<p>ವಡಗೇರಾ: ತಾಲ್ಲೂಕಿನ ಕಾಡಂಗೇರಾ (ಬಿ) ಗ್ರಾಮದ ಪಿಎಂಶ್ರೀ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಸೋಮವಾರ ನಡೆದ ‘ಶಾಲಾ ಪ್ರಾರಂಭೋತ್ಸವ’ದ ಅಂಗವಾಗಿ ಶಾಲಾ ಮಕ್ಕಳು, ಶಿಕ್ಷಕರು ಮತ್ತು ಅಧಿಕಾರಿಗಳು ಎತ್ತಿನ ಬಂಡಿಗಳನ್ನು ಏರಿ ಶಾಲೆಗೆ ಬಂದರು.</p>.<p>ಗ್ರಾಮದ ಪ್ರಮುಖ ಬೀದಿಗಳಲ್ಲಿ ಎತ್ತಿನ ಬಂಡಿ ಮತ್ತು ಡೊಳ್ಳು ವಾದ್ಯಗಳ ಮೂಲಕ ಮೆರವಣಿಗೆಯಲ್ಲಿ ಶಾಲೆಗೆ ಬಂದರು.</p>.<p>ಯಾದಗಿರಿ ಡಯಟ್ ಪ್ರಾಂಶುಪಾಲ ನಿಂಗಣ್ಣ ಸಿಂಪಿ ಮಾತನಾಡಿ, ‘ತಾಲ್ಲೂಕಿನಲ್ಲಿ ಶಿಕ್ಷಕರ ಕೊರತೆ ಇದ್ದರೂ ಶೈಕ್ಷಣಿಕವಾಗಿ ಉತ್ತಮ ಗುಣಮಟ್ಟವನ್ನು ಕಾಪಾಡಿಕೊಳ್ಳಲಾಗಿದೆ. ಕಾಡಂಗೇರ ಪ್ರೌಢಶಾಲೆಯು ಪ್ರಸಕ್ತ ವರ್ಷದಲ್ಲಿ ಪ್ರತಿಶತ ಫಲಿತಾಂಶ ಪಡೆದು ಉತ್ತಮ ಸಾಧನೆ ಮಾಡಿದೆ’ ಎಂದರು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ಎನ್.ಮಂಗಳಾ, ‘ಪ್ರಸ್ತುತ ವರ್ಷದಲ್ಲಿಯೂ ಕಾಡಂಗೇರಾ ಶಾಲೆ ನೂರಕ್ಕೆ ನೂರು ಫಲಿತಾಂಶ ಸಾಧನೆ ಮಾಡಲಿ’ ಎಂದು ಹಾರೈಸಿದರು.</p>.<p>ಇಒ ಶಶಿಧರ್ ಹಿರೇಮಠ ಮಾತನಾಡಿ, ‘ಸರ್ಕಾರದಿಂದ ಶಿಕ್ಷಣಕ್ಕಾಗಿ ಸಾಕಷ್ಟು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಯಾವುದೇ ಮಗು ಶಾಲೆಯಿಂದ ಹೊರಗೆ ಉಳಿಯದಂತೆ ನೋಡಿಕೊಳ್ಳುವುದು ಶಿಕ್ಷಕರ ಮತ್ತು ಪೋಷಕರ ಕರ್ತವ್ಯ’ ಎಂದರು.</p>.<p>ಈ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕ ಆಯುಬ್ ಜಮಾದಾರ್, ಶಿಕ್ಷಣ ಸಂಯೋಜಕ ನಿಂಗನಗೌಡ ಕಲಾಲ್, ಪಿಡಿಒ ಶೇಷಗಿರಿರಾವ್ ಕುಲಕರ್ಣಿ, ಡಯಟ್ನ ಉಪನ್ಯಾಸಕರಾದ ರಂಗೋಜಿ ಕೋತಂಬರಿಕರ್, ಅಂಬ್ರಣ್ಣ, ಬಿಆರ್ಪಿ ವೆಂಕಟೇಶ್ ಗಡ್ಡದ್, ಸಿಆರ್ಪಿ ಮಲ್ಕಪ್ಪ ನಾಶಿ, ಎಸ್ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.</p>.