<p>ಅಫಜಲಪುರ: ‘ಸ್ಪರ್ಧಾತ್ಮಕ ಯುಗದಲ್ಲಿ ದಿನಕ್ಕೊಂದು ಹೊಸತನ ಹುಟ್ಟಿಕೊಳ್ಳುತ್ತದೆ. ಹೀಗಾಗಿ ಸ್ಪರ್ಧಾತ್ಮಕ ಯುಗದಲ್ಲಿ ಬದುಕು ಕಟ್ಟಿಕೊಳ್ಳಬೇಕಾದರೆ ವಿದ್ಯಾರ್ಥಿಗಳು ಅಧ್ಯಯನಶೀಲರಾಗಬೇಕು’ ಎಂದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಪ್ರವೀಣ ಹೇರೂರ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಉದ್ಯೋಗ ಭರವಸೆ ಕೋಶಗಳ ಅಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆ ಕುರಿತಾಗಿ ನಡೆದ ಒಂದು ದಿನದ ಪ್ರಾತ್ಯಕ್ಷಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಓದುವಾಗ ಶೃದ್ಧೆಯಿಂದ ಓದಿ, ಜವಾಬ್ದಾರಿ ಹೆಗಲೇರುವ ಸಂದರ್ಭದಲ್ಲೊಂದು ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳುವತ್ತ ಚಿತ್ತ ನೆಡಿ. ಅಲ್ಲಿಯ ತನಕ ದುಶ್ಚಟಗಳಿಂದ ದೂರವಿರಿ. ಅಂತರ್ಜಾಲದ ಸದ್ಬಳಕೆ ಮಾಡಿಕೊಂಡು ಬದುಕು ರೂಪಿಸಿಕೊಳ್ಳಿ’ ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಸಂತೋಷ ಹುಗ್ಗಿ, ಸಾವಿತ್ರಿ ಕೃಷ್ಣ ಮಾತನಾಡಿದರು.</p>.<p>ಬಳಿಕ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿದಾರ ಸಿದ್ಧಾರ್ಥ ವಿಶ್ವಕರ್ಮ ಅವರು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಮಾದರಿ ಪ್ರಶ್ನೆ ಪತ್ರಿಕೆ ನೀಡಿ ಹೆಚ್ಚಿನ ಮಾಹಿತಿ ನೀಡಿದರು.</p>.<p>ಎನ್ಎಸ್ಎಸ್ ಅಧಿಕಾರಿ ಶಾಂತಲಾ ಎ.ಸಿ, ಮಹ್ಮದ್ ಯೂನುಸ್, ಚಿನ್ನಾ ಆಶೆಪ್ಪ, ದತ್ತಾತ್ರೇಯ ಸಿ.ಎಚ್, ವಿನಾಯಕ, ಪ್ರವೀಣ ಸೇಡಂಕರ್, ಭಾರತಿ ಭೂಸಾರೆ, ರಾಘವೇಂದ್ರ, ಶಾಂತಪ್ಪ ಮೇಲ್ಕೇರಿ, ಕವಿತಾ ರಾಠೋಡ, ಸಂತೋಷ ಬಡಿಗೇರ, ಗಿರಿಜಾ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-31-2071577120</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಫಜಲಪುರ: ‘ಸ್ಪರ್ಧಾತ್ಮಕ ಯುಗದಲ್ಲಿ ದಿನಕ್ಕೊಂದು ಹೊಸತನ ಹುಟ್ಟಿಕೊಳ್ಳುತ್ತದೆ. ಹೀಗಾಗಿ ಸ್ಪರ್ಧಾತ್ಮಕ ಯುಗದಲ್ಲಿ ಬದುಕು ಕಟ್ಟಿಕೊಳ್ಳಬೇಕಾದರೆ ವಿದ್ಯಾರ್ಥಿಗಳು ಅಧ್ಯಯನಶೀಲರಾಗಬೇಕು’ ಎಂದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಪ್ರವೀಣ ಹೇರೂರ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಉದ್ಯೋಗ ಭರವಸೆ ಕೋಶಗಳ ಅಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆ ಕುರಿತಾಗಿ ನಡೆದ ಒಂದು ದಿನದ ಪ್ರಾತ್ಯಕ್ಷಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಓದುವಾಗ ಶೃದ್ಧೆಯಿಂದ ಓದಿ, ಜವಾಬ್ದಾರಿ ಹೆಗಲೇರುವ ಸಂದರ್ಭದಲ್ಲೊಂದು ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳುವತ್ತ ಚಿತ್ತ ನೆಡಿ. ಅಲ್ಲಿಯ ತನಕ ದುಶ್ಚಟಗಳಿಂದ ದೂರವಿರಿ. ಅಂತರ್ಜಾಲದ ಸದ್ಬಳಕೆ ಮಾಡಿಕೊಂಡು ಬದುಕು ರೂಪಿಸಿಕೊಳ್ಳಿ’ ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಸಂತೋಷ ಹುಗ್ಗಿ, ಸಾವಿತ್ರಿ ಕೃಷ್ಣ ಮಾತನಾಡಿದರು.</p>.<p>ಬಳಿಕ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿದಾರ ಸಿದ್ಧಾರ್ಥ ವಿಶ್ವಕರ್ಮ ಅವರು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಮಾದರಿ ಪ್ರಶ್ನೆ ಪತ್ರಿಕೆ ನೀಡಿ ಹೆಚ್ಚಿನ ಮಾಹಿತಿ ನೀಡಿದರು.</p>.<p>ಎನ್ಎಸ್ಎಸ್ ಅಧಿಕಾರಿ ಶಾಂತಲಾ ಎ.ಸಿ, ಮಹ್ಮದ್ ಯೂನುಸ್, ಚಿನ್ನಾ ಆಶೆಪ್ಪ, ದತ್ತಾತ್ರೇಯ ಸಿ.ಎಚ್, ವಿನಾಯಕ, ಪ್ರವೀಣ ಸೇಡಂಕರ್, ಭಾರತಿ ಭೂಸಾರೆ, ರಾಘವೇಂದ್ರ, ಶಾಂತಪ್ಪ ಮೇಲ್ಕೇರಿ, ಕವಿತಾ ರಾಠೋಡ, ಸಂತೋಷ ಬಡಿಗೇರ, ಗಿರಿಜಾ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-31-2071577120</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>