<p>ಯಲಬುರ್ಗಾ: ಪಟ್ಟಣದ ಎಸ್.ಎ.ನಿಂಗೋಜಿ ಬಿ.ಇಡಿ ಕಾಲೇಜಿನಲ್ಲಿ ರೆಡ್ ರಿಬ್ಬನ್ ಕ್ಲಬ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಘಟಕಗಳ ಸಹಯೋಗದಲ್ಲಿ ಮಿಷನ್ ಏಡ್ಸ್ ಸುರಕ್ಷಾ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾಲೇಜಿನ ಪ್ರಾಚಾರ್ಯ ಪ್ರಕಾಶ ಡಿ.ಎಚ್. ಮಾತನಾಡಿ, ‘ಯಾವುದೇ ಕಾಯಿಲೆಯಾಗಿರಲಿ ಹರಡದಂತೆ ಮುಂಜಾಗ್ರತಾ ಕ್ರಮ ವಹಿಸುವುದು ಮುಖ್ಯವಾಗಿದೆ. ವಿಶೇಷವಾಗಿ ಏಡ್ಸ್ ತಡೆಗಟ್ಟುವಲ್ಲಿ ವ್ಯಾಪಕವಾಗುವುದನ್ನು ನಿಯಂತ್ರಿಸುವುದು ಅವಶ್ಯಕವಾಗಿದೆ. ಈ ಮೂಲಕ ನಿರ್ಮೂಲನೆಗೆ ಕ್ರಮವಹಿಸಬೇಕಾಗುತ್ತದೆ. ಈ ಬಗ್ಗೆ ಅನುಸರಿಸಬೇಕಾದ ಕ್ರಮಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ಹೆಚ್ಚಿನ ಮಾಹಿತಿ ನೀಡಲಿದ್ದಾರೆ’ ಎಂದರು.</p>.<p>ಆಪ್ತ ಸಮಾಲೋಚಕ ಕಾಳಪ್ಪ ಬಡಿಗೇರ ಮಾತನಾಡಿ, ‘ಮೊಬೈಲ್ನಲ್ಲಿ ಎಚ್ಐವಿ ಸ್ಥಿತಿಗತಿಯನ್ನು ಪರಿಶೀಲನೆಗೆ ಒಳಪಡಿಸಿಕೊಳ್ಳಬಹುದು. ಹಾಗೆಯೇ ಸೇವಾ ಸೌಲಭ್ಯಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ಮಹತ್ವ ವಿವರಿಸಿದರು. ಕಾಲೇಜಿನಲ್ಲಿ ರೆಡ್ ರಿಬ್ಬನ್ ಕ್ಲಬ್ ಸ್ಥಾಪನೆ ಮಾಡಿದ್ದು ಉತ್ತಮ ಬೆಳವಣಿಗೆ ಎಂದರು.</p>.<p>ಆರೋಗ್ಯ ಮಿತ್ರ ಹುಚ್ಚೀರಪ್ಪ ತಳವಾರ ಮಾತನಾಡಿ, ‘ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕುರಿತ ಸಮಗ್ರ ಮಾಹಿತಿ ನೀಡಿದರು. ಕಾಲೇಜಿನ ಉಪನ್ಯಾಸಕ ವಿ.ಎಸ್. ಪತ್ತಾರ ಸೇರಿ ಅನೇಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-35-323757600</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲಬುರ್ಗಾ: ಪಟ್ಟಣದ ಎಸ್.ಎ.ನಿಂಗೋಜಿ ಬಿ.ಇಡಿ ಕಾಲೇಜಿನಲ್ಲಿ ರೆಡ್ ರಿಬ್ಬನ್ ಕ್ಲಬ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಘಟಕಗಳ ಸಹಯೋಗದಲ್ಲಿ ಮಿಷನ್ ಏಡ್ಸ್ ಸುರಕ್ಷಾ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾಲೇಜಿನ ಪ್ರಾಚಾರ್ಯ ಪ್ರಕಾಶ ಡಿ.ಎಚ್. ಮಾತನಾಡಿ, ‘ಯಾವುದೇ ಕಾಯಿಲೆಯಾಗಿರಲಿ ಹರಡದಂತೆ ಮುಂಜಾಗ್ರತಾ ಕ್ರಮ ವಹಿಸುವುದು ಮುಖ್ಯವಾಗಿದೆ. ವಿಶೇಷವಾಗಿ ಏಡ್ಸ್ ತಡೆಗಟ್ಟುವಲ್ಲಿ ವ್ಯಾಪಕವಾಗುವುದನ್ನು ನಿಯಂತ್ರಿಸುವುದು ಅವಶ್ಯಕವಾಗಿದೆ. ಈ ಮೂಲಕ ನಿರ್ಮೂಲನೆಗೆ ಕ್ರಮವಹಿಸಬೇಕಾಗುತ್ತದೆ. ಈ ಬಗ್ಗೆ ಅನುಸರಿಸಬೇಕಾದ ಕ್ರಮಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ಹೆಚ್ಚಿನ ಮಾಹಿತಿ ನೀಡಲಿದ್ದಾರೆ’ ಎಂದರು.</p>.<p>ಆಪ್ತ ಸಮಾಲೋಚಕ ಕಾಳಪ್ಪ ಬಡಿಗೇರ ಮಾತನಾಡಿ, ‘ಮೊಬೈಲ್ನಲ್ಲಿ ಎಚ್ಐವಿ ಸ್ಥಿತಿಗತಿಯನ್ನು ಪರಿಶೀಲನೆಗೆ ಒಳಪಡಿಸಿಕೊಳ್ಳಬಹುದು. ಹಾಗೆಯೇ ಸೇವಾ ಸೌಲಭ್ಯಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ಮಹತ್ವ ವಿವರಿಸಿದರು. ಕಾಲೇಜಿನಲ್ಲಿ ರೆಡ್ ರಿಬ್ಬನ್ ಕ್ಲಬ್ ಸ್ಥಾಪನೆ ಮಾಡಿದ್ದು ಉತ್ತಮ ಬೆಳವಣಿಗೆ ಎಂದರು.</p>.<p>ಆರೋಗ್ಯ ಮಿತ್ರ ಹುಚ್ಚೀರಪ್ಪ ತಳವಾರ ಮಾತನಾಡಿ, ‘ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕುರಿತ ಸಮಗ್ರ ಮಾಹಿತಿ ನೀಡಿದರು. ಕಾಲೇಜಿನ ಉಪನ್ಯಾಸಕ ವಿ.ಎಸ್. ಪತ್ತಾರ ಸೇರಿ ಅನೇಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-35-323757600</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>