<p>ವಿರಾಜಪೇಟೆ: ಬದುಕಿನಲ್ಲಿ ಯಾವುದನ್ನೂ ಲೆಕ್ಕಿಸದೆ ದುಡಿದು, ಕುಟುಂಬದ ರಕ್ಷಿಸುವ ತಾಯಿಯ ಪಾತ್ರ ಮಹತ್ವದ್ದು’ ಎಂದು ಗೋಣಿಕೊಪ್ಪಲಿನ ಸಹಾಯಕ ಪ್ರಾಧ್ಯಾಪಕಿ ಎಸ್.ಎಂ.ರಜನಿ ಹೇಳಿದರು.</p>.<p>ಅರಮೇರಿ ಕಳಂಚೇರಿ ಮಠದಲಿಂಗರಾಜೇಂದ್ರ ಭವನದಲ್ಲಿ ಈಚೆಗೆ ನಡೆದ ಹೊಂಬೆಳಕು ಕಾರ್ಯಕ್ರಮದಲ್ಲಿ ‘ಕುಟುಂಬದ ರಕ್ಷಣೆಯಲ್ಲಿ ದುಡಿಯುವ ಮಹಿಳೆಯರ ಪಾತ್ರ’ ಎಂಬ ವಿಷಯದಲ್ಲಿ ಅವರು ಉಪನ್ಯಾಸ ನೀಡಿದರು.</p>.<p>‘ಮಗುವಿಗೆ ಯಾವುದೇ ತೊಂದರೆಯಾಗದಂತೆ ಪ್ರೀತಿ-ಮಮತೆಯಿಂದ ನೋಡಿಕೊಳ್ಳುವಳು. ಮಕ್ಕಳು ಗುಣವಂತರಾಗುವಲ್ಲಿ ತಾಯಿಯ ಪಾತ್ರ ಬಹುಮುಖ್ಯ. ಹಿರಿಯರಿಂದ ಕಲಿತ ಸಂಸ್ಕಾರವನ್ನು ಯುವಕರು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.</p>.<p>‘ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಹೆಚ್ಚುತ್ತಿದೆ. ಪೋಷಕರು ತಮ್ಮ ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು. ಇಂದು ವಿದ್ಯಾರ್ಥಿಗಳ ಕೈಯಲ್ಲಿ ಸದಾ ಮೊಬೈಲ್ ಪೋನ್ ಇರುತ್ತದೆ, ಇದು ವಿದ್ಯಾರ್ಥಿಗಳಿಗೆ ಅವಶ್ಯಕವೇ ಎಂದು ಚಿಂತಿಸಬೇಕಿದೆ’ ಎಂದರು.</p>.<p>ಕಡಂಗದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ವತ್ಸಲಾ ಶ್ರೀಶ ಚಾಲನೆ ನೀಡಿ ಮಾತನಾಡಿ, ಮನೆ ಹಾಗೂ ಮಕ್ಕಳ ಯೋಗ ಕ್ಷೇಮ ನೋಡಿಕೊಳ್ಳುವಳು ತಾಯಿ. ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ತಾಯಿ ಸದಾ ಹಂಬಲಿಸುತ್ತಾಳೆ. ತಂದೆ, ತಾಯಿ ಕಲಿಸಿದ ಸಂಸ್ಕಾರವನ್ನು ಮಕ್ಕಳು ಅಳವಡಿಸಿಕೊಳ್ಳಬೇಕು ಎಂದರು.</p>.<p>ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ತಾಯಿಯ ರೂಪದಲ್ಲಿ ದೇವರನ್ನು ಕಾಣಬಹುದು. ಹಿಂದಿನ ದಿನದಲ್ಲಿ ವಿದ್ಯೆಯಿಲ್ಲದಿದ್ದರೂ ಸರಿ, ತಪ್ಪು ಎಂಬುದನ್ನು ವಿಮರ್ಶೆ ಮಾಡುವ ಜ್ಞಾನ ಸಮಾಜದಲ್ಲಿತ್ತು. ಯಾರು ತಂದೆ-ತಾಯಿ ಆಶಿರ್ವಾದ ಪಡೆದು ಜೀವನ ನಡೆಸುತ್ತಾರೋ ಅವರು ಉತ್ತಮ ವ್ಯಕ್ತಿಗಳಾಗಲು ಸಾಧ್ಯ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಕೇಶವ ಕಾಮತ್, ಎಸ್.ವಿ.ನರಸಿಂಹನ್, ಸಾಹಿತಿ ಕಿಗ್ಗಾಲು ಗಿರೀಶ್, ವೈಲೇಶ್, ಕೃಷಿಕರಾದ ತಿಮ್ಮಪ್ಪಯ್ಯ, ವೆಂಕಟಗಿರಿ, ಉಪನ್ಯಾಸಕ ಹರೀಶ್ ಕಿಗ್ಗಾಲು ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-51-1010449924</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿರಾಜಪೇಟೆ: ಬದುಕಿನಲ್ಲಿ ಯಾವುದನ್ನೂ ಲೆಕ್ಕಿಸದೆ ದುಡಿದು, ಕುಟುಂಬದ ರಕ್ಷಿಸುವ ತಾಯಿಯ ಪಾತ್ರ ಮಹತ್ವದ್ದು’ ಎಂದು ಗೋಣಿಕೊಪ್ಪಲಿನ ಸಹಾಯಕ ಪ್ರಾಧ್ಯಾಪಕಿ ಎಸ್.