<p>ಭಾಲ್ಕಿ: ‘ದೇಶ, ವಿದೇಶಗಳಲ್ಲಿ ಚಾರ್ಟರ್ಡ್ ಅಕೌಂಟೆಂಟ್ ವೃತ್ತಿಗೆ ಅಪಾರ ಬೇಡಿಕೆ ಇದೆ’ ಎಂದು ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಸುರೇಂದ್ರನ್ ಆರ್. ಹೇಳಿದರು.</p>.<p>ಚನ್ನಬಸವೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಿ.ಎ ಫೌಂಡೇಶನ್ ಪ್ರವೇಶ ಹಾಗೂ ವಿದ್ಯಾರ್ಥಿ ವೇತನ ಪರೀಕ್ಷೆಯ ಮಾರ್ಗದರ್ಶನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಕಲಿಕೆಯಲ್ಲಿ ತನ್ಮಯರಾಗಿ ತಾವು ಆಯ್ಕೆ ಮಾಡಿಕೊಂಡಿರುವ ಕೋರ್ಸ್ಗಳಲ್ಲಿ ವಿಶೇಷ ಪ್ರಾಬಲ್ಯತೆಯನ್ನು ಸಾಧಿಸಬೇಕು. ತಮ್ಮಲ್ಲಿರುವ ವಿಶೇಷ ಕೌಶಲಗಳನ್ನು ಹೆಚ್ಚೆಚ್ಚು ಅಭಿವೃದ್ಧಿಪಡಿಸಿಕೊಂಡು ಸಿಎ ವೃತ್ತಿಯಲ್ಲಿ ಉನ್ನತ ಸ್ಥಾನವನ್ನು ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಚಾರ್ಟೆಡ್ ಅಕೌಂಟೆಂಟ್ ಸುಮಿತ್ ಆರ್. ಭರಾಡಿಯಾ ಅವರು ತಮ್ಮ ವಿಶೇಷ ಉಪನ್ಯಾಸದಲ್ಲಿ ಸಿ.ಎ. ಕೋರ್ಸ್ನ ಹಂತಗಳು, ಉದ್ಯೋಗಾವಕಾಶಗಳು, ಆದಾಯದ ಸಾಧ್ಯತೆಗಳು ಹಾಗೂ ಜಾಗತಿಕ ಅವಕಾಶಗಳ ಕುರಿತು ವಿವರಿಸಿದರು.</p>.<p>ಪ್ರಾಚಾರ್ಯ ಸಂತೋಷಕುಮಾರ ಎಸ್.ತೀರ್ಥೆ, ಸಿ.ಎ ಸಂಯೋಜಕ ಸಂದೀಪರಾಜ್ ಮಾತನಾಡಿದರು. ವಿಠ್ಠಲರಾವ್ ಪಾಟೀಲ, ಶಿವಕುಮಾರ್ ಜೆ. ಕಾಂಬಳೆ ಸೇರಿದಂತೆ ಇತರರು ಇದ್ದರು.</p>.<p>ಜಿಲ್ಲೆಯ ವಿವಿಧ ತಾಲ್ಲೂಕುಗಳ ಸುಮಾರು 150 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-33-1537618244</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ‘ದೇಶ, ವಿದೇಶಗಳಲ್ಲಿ ಚಾರ್ಟರ್ಡ್ ಅಕೌಂಟೆಂಟ್ ವೃತ್ತಿಗೆ ಅಪಾರ ಬೇಡಿಕೆ ಇದೆ’ ಎಂದು ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಸುರೇಂದ್ರನ್ ಆರ್. ಹೇಳಿದರು.</p>.<p>ಚನ್ನಬಸವೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಿ.ಎ ಫೌಂಡೇಶನ್ ಪ್ರವೇಶ ಹಾಗೂ ವಿದ್ಯಾರ್ಥಿ ವೇತನ ಪರೀಕ್ಷೆಯ ಮಾರ್ಗದರ್ಶನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಕಲಿಕೆಯಲ್ಲಿ ತನ್ಮಯರಾಗಿ ತಾವು ಆಯ್ಕೆ ಮಾಡಿಕೊಂಡಿರುವ ಕೋರ್ಸ್ಗಳಲ್ಲಿ ವಿಶೇಷ ಪ್ರಾಬಲ್ಯತೆಯನ್ನು ಸಾಧಿಸಬೇಕು. ತಮ್ಮಲ್ಲಿರುವ ವಿಶೇಷ ಕೌಶಲಗಳನ್ನು ಹೆಚ್ಚೆಚ್ಚು ಅಭಿವೃದ್ಧಿಪಡಿಸಿಕೊಂಡು ಸಿಎ ವೃತ್ತಿಯಲ್ಲಿ ಉನ್ನತ ಸ್ಥಾನವನ್ನು ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಚಾರ್ಟೆಡ್ ಅಕೌಂಟೆಂಟ್ ಸುಮಿತ್ ಆರ್. ಭರಾಡಿಯಾ ಅವರು ತಮ್ಮ ವಿಶೇಷ ಉಪನ್ಯಾಸದಲ್ಲಿ ಸಿ.ಎ. ಕೋರ್ಸ್ನ ಹಂತಗಳು, ಉದ್ಯೋಗಾವಕಾಶಗಳು, ಆದಾಯದ ಸಾಧ್ಯತೆಗಳು ಹಾಗೂ ಜಾಗತಿಕ ಅವಕಾಶಗಳ ಕುರಿತು ವಿವರಿಸಿದರು.</p>.<p>ಪ್ರಾಚಾರ್ಯ ಸಂತೋಷಕುಮಾರ ಎಸ್.ತೀರ್ಥೆ, ಸಿ.ಎ ಸಂಯೋಜಕ ಸಂದೀಪರಾಜ್ ಮಾತನಾಡಿದರು. ವಿಠ್ಠಲರಾವ್ ಪಾಟೀಲ, ಶಿವಕುಮಾರ್ ಜೆ. ಕಾಂಬಳೆ ಸೇರಿದಂತೆ ಇತರರು ಇದ್ದರು.</p>.<p>ಜಿಲ್ಲೆಯ ವಿವಿಧ ತಾಲ್ಲೂಕುಗಳ ಸುಮಾರು 150 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-33-1537618244</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>