನ್ಯಾಸಕರ ಸಂಘದೊಂದಿಗೆ ಚರ್ಚಿಸಿ ರಾಜ್ಯದಾದ್ಯಂತ ಮೌಲ್ಯಮಾಪನ ಬಹಿಷ್ಕಾರ ಮಾಡಬೇಕಾಗುತ್ತದೆ’ ಎಂದು ಹೇಳಿದ್ದಾರೆ.</p>.<p>‘ಯಾವುದೇ ಪೂರ್ವಸಿದ್ಧತೆ ಇಲ್ಲದೆ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಿರುವುದು ಆತುರದ ನಿರ್ಧಾರ. ಎಲ್ಲರೂ ಮೌಲ್ಯಮಾಪನ ಕೇಂದ್ರಕ್ಕೆ ಬಂದರೆ ಅಲ್ಲಿಯೇ ಕೊರೊನಾ ಸೋಂಕು ಹರಡುವ ಸಾಧ್ಯತೆಯೂ ಇದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.</p>.<p><strong>ಸೋಮವಾರ ನಿರ್ಧಾರ:</strong> ‘ಡಿಡಿಪಿಯುಗಳಿಂದ ಒತ್ತಡ ತಂತ್ರ ಫಲಿಸುವುದಿಲ್ಲ ಎಂದು ಗೊತ್ತಾಗಿ ಇದೀಗ ಜಿಲ್ಲಾಧಿಕಾರಿಗಳಿಂದಲೇ ಉಪನ್ಯಾಸಕರಿಗೆ ಒತ್ತಡ ಹಾಕಲಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಮೌಲ್ಯಮಾಪನಕ್ಕೆ ತೆರಳದಿದ್ದರೆ ವೇತನ ರಹಿತ ರಜೆ ಎಂದು ಪರಿಗಣಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ. ಮೌಲ್ಯಮಾಪನ ವಿಕೇಂದ್ರೀಕರಣ ಮಾಡದ ಸರ್ಕಾರ ಈ ರೀತಿ ಒತ್ತಡ ತಂತ್ರ ರೂಪಿಸಿದರೆ ಮೌಲ್ಯಮಾಪನ ಬಹಿಷ್ಕಾರ ಕುರಿತು ಸೋಮವಾರದ ಬಳಿಕ ನಿರ್ಧಾರಕ್ಕೆ ಬರಬೇಕಾಗುತ್ತದೆ’ ಎಂದು ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡ ಎಚ್ಚರಿಸಿದ್ದಾರೆ.</p>.<p>ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಸಹ ಕಡ್ಡಾಯ ಮೌಲ್ಯಮಾಪನದಿಂದ ಉಪನ್ಯಾಸಕರಿಗೆ ಈ ಬಾರಿ ವಿನಾಯಿತಿ ಕೊಡಲೇಬೇಕು ಎಂದು ಕೋರಿ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>