<p>ಚಡಚಣ: ಅನಾದಿ ಕಾಲದಿಂದಲೂ ಭಾರತದಲ್ಲಿ ಗುರುವಿಗೆ ಶ್ರೇಷ್ಠ ಸ್ಥಾನವಿದೆ. ಭಾರತೀಯ ಸಂಸ್ಕೃತಿಯಲ್ಲಿ ಗುರು- ಶಿಷ್ಯ ಪರಂಪರೆ ಶ್ರೇಷ್ಠ ಭಾವನಾತ್ಮಕ ಸಂಬಂಧ ಹೊಂದಿದೆ ಎಂದು ಇಂಡಿ ಸರ್ಕಾರಿ ಪದವಿ ಕಾಲೇಜಿನ ಪ್ರಾಧ್ಯಾಪಕ ರವಿಕುಮಾರ ಅರಳಿ ಹೇಳಿದರು.</p>.<p>ಸಮೀಪದ ಹಲಸಂಗಿ ಗ್ರಾಮದ ಅರವಿಂದ ಪ್ರೌಢ ಶಾಲೆಯಲ್ಲಿ 2004 –05ನೇ ಸಾಲಿನಲ್ಲಿ ಎಸ್.ಎಸ್.ಎಲ್ ಸಿ ವಿದ್ಯಾರ್ಥಿಗಳು ಭಾನುವಾರ ಆಯೋಜಿಸಿದ್ದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಹಿತಿ ಸುಮಿತ್ ಮೇತ್ರಿ ಮಾತನಾಡಿದರು.</p>.<p>ಅರವಿಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅರವಿಂದ ಮನಮಿ ಮಾತನಾಡಿ, 21 ವರ್ಷಗಳ ನಂತರ ಸಹಪಾಠಿಗಳೆಲ್ಲ ಒಂದೆಡೆ ಸೇರಿ ತಾವು ಕಲಿಸಿದ ಗುರುಗಳಿಗೆ ಸ್ಮಾನಿಸಿ, ಗೌರವಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.</p>.<p>ಶಾಲಾ ಹಳೆಯ ವಿದ್ಯಾರ್ಥಿ ಮಹಾದೇವ ಮಡ್ಡಿ ಮಾತನಾಡಿ, ಸ್ನೇಹಿತರು ಒಂದೆಡೆ ಸೇರಿ ತಮ್ಮ ಬಾಲ್ಯದ ನೆನಪುಗಳನ್ನು ಮೆಲಕು ಹಾಕುವ ಸುಯೋಗ ಕೂಡಿಬಂದಿದ್ದು ನಮ್ಮೆಲ್ಲರ ಸೌಭಾಗ್ಯ ಎಂದರು.</p>.<p>ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಡಿ.ಬಿ.ತಿಕೋಟಿ ಮಾತನಾಡಿ, ಗುರು-ಶಿಷ್ಯ ಪರಂಪರೆಯನ್ನು ಶ್ಲಾಘಿಸಿದರು.</p>.<p>ಸಾನ್ನಿಧ್ಯ ವಹಿಸಿದ ತಡವಲಗಾ ಹಿರೇಮಠದ ಅಭಿನವರಾಚೋಟೇಶ್ವರ ಶಿವಾಚಾರ್ಯ ಮಾತನಾಡಿದರು.</p>.<p>ನಿವೃತ್ತ ಶಿಕ್ಷಕರಾದ ಸಿದ್ಧಾರಾಮ ಖೇಡಗಿ, ಮಲ್ಲಪ್ಪ ಮದಭಾವಿ, ಬಾಲಾಸಾಹೇಬ ಮನವಿ, ಶಿಕ್ಷಕರಾದ ಚಂದ್ರಶೇಖರ ಬಗಲಿ, ರಮೇಶ ನಾಯಕ್, ಅಲ್ಲಮಪ್ರಭು ಕರ್ಜಗಿ, ಮಲ್ಲಿಕಾರ್ಜುನ ಗಾಯಕವಾಡ, ಸುವರ್ಣಬಾಯಿ ವಾಲಿಕಾರ ಅವರನ್ನು ಗೌರವಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-26-296417888</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಡಚಣ: ಅನಾದಿ ಕಾಲದಿಂದಲೂ ಭಾರತದಲ್ಲಿ ಗುರುವಿಗೆ ಶ್ರೇಷ್ಠ ಸ್ಥಾನವಿದೆ. ಭಾರತೀಯ ಸಂಸ್ಕೃತಿಯಲ್ಲಿ ಗುರು- ಶಿಷ್ಯ ಪರಂಪರೆ ಶ್ರೇಷ್ಠ ಭಾವನಾತ್ಮಕ ಸಂಬಂಧ ಹೊಂದಿದೆ ಎಂದು ಇಂಡಿ ಸರ್ಕಾರಿ ಪದವಿ ಕಾಲೇಜಿನ ಪ್ರಾಧ್ಯಾಪಕ ರವಿಕುಮಾರ ಅರಳಿ ಹೇಳಿದರು.</p>.<p>ಸಮೀಪದ ಹಲಸಂಗಿ ಗ್ರಾಮದ ಅರವಿಂದ ಪ್ರೌಢ ಶಾಲೆಯಲ್ಲಿ 2004 –05ನೇ ಸಾಲಿನಲ್ಲಿ ಎಸ್.ಎಸ್.ಎಲ್ ಸಿ ವಿದ್ಯಾರ್ಥಿಗಳು ಭಾನುವಾರ ಆಯೋಜಿಸಿದ್ದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಹಿತಿ ಸುಮಿತ್ ಮೇತ್ರಿ ಮಾತನಾಡಿದರು.</p>.<p>ಅರವಿಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅರವಿಂದ ಮನಮಿ ಮಾತನಾಡಿ, 21 ವರ್ಷಗಳ ನಂತರ ಸಹಪಾಠಿಗಳೆಲ್ಲ ಒಂದೆಡೆ ಸೇರಿ ತಾವು ಕಲಿಸಿದ ಗುರುಗಳಿಗೆ ಸ್ಮಾನಿಸಿ, ಗೌರವಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.</p>.<p>ಶಾಲಾ ಹಳೆಯ ವಿದ್ಯಾರ್ಥಿ ಮಹಾದೇವ ಮಡ್ಡಿ ಮಾತನಾಡಿ, ಸ್ನೇಹಿತರು ಒಂದೆಡೆ ಸೇರಿ ತಮ್ಮ ಬಾಲ್ಯದ ನೆನಪುಗಳನ್ನು ಮೆಲಕು ಹಾಕುವ ಸುಯೋಗ ಕೂಡಿಬಂದಿದ್ದು ನಮ್ಮೆಲ್ಲರ ಸೌಭಾಗ್ಯ ಎಂದರು.</p>.<p>ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಡಿ.ಬಿ.ತಿಕೋಟಿ ಮಾತನಾಡಿ, ಗುರು-ಶಿಷ್ಯ ಪರಂಪರೆಯನ್ನು ಶ್ಲಾಘಿಸಿದರು.</p>.<p>ಸಾನ್ನಿಧ್ಯ ವಹಿಸಿದ ತಡವಲಗಾ ಹಿರೇಮಠದ ಅಭಿನವರಾಚೋಟೇಶ್ವರ ಶಿವಾಚಾರ್ಯ ಮಾತನಾಡಿದರು.</p>.<p>ನಿವೃತ್ತ ಶಿಕ್ಷಕರಾದ ಸಿದ್ಧಾರಾಮ ಖೇಡಗಿ, ಮಲ್ಲಪ್ಪ ಮದಭಾವಿ, ಬಾಲಾಸಾಹೇಬ ಮನವಿ, ಶಿಕ್ಷಕರಾದ ಚಂದ್ರಶೇಖರ ಬಗಲಿ, ರಮೇಶ ನಾಯಕ್, ಅಲ್ಲಮಪ್ರಭು ಕರ್ಜಗಿ, ಮಲ್ಲಿಕಾರ್ಜುನ ಗಾಯಕವಾಡ, ಸುವರ್ಣಬಾಯಿ ವಾಲಿಕಾರ ಅವರನ್ನು ಗೌರವಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-26-296417888</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>