<p>ಯಾದಗಿರಿ: ‘ಜೈಲಿನ ಕೈದಿಗಳು ತಮ್ಮ ಹಳೆಯ ತಪ್ಪುಗಳನ್ನು ತಿದ್ದಿಕೊಂಡು ಬಿಡುಗಡೆಯಾದ ಬಳಿಕ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕು ನಡೆಸಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ನ್ಯಾಯಾಧೀಶ ಮರಿಯಪ್ಪ ಹೇಳಿದರು.</p>.<p>ನಗರದ ಜಿಲ್ಲಾ ಕಾರಾಗೃಹದಲ್ಲಿ ಈಚೆಗೆ ಆಯೋಜಿಸಿಲಾಗಿದ್ದ ಮಾದಕ ವಸ್ತು ಮುಕ್ತ ಭಾರತಕ್ಕಾಗಿ ಮಾದಕ ವಸ್ತು ಜಾಗೃತಿ ಮತ್ತು ಸ್ವಾಸ್ಥ್ಯ ಸಂಚರಣೆ ಯೋಜನೆ-2025 ಅಡಿಯಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜೈಲು ಶಿಕ್ಷೆಯು ಕೇವಲ ದಂಡನೆಯಲ್ಲ. ಅದು ವ್ಯಕ್ತಿಯನ್ನು ತಿದ್ದುವ ಅವಕಾಶ. ಕೈದಿಗಳು ಮಾನಸಿಕವಾಗಿ ಬದಲಾಗಿ, ಸಮಾಜದ ಮುಖ್ಯವಾಹಿನಿಗೆ ಸೇರಲು ಸಿದ್ಧರಾಗಬೇಕು’ ಎಂದರು.</p>.<p>‘ದೇಶವನ್ನು ಮಾದಕ ವಸ್ತುಗಳ ಹಾವಳಿಯಿಂದ ಮುಕ್ತಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ವ್ಯಸನ ಮುಕ್ತ ಜೀವನವೇ ಸುಖಿ ಜೀವನಕ್ಕೆ ದಾರಿ’ ಎಂದು ಹೇಳಿದರು.</p>.<p>‘ಅರಿವಿನ ಕೊರತೆಯಿಂದ ಯಾರು ಕೂಡ ನ್ಯಾಯದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಪ್ರಾಧಿಕಾರವು ಸದಾ ನೆರವಿಗೆ ಬರಲಿದೆ’ ಎಂದರು.</p>.<p>ಕಾರಾಗೃಹ ಅಧೀಕ್ಷಕ ಎಸ್.ಎಸ್.ಪಾಟೀಲ, ಮನೋವೈದ್ಯ ಡಾ.ಅಮೀತ್ ಕುಮಾರ್, ಅರೆಕಾಲಿಕ ಸ್ವಯಂ ಸೇವಕ ರಾಘವೇಂದ್ರ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-30-557519096</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ‘ಜೈಲಿನ ಕೈದಿಗಳು ತಮ್ಮ ಹಳೆಯ ತಪ್ಪುಗಳನ್ನು ತಿದ್ದಿಕೊಂಡು ಬಿಡುಗಡೆಯಾದ ಬಳಿಕ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕು ನಡೆಸಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ನ್ಯಾಯಾಧೀಶ ಮರಿಯಪ್ಪ ಹೇಳಿದರು.</p>.<p>ನಗರದ ಜಿಲ್ಲಾ ಕಾರಾಗೃಹದಲ್ಲಿ ಈಚೆಗೆ ಆಯೋಜಿಸಿಲಾಗಿದ್ದ ಮಾದಕ ವಸ್ತು ಮುಕ್ತ ಭಾರತಕ್ಕಾಗಿ ಮಾದಕ ವಸ್ತು ಜಾಗೃತಿ ಮತ್ತು ಸ್ವಾಸ್ಥ್ಯ ಸಂಚರಣೆ ಯೋಜನೆ-2025 ಅಡಿಯಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜೈಲು ಶಿಕ್ಷೆಯು ಕೇವಲ ದಂಡನೆಯಲ್ಲ. ಅದು ವ್ಯಕ್ತಿಯನ್ನು ತಿದ್ದುವ ಅವಕಾಶ. ಕೈದಿಗಳು ಮಾನಸಿಕವಾಗಿ ಬದಲಾಗಿ, ಸಮಾಜದ ಮುಖ್ಯವಾಹಿನಿಗೆ ಸೇರಲು ಸಿದ್ಧರಾಗಬೇಕು’ ಎಂದರು.</p>.<p>‘ದೇಶವನ್ನು ಮಾದಕ ವಸ್ತುಗಳ ಹಾವಳಿಯಿಂದ ಮುಕ್ತಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ವ್ಯಸನ ಮುಕ್ತ ಜೀವನವೇ ಸುಖಿ ಜೀವನಕ್ಕೆ ದಾರಿ’ ಎಂದು ಹೇಳಿದರು.</p>.<p>‘ಅರಿವಿನ ಕೊರತೆಯಿಂದ ಯಾರು ಕೂಡ ನ್ಯಾಯದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಪ್ರಾಧಿಕಾರವು ಸದಾ ನೆರವಿಗೆ ಬರಲಿದೆ’ ಎಂದರು.</p>.<p>ಕಾರಾಗೃಹ ಅಧೀಕ್ಷಕ ಎಸ್.ಎಸ್.ಪಾಟೀಲ, ಮನೋವೈದ್ಯ ಡಾ.ಅಮೀತ್ ಕುಮಾರ್, ಅರೆಕಾಲಿಕ ಸ್ವಯಂ ಸೇವಕ ರಾಘವೇಂದ್ರ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-30-557519096</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>