<p>ಅರಸೀಕೆರೆ: ‘ಪದವಿ ಹಂತದಲ್ಲಿರುವಾಗಲೇ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯ ಕಡೆ ಒಲವು ತೋರಬೇಕು. ಯಶಸ್ಸು ಗಳಿಸಲು ಪೂರ್ವ ತಯಾರಿ ಅಗತ್ಯ’ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದರು.</p>.<p>ನಗರದ ವೆಂಕಟೇಶ್ವರ ಕಲಾಭವನದಲ್ಲಿ ರಾಯಲ್ ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ್ ಕಾಲೇಜು ವತಿಯಿಂದ ನಡೆದ ಪದವಿ ದಿನದ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಪೂರ್ವಸಿದ್ಧತೆ, ಕಠಿಣ ಪರಿಶ್ರಮ ಹಾಗೂ ತಿಳಿದುಕೊಂಡಿದ್ದನ್ನು ಅಭಿವ್ಯಕ್ತಿಸುವ ರೀತಿ ನಿಮ್ಮನ್ನು ಯಶಸ್ಸಿನ ಶಿಖರದತ್ತ ಕೊಂಡೊಯ್ಯುತ್ತವೆ. ಸ್ಪರ್ಧೆಯಿಂದ ಯಾರೂ ದೂರ ಉಳಿಯಬಾರದು’ ಎಂದರು.</p>.<p>ಕೆಪಿಸಿಸಿ ಸದಸ್ಯ ಶಶಿಧರ್ ಮಾತನಾಡಿ, ‘ಶ್ರಮ ವಹಿಸಿ ಸಾಧನೆ ಮಾಡಿ ಪೋಷಕರ ಕನಸು ನನಸಾಗುವಂತೆ ಮಾಡಬೇಕು’ ಎಂದು ಹೇಳಿದರು.</p>.<p>ಪ್ರಾಂಶುಪಾಲ ಕೆ.ಎಸ್. ಮಂಜುನಾಥ್ ಮಾತನಾಡಿ, ‘ವಿದ್ಯಾರ್ಥಿಗಳು ತಮಗೆ ಸಿಕ್ಕಿರುವ ಸಮಯವನ್ನು ವ್ಯರ್ಥ ಮಾಡದೇ ಓದಿನಲ್ಲಿ ಮಗ್ನರಾಗಿ ನಿಶ್ಚಿತ ಗುರಿ ತಲುಪಬೇಕು’ ಎಂದರು.</p>.<p>ಸಾಂಸ್ಕೃತಿಕ ಕಾರ್ಯಕ್ರಮ ಗಮನಸೆಳೆಯಿತು. ಅಂತಿಮ ವರ್ಷದ ಬಿ.ಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ಹೇಮಂತ್ ಕುಮಾರ್, ಕಾಲೇಜಿನ ಕಾರ್ಯದರ್ಶಿ ಉಷಾ ಬೋಪಯ್ಯ, ಯುವ ಮುಖಂಡರಾದ ನವೀನ್, ಪೃಥ್ವಿನಾಯಕ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-36-586236310</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರಸೀಕೆರೆ: ‘ಪದವಿ ಹಂತದಲ್ಲಿರುವಾಗಲೇ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯ ಕಡೆ ಒಲವು ತೋರಬೇಕು. ಯಶಸ್ಸು ಗಳಿಸಲು ಪೂರ್ವ ತಯಾರಿ ಅಗತ್ಯ’ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದರು.</p>.<p>ನಗರದ ವೆಂಕಟೇಶ್ವರ ಕಲಾಭವನದಲ್ಲಿ ರಾಯಲ್ ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ್ ಕಾಲೇಜು ವತಿಯಿಂದ ನಡೆದ ಪದವಿ ದಿನದ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಪೂರ್ವಸಿದ್ಧತೆ, ಕಠಿಣ ಪರಿಶ್ರಮ ಹಾಗೂ ತಿಳಿದುಕೊಂಡಿದ್ದನ್ನು ಅಭಿವ್ಯಕ್ತಿಸುವ ರೀತಿ ನಿಮ್ಮನ್ನು ಯಶಸ್ಸಿನ ಶಿಖರದತ್ತ ಕೊಂಡೊಯ್ಯುತ್ತವೆ. ಸ್ಪರ್ಧೆಯಿಂದ ಯಾರೂ ದೂರ ಉಳಿಯಬಾರದು’ ಎಂದರು.</p>.<p>ಕೆಪಿಸಿಸಿ ಸದಸ್ಯ ಶಶಿಧರ್ ಮಾತನಾಡಿ, ‘ಶ್ರಮ ವಹಿಸಿ ಸಾಧನೆ ಮಾಡಿ ಪೋಷಕರ ಕನಸು ನನಸಾಗುವಂತೆ ಮಾಡಬೇಕು’ ಎಂದು ಹೇಳಿದರು.</p>.<p>ಪ್ರಾಂಶುಪಾಲ ಕೆ.ಎಸ್. ಮಂಜುನಾಥ್ ಮಾತನಾಡಿ, ‘ವಿದ್ಯಾರ್ಥಿಗಳು ತಮಗೆ ಸಿಕ್ಕಿರುವ ಸಮಯವನ್ನು ವ್ಯರ್ಥ ಮಾಡದೇ ಓದಿನಲ್ಲಿ ಮಗ್ನರಾಗಿ ನಿಶ್ಚಿತ ಗುರಿ ತಲುಪಬೇಕು’ ಎಂದರು.</p>.<p>ಸಾಂಸ್ಕೃತಿಕ ಕಾರ್ಯಕ್ರಮ ಗಮನಸೆಳೆಯಿತು. ಅಂತಿಮ ವರ್ಷದ ಬಿ.ಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ಹೇಮಂತ್ ಕುಮಾರ್, ಕಾಲೇಜಿನ ಕಾರ್ಯದರ್ಶಿ ಉಷಾ ಬೋಪಯ್ಯ, ಯುವ ಮುಖಂಡರಾದ ನವೀನ್, ಪೃಥ್ವಿನಾಯಕ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-36-586236310</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>