<p>ಚಿದ್ರಿ(ಜನವಾಡ): ‘ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಗುರಿ ಇಟ್ಟುಕೊಳ್ಳಬೇಕು’ ಎಂದು ಬೆಂಗಳೂರಿನ ರಾಕುಮ್ ಮಹಾರಾಜ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಚಿದ್ರಿಯ ಜಾಗೃತಿ ಪಬ್ಲಿಕ್ ಶಾಲೆಯಲ್ಲಿ ಭಾನುವಾರ ಏರ್ಪಡಿಸಿದ್ದ ವಿದ್ಯಾರ್ಥಿಗಳ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪರಿಶ್ರಮದಿಂದ ಅಂದುಕೊಂಡ ಗುರಿ ತಲುಪಬಹುದು. ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದ ಸವಾಲುಗಳನ್ನು ಎದುರಿಸಲು ಅಣಿಯಾಗಬೇಕು. ನೈತಿಕತೆ, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಉತ್ತಮ ನಾಗರಿಕರಾಗಲು ಪ್ರಯತ್ನಿಸಬೇಕು’ ಎಂದು ತಿಳಿಸಿದರು.</p>.<p>ಶಾಲೆಯ ಅಧ್ಯಕ್ಷ ತುಕಾರಾಮ ಚಿಮಕೋಡೆ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಶಿಕ್ಷಕರು ಇದ್ದರು.</p>.<p>ಶಾಲೆಯ ಕಾರ್ಯದರ್ಶಿ ಶಿಲ್ಪಾ ತುಕಾರಾಮ ಚಿಮಕೋಡೆ ಸ್ವಾಗತಿಸಿದರು. ಶಿಕ್ಷಕಿ ಮಹಾದೇವಿ ನಿರೂಪಿಸಿದರು. ಶಿಕ್ಷಕಿ ಸವಿತಾ ಶಹಾಪುರ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-33-2059702465</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿದ್ರಿ(ಜನವಾಡ): ‘ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಗುರಿ ಇಟ್ಟುಕೊಳ್ಳಬೇಕು’ ಎಂದು ಬೆಂಗಳೂರಿನ ರಾಕುಮ್ ಮಹಾರಾಜ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಚಿದ್ರಿಯ ಜಾಗೃತಿ ಪಬ್ಲಿಕ್ ಶಾಲೆಯಲ್ಲಿ ಭಾನುವಾರ ಏರ್ಪಡಿಸಿದ್ದ ವಿದ್ಯಾರ್ಥಿಗಳ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪರಿಶ್ರಮದಿಂದ ಅಂದುಕೊಂಡ ಗುರಿ ತಲುಪಬಹುದು. ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದ ಸವಾಲುಗಳನ್ನು ಎದುರಿಸಲು ಅಣಿಯಾಗಬೇಕು. ನೈತಿಕತೆ, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಉತ್ತಮ ನಾಗರಿಕರಾಗಲು ಪ್ರಯತ್ನಿಸಬೇಕು’ ಎಂದು ತಿಳಿಸಿದರು.</p>.<p>ಶಾಲೆಯ ಅಧ್ಯಕ್ಷ ತುಕಾರಾಮ ಚಿಮಕೋಡೆ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಶಿಕ್ಷಕರು ಇದ್ದರು.</p>.<p>ಶಾಲೆಯ ಕಾರ್ಯದರ್ಶಿ ಶಿಲ್ಪಾ ತುಕಾರಾಮ ಚಿಮಕೋಡೆ ಸ್ವಾಗತಿಸಿದರು. ಶಿಕ್ಷಕಿ ಮಹಾದೇವಿ ನಿರೂಪಿಸಿದರು. ಶಿಕ್ಷಕಿ ಸವಿತಾ ಶಹಾಪುರ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-33-2059702465</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>