<p>ಯಾದಗಿರಿ: ಎಐಡಿಎಸ್ಒ ಸಂಘಟನೆಯು ಸರ್ಕಾರಿ ಶಾಲೆಗಳನ್ನು ಉಳಿಸಲು ರಾಜ್ಯದಾದ್ಯಂತ ನಡೆಸುತ್ತಿರುವ ಪ್ರತಿರೋಧ ಚಳವಳಿಯ ಭಾಗವಾಗಿ ‘ನಮ್ಮೂರ ಶಾಲೆ ನಮ್ಮಯ ಕಣ್ಮಣಿ’ ನಮ್ಮ ಶಾಲೆಯನ್ನು ನಮ್ಮೂರಲ್ಲಿಯೇ ಉಳಿಸಿ ಎಂಬ ಘೋಷವಾಕ್ಯದ ಬ್ಯಾನರ್ ತಾಲ್ಲೂಕಿನ ತಳಕ ಸರ್ಕಾರಿ ಪ್ರಾಥಮಿಕ ಶಾಲೆ ಮುಂಭಾಗದಲ್ಲಿ ಕಟ್ಟಲಾಯಿತು.</p>.<p>ಈ ವೇಳೆ ಮಾತನಾಡಿದ ಎಐಡಿಎಸ್ಒ ರಾಜ್ಯ ಸಮಿತಿ ಸದಸ್ಯ ನಾಗರಾಜ್ ರಾವೂರ್, ‘ಕೆಪಿಎಸ್ ಮ್ಯಾಗ್ನೆಟ್ ನೀತಿಯ ಪ್ರಕಾರ ಸರ್ಕಾರವು ತಳಕ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಹೆಡಗಿಮದ್ರಾ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವಿಲೀನ ಮಾಡಲು ಹೊರಟಿದೆ. ತಳಕ ಗ್ರಾಮದ ಶಾಲೆಯನ್ನು ವಿಲೀನ ಮಾಡಬಾರದು’ ಎಂದರು.</p>.<p>‘ಹೆಡಗಿಮದ್ರಾ ಗ್ರಾಮಕ್ಕೆ ತೆರಳಲು ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಇಲ್ಲ. ಇಂತಹ ಸಂದರ್ಭದಲ್ಲಿ ಮಕ್ಕಳು ಶಾಲೆಗೆ ಹೋಗಲು ಹೇಗೆ ಸಾಧ್ಯ? ಸರ್ಕಾರ ತನ್ನ ಹಠಮಾರಿ ಧೋರಣೆಯನ್ನು ಕೈಬಿಟ್ಟು, ಸರ್ಕಾರಿ ಶಾಲೆಗಳನ್ನು ಬೆಳೆಸಬೇಕು’ ಎಂದು ಹೇಳಿದರು.</p>.<p>ತಳಕ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಕಾರ್ಯದರ್ಶಿ ಗಂಗಾಧರ್, ಸದಸ್ಯರಾದ ಜಮಾಲ್ ಸಾಬ್, ವಿಕ್ರಮ್ ಸೇರಿದಂತೆ ಶಾಲಾ ಮಕ್ಕಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-30-1315613925</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ಎಐಡಿಎಸ್ಒ ಸಂಘಟನೆಯು ಸರ್ಕಾರಿ ಶಾಲೆಗಳನ್ನು ಉಳಿಸಲು ರಾಜ್ಯದಾದ್ಯಂತ ನಡೆಸುತ್ತಿರುವ ಪ್ರತಿರೋಧ ಚಳವಳಿಯ ಭಾಗವಾಗಿ ‘ನಮ್ಮೂರ ಶಾಲೆ ನಮ್ಮಯ ಕಣ್ಮಣಿ’ ನಮ್ಮ ಶಾಲೆಯನ್ನು ನಮ್ಮೂರಲ್ಲಿಯೇ ಉಳಿಸಿ ಎಂಬ ಘೋಷವಾಕ್ಯದ ಬ್ಯಾನರ್ ತಾಲ್ಲೂಕಿನ ತಳಕ ಸರ್ಕಾರಿ ಪ್ರಾಥಮಿಕ ಶಾಲೆ ಮುಂಭಾಗದಲ್ಲಿ ಕಟ್ಟಲಾಯಿತು.</p>.<p>ಈ ವೇಳೆ ಮಾತನಾಡಿದ ಎಐಡಿಎಸ್ಒ ರಾಜ್ಯ ಸಮಿತಿ ಸದಸ್ಯ ನಾಗರಾಜ್ ರಾವೂರ್, ‘ಕೆಪಿಎಸ್ ಮ್ಯಾಗ್ನೆಟ್ ನೀತಿಯ ಪ್ರಕಾರ ಸರ್ಕಾರವು ತಳಕ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಹೆಡಗಿಮದ್ರಾ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವಿಲೀನ ಮಾಡಲು ಹೊರಟಿದೆ. ತಳಕ ಗ್ರಾಮದ ಶಾಲೆಯನ್ನು ವಿಲೀನ ಮಾಡಬಾರದು’ ಎಂದರು.</p>.<p>‘ಹೆಡಗಿಮದ್ರಾ ಗ್ರಾಮಕ್ಕೆ ತೆರಳಲು ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಇಲ್ಲ. ಇಂತಹ ಸಂದರ್ಭದಲ್ಲಿ ಮಕ್ಕಳು ಶಾಲೆಗೆ ಹೋಗಲು ಹೇಗೆ ಸಾಧ್ಯ? ಸರ್ಕಾರ ತನ್ನ ಹಠಮಾರಿ ಧೋರಣೆಯನ್ನು ಕೈಬಿಟ್ಟು, ಸರ್ಕಾರಿ ಶಾಲೆಗಳನ್ನು ಬೆಳೆಸಬೇಕು’ ಎಂದು ಹೇಳಿದರು.</p>.<p>ತಳಕ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಕಾರ್ಯದರ್ಶಿ ಗಂಗಾಧರ್, ಸದಸ್ಯರಾದ ಜಮಾಲ್ ಸಾಬ್, ವಿಕ್ರಮ್ ಸೇರಿದಂತೆ ಶಾಲಾ ಮಕ್ಕಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-30-1315613925</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>