<p>ಸಿಂದಗಿ: ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ, ಹೀಗಾಗಿ ಸಂಸ್ಕಾರಯುತ ಶಿಕ್ಷಣ ನೀಡುವ ಶಾಲಾ-ಕಾಲೇಜುಗಳ ಅಗತ್ಯ ತುಂಬಾ ಇದೆ ಎಂದು ಶಿಕ್ಷಕ ಸಾಹಿತಿ ಬಸವರಾಜ ಅಗಸರ ಹೇಳಿದರು.</p>.<p>ಇಲ್ಲಿಯ ಬಂದಾಳ ರಸ್ತೆ ಶಾಂತವೀರನಗರದಲ್ಲಿನ ಸಂಗಮೇಶ್ವರ ವಿದ್ಯಾಲಯದ ಮಲ್ಲಿಕಾರ್ಜುನ ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳ ಗೌರವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ವಿದ್ಯಾರ್ಥಿಗಳಲ್ಲಿ ಸಂಕಲ್ಪ, ಏಕಾಗ್ರತೆ, ಸಾಧಿಸುವ ಛಲವಿರಬೇಕು. ಅಂದಾಗಲೇ ಸಾಧನೆ ಸಾಧ್ಯ ಎಂದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಮುತ್ತುರಾಜ ಮಂದೇವಾಲಿ ಮಾತನಾಡಿ, ವಿದ್ಯಾರ್ಥಿಗಳು ಅನ್ವೇಷಣಾ ಮನೋಭಾವನೆ ರೂಢಿಸಿಕೊಂಡು ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.</p>.<p>ಸಂಗಮೇಶ್ವರ ವಿದ್ಯಾಲಯದ ಸಂಚಾಲಕ ಗುರುನಾಥ ಅರಳಗುಂಡಗಿ, ವಿಜಯಪುರ ತೋಟಗಾರಿಕೆ ಇಲಾಖೆಯ ಸಮಾಲೋಚಕಿ ಮಹಾದೇವಿ ಅಂಬಲಿ ಮಾತನಾಡಿದರು.</p>.<p>ಪ್ರತಿಭಾವಂತ ವಿದ್ಯಾರ್ಥಿಗಳಾದ ಪ್ರೇಮಾ ವಾಲಿಕಾರ, ಜಯರಾಮ ಮಂದೇವಾಲಿ, ಅನಿತಾ ದಂಡಗೊಂಡ, ಶರತ್ ಹಡಪದ, ಪೂರ್ಣಿಮಾ ಬಿರಾದಾರ ಅವರನ್ನು ಗೌರವಿಸಲಾಯಿತು.</p>.<p>ವಿದ್ಯಾರ್ಥಿ ಪಾಲಕರನ್ನು ಕೂಡ ಸನ್ಮಾನಿಸಲಾಯಿತು. ಶಿಕ್ಷಕಿ ಎಸ್.ವೈ.ತಾಳಿಕೋಟಿ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಶಿಕ್ಷಕ ಶಂಕರ ಮಡ್ನಳ್ಳಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-26-1570941819</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂದಗಿ: ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ, ಹೀಗಾಗಿ ಸಂಸ್ಕಾರಯುತ ಶಿಕ್ಷಣ ನೀಡುವ ಶಾಲಾ-ಕಾಲೇಜುಗಳ ಅಗತ್ಯ ತುಂಬಾ ಇದೆ ಎಂದು ಶಿಕ್ಷಕ ಸಾಹಿತಿ ಬಸವರಾಜ ಅಗಸರ ಹೇಳಿದರು.</p>.<p>ಇಲ್ಲಿಯ ಬಂದಾಳ ರಸ್ತೆ ಶಾಂತವೀರನಗರದಲ್ಲಿನ ಸಂಗಮೇಶ್ವರ ವಿದ್ಯಾಲಯದ ಮಲ್ಲಿಕಾರ್ಜುನ ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳ ಗೌರವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ವಿದ್ಯಾರ್ಥಿಗಳಲ್ಲಿ ಸಂಕಲ್ಪ, ಏಕಾಗ್ರತೆ, ಸಾಧಿಸುವ ಛಲವಿರಬೇಕು. ಅಂದಾಗಲೇ ಸಾಧನೆ ಸಾಧ್ಯ ಎಂದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಮುತ್ತುರಾಜ ಮಂದೇವಾಲಿ ಮಾತನಾಡಿ, ವಿದ್ಯಾರ್ಥಿಗಳು ಅನ್ವೇಷಣಾ ಮನೋಭಾವನೆ ರೂಢಿಸಿಕೊಂಡು ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.</p>.<p>ಸಂಗಮೇಶ್ವರ ವಿದ್ಯಾಲಯದ ಸಂಚಾಲಕ ಗುರುನಾಥ ಅರಳಗುಂಡಗಿ, ವಿಜಯಪುರ ತೋಟಗಾರಿಕೆ ಇಲಾಖೆಯ ಸಮಾಲೋಚಕಿ ಮಹಾದೇವಿ ಅಂಬಲಿ ಮಾತನಾಡಿದರು.</p>.<p>ಪ್ರತಿಭಾವಂತ ವಿದ್ಯಾರ್ಥಿಗಳಾದ ಪ್ರೇಮಾ ವಾಲಿಕಾರ, ಜಯರಾಮ ಮಂದೇವಾಲಿ, ಅನಿತಾ ದಂಡಗೊಂಡ, ಶರತ್ ಹಡಪದ, ಪೂರ್ಣಿಮಾ ಬಿರಾದಾರ ಅವರನ್ನು ಗೌರವಿಸಲಾಯಿತು.</p>.<p>ವಿದ್ಯಾರ್ಥಿ ಪಾಲಕರನ್ನು ಕೂಡ ಸನ್ಮಾನಿಸಲಾಯಿತು. ಶಿಕ್ಷಕಿ ಎಸ್.ವೈ.ತಾಳಿಕೋಟಿ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಶಿಕ್ಷಕ ಶಂಕರ ಮಡ್ನಳ್ಳಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-26-1570941819</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>