<p>ಯಳಂದೂರು: ‘ಪ್ರತಿನಿತ್ಯ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಗಳ ಆರೈಕೆಯಲ್ಲಿ ಜೀವನವನ್ನೇ ಸವೆಸುವ ದಾದಿಯರು ಇಂದು ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ’ ಎಂದು ಆಸ್ಪತ್ರೆ ವೈದ್ಯಾಧಿಕಾರಿ ಎಚ್. ಶ್ರೀಧರ್ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ದಾದಿಯರ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‘ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ 350 ರೋಗಿಗಳಿಗೆ ಒಬ್ಬರು ಶುಶ್ರೂಷಕಿ ಇರಬೇಕು. ಆದರೆ ಭಾರತದಲ್ಲಿ ಈ ಸಂಖ್ಯೆ 500ಕ್ಕೆ ಮುಟ್ಟಿದೆ. ಜನಸಂಖ್ಯೆ ಹೆಚ್ಚಾಗಿರುವ ರಾಷ್ಟ್ರಗಳಲ್ಲಿ ಗುಣಮಟ್ಟದ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ನರ್ಸ್ಗಳು ಅಪಾರವಾಗಿ ಶ್ರಮಿಸುತ್ತಿದ್ದು, ಇಂತಹ ಸೇವಾ ಕೈಂಕರ್ಯದಲ್ಲಿ ಪ್ರಾಮಾಣಿಕವಾಗಿ ರೋಗಿಗಳ ಸೇವೆಗೆ ಅರ್ಪಿಸಿಕೊಂಡಿರುವ ನೂರಾರು ನರ್ಸ್ಗಳು ನಮ್ಮೊಡನಿದ್ದು, ಅವರನ್ನು ಗೌರವಿಸುವ ಕೆಲಸವನ್ನು ಸಮಾಜ ಮತ್ತು ಸಂಘ-ಸಂಸ್ಥೆಗಳು ಮಾಡಬೇಕು’ ಎಂದರು.</p>.<p>‘ಕುಟುಂಬಸ್ಥರು ಹಾಗೂ ವೈದ್ಯರ ನಡುವೆ ಕೊಂಡಿಯಾಗಿ ತಾಳ್ಮೆ, ಸಹಕಾರ ಮಾನವೀಯತೆ ಮೂರ್ತವೆತ್ತಂತೆ ಆರೋಗ್ಯ ಸೇವೆ ಕಲ್ಪಿಸುವ ದಾದಿಯರ ಮೇಲೆ ಸಿಟ್ಟು, ಸೆಡವು ತೋರದೆ ಅವರನ್ನು ಸಹಾನುಭೂತಿಯಿಂದ ಕಾಣಬೇಕು’ ಎಂದು ತಿಳಿಸಿದರು.</p>.<p>ಡಾ.ಹರ್ಷದ್ ಆಲಿ. ಡಾ.ನಾಗೇಂದ್ರ ಪ್ರಸಾದ್, ಡಾ.ಕೃಷ್ಣಪ್ರಸಾದ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-37-982631251</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಳಂದೂರು: ‘ಪ್ರತಿನಿತ್ಯ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಗಳ ಆರೈಕೆಯಲ್ಲಿ ಜೀವನವನ್ನೇ ಸವೆಸುವ ದಾದಿಯರು ಇಂದು ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ’ ಎಂದು ಆಸ್ಪತ್ರೆ ವೈದ್ಯಾಧಿಕಾರಿ ಎಚ್. ಶ್ರೀಧರ್ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ದಾದಿಯರ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‘ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ 350 ರೋಗಿಗಳಿಗೆ ಒಬ್ಬರು ಶುಶ್ರೂಷಕಿ ಇರಬೇಕು. ಆದರೆ ಭಾರತದಲ್ಲಿ ಈ ಸಂಖ್ಯೆ 500ಕ್ಕೆ ಮುಟ್ಟಿದೆ. ಜನಸಂಖ್ಯೆ ಹೆಚ್ಚಾಗಿರುವ ರಾಷ್ಟ್ರಗಳಲ್ಲಿ ಗುಣಮಟ್ಟದ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ನರ್ಸ್ಗಳು ಅಪಾರವಾಗಿ ಶ್ರಮಿಸುತ್ತಿದ್ದು, ಇಂತಹ ಸೇವಾ ಕೈಂಕರ್ಯದಲ್ಲಿ ಪ್ರಾಮಾಣಿಕವಾಗಿ ರೋಗಿಗಳ ಸೇವೆಗೆ ಅರ್ಪಿಸಿಕೊಂಡಿರುವ ನೂರಾರು ನರ್ಸ್ಗಳು ನಮ್ಮೊಡನಿದ್ದು, ಅವರನ್ನು ಗೌರವಿಸುವ ಕೆಲಸವನ್ನು ಸಮಾಜ ಮತ್ತು ಸಂಘ-ಸಂಸ್ಥೆಗಳು ಮಾಡಬೇಕು’ ಎಂದರು.</p>.<p>‘ಕುಟುಂಬಸ್ಥರು ಹಾಗೂ ವೈದ್ಯರ ನಡುವೆ ಕೊಂಡಿಯಾಗಿ ತಾಳ್ಮೆ, ಸಹಕಾರ ಮಾನವೀಯತೆ ಮೂರ್ತವೆತ್ತಂತೆ ಆರೋಗ್ಯ ಸೇವೆ ಕಲ್ಪಿಸುವ ದಾದಿಯರ ಮೇಲೆ ಸಿಟ್ಟು, ಸೆಡವು ತೋರದೆ ಅವರನ್ನು ಸಹಾನುಭೂತಿಯಿಂದ ಕಾಣಬೇಕು’ ಎಂದು ತಿಳಿಸಿದರು.</p>.<p>ಡಾ.ಹರ್ಷದ್ ಆಲಿ. ಡಾ.ನಾಗೇಂದ್ರ ಪ್ರಸಾದ್, ಡಾ.ಕೃಷ್ಣಪ್ರಸಾದ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-37-982631251</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>