ಎಂ.ರಜನಿ ಹೇಳಿದರು.</p>.<p>ಅರಮೇರಿ ಕಳಂಚೇರಿ ಮಠದಲಿಂಗರಾಜೇಂದ್ರ ಭವನದಲ್ಲಿ ಈಚೆಗೆ ನಡೆದ ಹೊಂಬೆಳಕು ಕಾರ್ಯಕ್ರಮದಲ್ಲಿ ‘ಕುಟುಂಬದ ರಕ್ಷಣೆಯಲ್ಲಿ ದುಡಿಯುವ ಮಹಿಳೆಯರ ಪಾತ್ರ’ ಎಂಬ ವಿಷಯದಲ್ಲಿ ಅವರು ಉಪನ್ಯಾಸ ನೀಡಿದರು.</p>.<p>‘ಮಗುವಿಗೆ ಯಾವುದೇ ತೊಂದರೆಯಾಗದಂತೆ ಪ್ರೀತಿ-ಮಮತೆಯಿಂದ ನೋಡಿಕೊಳ್ಳುವಳು. ಮಕ್ಕಳು ಗುಣವಂತರಾಗುವಲ್ಲಿ ತಾಯಿಯ ಪಾತ್ರ ಬಹುಮುಖ್ಯ. ಹಿರಿಯರಿಂದ ಕಲಿತ ಸಂಸ್ಕಾರವನ್ನು ಯುವಕರು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.</p>.<p>‘ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಹೆಚ್ಚುತ್ತಿದೆ. ಪೋಷಕರು ತಮ್ಮ ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು. ಇಂದು ವಿದ್ಯಾರ್ಥಿಗಳ ಕೈಯಲ್ಲಿ ಸದಾ ಮೊಬೈಲ್ ಪೋನ್ ಇರುತ್ತದೆ, ಇದು ವಿದ್ಯಾರ್ಥಿಗಳಿಗೆ ಅವಶ್ಯಕವೇ ಎಂದು ಚಿಂತಿಸಬೇಕಿದೆ’ ಎಂದರು.</p>.<p>ಕಡಂಗದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ವತ್ಸಲಾ ಶ್ರೀಶ ಚಾಲನೆ ನೀಡಿ ಮಾತನಾಡಿ, ಮನೆ ಹಾಗೂ ಮಕ್ಕಳ ಯೋಗ ಕ್ಷೇಮ ನೋಡಿಕೊಳ್ಳುವಳು ತಾಯಿ. ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ತಾಯಿ ಸದಾ ಹಂಬಲಿಸುತ್ತಾಳೆ. ತಂದೆ, ತಾಯಿ ಕಲಿಸಿದ ಸಂಸ್ಕಾರವನ್ನು ಮಕ್ಕಳು ಅಳವಡಿಸಿಕೊಳ್ಳಬೇಕು ಎಂದರು.</p>.<p>ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ತಾಯಿಯ ರೂಪದಲ್ಲಿ ದೇವರನ್ನು ಕಾಣಬಹುದು. ಹಿಂದಿನ ದಿನದಲ್ಲಿ ವಿದ್ಯೆಯಿಲ್ಲದಿದ್ದರೂ ಸರಿ, ತಪ್ಪು ಎಂಬುದನ್ನು ವಿಮರ್ಶೆ ಮಾಡುವ ಜ್ಞಾನ ಸಮಾಜದಲ್ಲಿತ್ತು. ಯಾರು ತಂದೆ-ತಾಯಿ ಆಶಿರ್ವಾದ ಪಡೆದು ಜೀವನ ನಡೆಸುತ್ತಾರೋ ಅವರು ಉತ್ತಮ ವ್ಯಕ್ತಿಗಳಾಗಲು ಸಾಧ್ಯ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಕೇಶವ ಕಾಮತ್, ಎಸ್.ವಿ.ನರಸಿಂಹನ್, ಸಾಹಿತಿ ಕಿಗ್ಗಾಲು ಗಿರೀಶ್, ವೈಲೇಶ್, ಕೃಷಿಕರಾದ ತಿಮ್ಮಪ್ಪಯ್ಯ, ವೆಂಕಟಗಿರಿ, ಉಪನ್ಯಾಸಕ ಹರೀಶ್ ಕಿಗ್ಗಾಲು ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-51-1010449924</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>