<p>ಶಿಕ್ಷಕರಾದ ನರಸಪ್ಪ ನಿರೂಪಿಸಿ, ಖಾಜಾ ಮೈನುದ್ದೀನ್ ಸ್ವಾಗತಿಸಿ, ರಾಘವೇಂದ್ರ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-30-100854719</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಡಗೇರಾ: ತಾಲ್ಲೂಕಿನ ಕಾಡಂಗೇರಾ (ಬಿ) ಗ್ರಾಮದ ಪಿಎಂಶ್ರೀ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಸೋಮವಾರ ನಡೆದ ‘ಶಾಲಾ ಪ್ರಾರಂಭೋತ್ಸವ’ದ ಅಂಗವಾಗಿ ಶಾಲಾ ಮಕ್ಕಳು, ಶಿಕ್ಷಕರು ಮತ್ತು ಅಧಿಕಾರಿಗಳು ಎತ್ತಿನ ಬಂಡಿಗಳನ್ನು ಏರಿ ಶಾಲೆಗೆ ಬಂದರು.</p>.<p>ಗ್ರಾಮದ ಪ್ರಮುಖ ಬೀದಿಗಳಲ್ಲಿ ಎತ್ತಿನ ಬಂಡಿ ಮತ್ತು ಡೊಳ್ಳು ವಾದ್ಯಗಳ ಮೂಲಕ ಮೆರವಣಿಗೆಯಲ್ಲಿ ಶಾಲೆಗೆ ಬಂದರು.</p>.<p>ಯಾದಗಿರಿ ಡಯಟ್ ಪ್ರಾಂಶುಪಾಲ ನಿಂಗಣ್ಣ ಸಿಂಪಿ ಮಾತನಾಡಿ, ‘ತಾಲ್ಲೂಕಿನಲ್ಲಿ ಶಿಕ್ಷಕರ ಕೊರತೆ ಇದ್ದರೂ ಶೈಕ್ಷಣಿಕವಾಗಿ ಉತ್ತಮ ಗುಣಮಟ್ಟವನ್ನು ಕಾಪಾಡಿಕೊಳ್ಳಲಾಗಿದೆ. ಕಾಡಂಗೇರ ಪ್ರೌಢಶಾಲೆಯು ಪ್ರಸಕ್ತ ವರ್ಷದಲ್ಲಿ ಪ್ರತಿಶತ ಫಲಿತಾಂಶ ಪಡೆದು ಉತ್ತಮ ಸಾಧನೆ ಮಾಡಿದೆ’ ಎಂದರು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ಎನ್.ಮಂಗಳಾ, ‘ಪ್ರಸ್ತುತ ವರ್ಷದಲ್ಲಿಯೂ ಕಾಡಂಗೇರಾ ಶಾಲೆ ನೂರಕ್ಕೆ ನೂರು ಫಲಿತಾಂಶ ಸಾಧನೆ ಮಾಡಲಿ’ ಎಂದು ಹಾರೈಸಿದರು.</p>.<p>ಇಒ ಶಶಿಧರ್ ಹಿರೇಮಠ ಮಾತನಾಡಿ, ‘ಸರ್ಕಾರದಿಂದ ಶಿಕ್ಷಣಕ್ಕಾಗಿ ಸಾಕಷ್ಟು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಯಾವುದೇ ಮಗು ಶಾಲೆಯಿಂದ ಹೊರಗೆ ಉಳಿಯದಂತೆ ನೋಡಿಕೊಳ್ಳುವುದು ಶಿಕ್ಷಕರ ಮತ್ತು ಪೋಷಕರ ಕರ್ತವ್ಯ’ ಎಂದರು.</p>.<p>ಈ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕ ಆಯುಬ್ ಜಮಾದಾರ್, ಶಿಕ್ಷಣ ಸಂಯೋಜಕ ನಿಂಗನಗೌಡ ಕಲಾಲ್, ಪಿಡಿಒ ಶೇಷಗಿರಿರಾವ್ ಕುಲಕರ್ಣಿ, ಡಯಟ್ನ ಉಪನ್ಯಾಸಕರಾದ ರಂಗೋಜಿ ಕೋತಂಬರಿಕರ್, ಅಂಬ್ರಣ್ಣ, ಬಿಆರ್ಪಿ ವೆಂಕಟೇಶ್ ಗಡ್ಡದ್, ಸಿಆರ್ಪಿ ಮಲ್ಕಪ್ಪ ನಾಶಿ, ಎಸ್ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.</p>.<p>ಶಿಕ್ಷಕರಾದ ನರಸಪ್ಪ ನಿರೂಪಿಸಿ, ಖಾಜಾ ಮೈನುದ್ದೀನ್ ಸ್ವಾಗತಿಸಿ, ರಾಘವೇಂದ್ರ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-30-100854719</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>