<p>ಬಾಗಲಕೋಟೆ: ಬಸವೇಶ್ವರ ಎಂಜಿನಿಯರಿಂಗ್ ಕಾಲೇಜು ಹಾಗೂ ಕೆಇಎ ಸಹಯೋಗದಲ್ಲಿ ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರಿಗೆ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿನ ಗೊಂದಲಗಳನ್ನು ನಿವಾರಿಸುವ ಉದ್ದೇಶದಿಂದ ಮೇ 25ರಿಂದ 30ರ ವರೆಗೆ ‘ಯುಜಿಸಿಇಟಿ ಸೀಟು ಹಂಚಿಕೆ ಮಂಥನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ಮೇ 25ರಂದು ಬೆಳಿಗ್ಗೆ 10ಕ್ಕೆ ಕಾಲೇಜಿನ ಗ್ಯಾಲರಿ ಹಾಲ್ನಲ್ಲಿ ಉದ್ಘಾಟನೆ ನಡೆಯಲಿದ್ದು, ಕಾಲೇಜಿನ ಪ್ರಾಚಾರ್ಯ ಬಿ.ಆರ್. ಹಿರೇಮಠ ಅಧ್ಯಕ್ಷತೆ ವಹಿಸಲಿದ್ದು, ಬಿವಿವಿಎಸ್ ತಾಂತ್ರಿಕ ಶಿಕ್ಷಣ ನಿರ್ದೇಶಕ ಆರ್.ಎನ್. ಹೆರಕಲ್ ಉಪಸ್ಥಿತರಿರಲಿದ್ದಾರೆ.</p>.<p>ಕೆಇಎ ವತಿಯಿಂದ ತರಬೇತಿ ಶಿಬಿರದಲ್ಲಿ ತಜ್ಞರಾದ ಸಂತೋಷ ಕುಂಬಳಾವತಿ, ಎಸ್.ಜಿ. ಕಂಬಾಳಿಮಠ ಹಾಗೂ ಅಶೋಕ ಸುತಗುಂಡಾರ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-19-494650646</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಬಸವೇಶ್ವರ ಎಂಜಿನಿಯರಿಂಗ್ ಕಾಲೇಜು ಹಾಗೂ ಕೆಇಎ ಸಹಯೋಗದಲ್ಲಿ ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರಿಗೆ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿನ ಗೊಂದಲಗಳನ್ನು ನಿವಾರಿಸುವ ಉದ್ದೇಶದಿಂದ ಮೇ 25ರಿಂದ 30ರ ವರೆಗೆ ‘ಯುಜಿಸಿಇಟಿ ಸೀಟು ಹಂಚಿಕೆ ಮಂಥನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ಮೇ 25ರಂದು ಬೆಳಿಗ್ಗೆ 10ಕ್ಕೆ ಕಾಲೇಜಿನ ಗ್ಯಾಲರಿ ಹಾಲ್ನಲ್ಲಿ ಉದ್ಘಾಟನೆ ನಡೆಯಲಿದ್ದು, ಕಾಲೇಜಿನ ಪ್ರಾಚಾರ್ಯ ಬಿ.ಆರ್. ಹಿರೇಮಠ ಅಧ್ಯಕ್ಷತೆ ವಹಿಸಲಿದ್ದು, ಬಿವಿವಿಎಸ್ ತಾಂತ್ರಿಕ ಶಿಕ್ಷಣ ನಿರ್ದೇಶಕ ಆರ್.ಎನ್. ಹೆರಕಲ್ ಉಪಸ್ಥಿತರಿರಲಿದ್ದಾರೆ.</p>.<p>ಕೆಇಎ ವತಿಯಿಂದ ತರಬೇತಿ ಶಿಬಿರದಲ್ಲಿ ತಜ್ಞರಾದ ಸಂತೋಷ ಕುಂಬಳಾವತಿ, ಎಸ್.ಜಿ. ಕಂಬಾಳಿಮಠ ಹಾಗೂ ಅಶೋಕ ಸುತಗುಂಡಾರ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-19-494650646</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>