<p>ವಿಜಯಪುರ: ವಿಜಯಪುರದಲ್ಲಿ ಇದೇ ತಿಂಗಳು 10 ರಿಂದ 14ರವರೆಗೆ ‘ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳ’ ನಡೆಯಲಿದೆ. ಮೇ ಸಾಹಿತ್ಯ ಮೇಳ, ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ನಡೆಯುವ ಈ ಮೇಳದಲ್ಲಿ ರಾಜ್ಯದ ವಿವಿಧೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕಾಶಕರು, ಓದುಗರು, ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸುವರು.</p>.<p>ಪ್ರತಿಷ್ಠಿತ ಪುಸ್ತಕ ಪ್ರಕಾಶನ ಸಂಸ್ಥೆ, ವಿವಿಧ ವಿಶ್ವವಿದ್ಯಾಲಯಗಳ ಪ್ರಸಾರಂಗಗಳ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ನಡೆಯುವ ಈ ಮೇಳದಲ್ಲಿ ನಾಡಿನ ಹೆಸರಾಂತ ಲೇಖಕರೊಂದಿಗೆ ಸಂವಾದ, ವಿದ್ಯಾರ್ಥಿಗಳ ಮಾತು, ಕವಿಗೋಷ್ಠಿ, ಪತ್ರಕರ್ತರ ಅನುಭವದ ನುಡಿಗಳು ಇರಲಿವೆ. ಸಾಂಸ್ಕೃತಿಕ ಕಾರ್ಯಕ್ರಮಗಳೂ ಕೂಡ ನಡೆಯಲಿವೆ.</p>.<p>‘ರಾಜ್ಯ ಸರ್ಕಾರ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಸಂಘಟನೆಗಳು ಆಯೋಜಿಸುವ ಸಾಂಪ್ರದಾಯಕ ಪುಸ್ತಕ ಮೇಳಕ್ಕೂ ವಿಜಯಪುರದಲ್ಲಿ ಆಯೋಜಿಸುತ್ತಿರುವ ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳಕ್ಕೂ ವ್ಯತ್ಯಸವಿದೆ’ ಎಂದು ಪುಸ್ತಕ ಮೇಳದ ಆಯೋಜಕ ಬಸವರಾಜ ಸೂಳಿಬಾವಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಬಹುತೇಕ ಪುಸ್ತಕ ಮೇಳದಲ್ಲಿ ಎಲ್ಲ ಬಗೆಯ ಲೇಖಕರ, ಎಲ್ಲ ವಿಷಯಗಳು ಒಳಗೊಂಡ ಪುಸ್ತಕಗಳ ಪ್ರದರ್ಶನ, ಮಾರಾಟಕ್ಕೆ ಅವಕಾಶ ಇರುತ್ತದೆ. ಆದರೆ, ಈ ಮೇಳದಲ್ಲಿ ಜೀವಪರ, ಮನುಷ್ಯ ಪರ, ಸೌಹಾರ್ದ ಮೂಡಿಸುವ, ಪ್ರಗತಿಪರವಾದ ಆಯ್ದ ಪುಸ್ತಕಗಳ ಪ್ರದರ್ಶನ, ಮಾರಾಟಕ್ಕೆ ಮಾತ್ರ ಅವಕಾಶ ಇರಲಿದೆ’ ಎಂದರು.</p>.<p>ರಿಯಾಯಿತಿ ಮಾರಾಟ: ‘ಪುಸ್ತಕ ಮೇಳದಲ್ಲಿ ಪಾಲ್ಗೊಳ್ಳುವ ಪ್ರಕಾಶಕರಿಂದ ಅಲ್ಪ ಮೊತ್ತದ ಶುಲ್ಕ ಸಂಗ್ರಹಿಸಲಾಗುವುದು, ಪ್ರಕಾಶಕರಿಗೆ ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟವಿದೆ’ ಎಂದು ಪುಸ್ತಕ ಮೇಳದ ಸಂಘಟಕ ಅನಿಲ ಹೊಸಮನಿ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-21-903794105</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ವಿಜಯಪುರದಲ್ಲಿ ಇದೇ ತಿಂಗಳು 10 ರಿಂದ 14ರವರೆಗೆ ‘ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳ’ ನಡೆಯಲಿದೆ. ಮೇ ಸಾಹಿತ್ಯ ಮೇಳ, ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ನಡೆಯುವ ಈ ಮೇಳದಲ್ಲಿ ರಾಜ್ಯದ ವಿವಿಧೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕಾಶಕರು, ಓದುಗರು, ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸುವರು.</p>.<p>ಪ್ರತಿಷ್ಠಿತ ಪುಸ್ತಕ ಪ್ರಕಾಶನ ಸಂಸ್ಥೆ, ವಿವಿಧ ವಿಶ್ವವಿದ್ಯಾಲಯಗಳ ಪ್ರಸಾರಂಗಗಳ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ನಡೆಯುವ ಈ ಮೇಳದಲ್ಲಿ ನಾಡಿನ ಹೆಸರಾಂತ ಲೇಖಕರೊಂದಿಗೆ ಸಂವಾದ, ವಿದ್ಯಾರ್ಥಿಗಳ ಮಾತು, ಕವಿಗೋಷ್ಠಿ, ಪತ್ರಕರ್ತರ ಅನುಭವದ ನುಡಿಗಳು ಇರಲಿವೆ. ಸಾಂಸ್ಕೃತಿಕ ಕಾರ್ಯಕ್ರಮಗಳೂ ಕೂಡ ನಡೆಯಲಿವೆ.</p>.<p>‘ರಾಜ್ಯ ಸರ್ಕಾರ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಸಂಘಟನೆಗಳು ಆಯೋಜಿಸುವ ಸಾಂಪ್ರದಾಯಕ ಪುಸ್ತಕ ಮೇಳಕ್ಕೂ ವಿಜಯಪುರದಲ್ಲಿ ಆಯೋಜಿಸುತ್ತಿರುವ ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳಕ್ಕೂ ವ್ಯತ್ಯಸವಿದೆ’ ಎಂದು ಪುಸ್ತಕ ಮೇಳದ ಆಯೋಜಕ ಬಸವರಾಜ ಸೂಳಿಬಾವಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಬಹುತೇಕ ಪುಸ್ತಕ ಮೇಳದಲ್ಲಿ ಎಲ್ಲ ಬಗೆಯ ಲೇಖಕರ, ಎಲ್ಲ ವಿಷಯಗಳು ಒಳಗೊಂಡ ಪುಸ್ತಕಗಳ ಪ್ರದರ್ಶನ, ಮಾರಾಟಕ್ಕೆ ಅವಕಾಶ ಇರುತ್ತದೆ. ಆದರೆ, ಈ ಮೇಳದಲ್ಲಿ ಜೀವಪರ, ಮನುಷ್ಯ ಪರ, ಸೌಹಾರ್ದ ಮೂಡಿಸುವ, ಪ್ರಗತಿಪರವಾದ ಆಯ್ದ ಪುಸ್ತಕಗಳ ಪ್ರದರ್ಶನ, ಮಾರಾಟಕ್ಕೆ ಮಾತ್ರ ಅವಕಾಶ ಇರಲಿದೆ’ ಎಂದರು.</p>.<p>ರಿಯಾಯಿತಿ ಮಾರಾಟ: ‘ಪುಸ್ತಕ ಮೇಳದಲ್ಲಿ ಪಾಲ್ಗೊಳ್ಳುವ ಪ್ರಕಾಶಕರಿಂದ ಅಲ್ಪ ಮೊತ್ತದ ಶುಲ್ಕ ಸಂಗ್ರಹಿಸಲಾಗುವುದು, ಪ್ರಕಾಶಕರಿಗೆ ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟವಿದೆ’ ಎಂದು ಪುಸ್ತಕ ಮೇಳದ ಸಂಘಟಕ ಅನಿಲ ಹೊಸಮನಿ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-21-903794105</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>