<p>ಬುಕ್ಕಾಪಟ್ಟಣ (ಶಿರಾ): ಇಂದಿನ ಪರಿಶ್ರಮದ ಜೀವನವೇ ಮುಂದಿನ ಯಶಸ್ಸಿನ ಗುಟ್ಟಾಗಿದೆ. ಪ್ರತಿಯೊಬ್ಬರೂ ಪರಿಶ್ರಮದಿಂದ ಸಾಧನೆಯತ್ತ ಮುಖ ಮಾಡಬೇಕು ಎಂದು ಪ್ರಾಂಶುಪಾಲೆ ಪ್ರೊ.ಧರಣೇಂದ್ರ ಕುಮಾರಿ ಹೇಳಿದರು.</p>.<p>ತಾಲ್ಲೂಕಿನ ಬುಕ್ಕಾಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಗುರುವಾರ ಪ್ಲೇಸ್ಮೆಂಟ್ ಸೆಲ್ ಮತ್ತು ಐಕ್ಯೂಎಸಿ ಸಹಯೋಗದೊಂದಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ವಿದ್ಯಾರ್ಥಿಗಳು ಕೇವಲ ಒಂದು ನಿರ್ದಿಷ್ಟ ವಿಷಯದಲ್ಲಿ ಮಾತ್ರ ತಿಳಿದುಕೊಳ್ಳದೆ ಸರ್ವತೋಮುಖ ಜ್ಞಾನಾರ್ಜನೆಗೆ ಒತ್ತು ನೀಡಬೇಕು. ಕಲಾ ಮಾಧ್ಯಮ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿ ಉದ್ಯೋಗ ಪಡೆಯಲು ಅತ್ಯುತ್ತಮ ವೇದಿಕೆಯಾಗಿದ್ದು ಇದರ ಸದುಪಯೋಗ ಪಡಿಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದರು.</p>.<p>ಪ್ಲೇಸ್ಮೆಂಟ್ ಸೆಲ್ ಸಂಚಾಲಕ ಸತೀಶ್ ಎ.ಎಂ., ಪದವಿ ನಂತರ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿವಿಧ ಶೈಕ್ಷಣಿಕ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಸಹಾಯಕ ಪ್ರಾಧ್ಯಾಪಕ ಲೋಕೇಶ್ ಎನ್., ಮಹೇಶ್ ಎನ್. ಮಾತನಾಡಿದರು.</p>.<p>ಡಾ. ಹನುಮಂತರಾಯ ಎಸ್.ಆರ್., ವಿಜಯ್ ಎನ್., ಶಾರ್ವರಿ ಎಸ್.ಕೆ., ನರೇಂದ್ರ ಬಾಬು, ನಾಗರಾಜ ರಾವ್, ಕುಮಾರ್ ಜಿ.ಸಿ., ಶ್ರೀನಿವಾಸ್ ಜಿ.ಸಿ., ಜಗದೀಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-17-718598213</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬುಕ್ಕಾಪಟ್ಟಣ (ಶಿರಾ): ಇಂದಿನ ಪರಿಶ್ರಮದ ಜೀವನವೇ ಮುಂದಿನ ಯಶಸ್ಸಿನ ಗುಟ್ಟಾಗಿದೆ. ಪ್ರತಿಯೊಬ್ಬರೂ ಪರಿಶ್ರಮದಿಂದ ಸಾಧನೆಯತ್ತ ಮುಖ ಮಾಡಬೇಕು ಎಂದು ಪ್ರಾಂಶುಪಾಲೆ ಪ್ರೊ.ಧರಣೇಂದ್ರ ಕುಮಾರಿ ಹೇಳಿದರು.</p>.<p>ತಾಲ್ಲೂಕಿನ ಬುಕ್ಕಾಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಗುರುವಾರ ಪ್ಲೇಸ್ಮೆಂಟ್ ಸೆಲ್ ಮತ್ತು ಐಕ್ಯೂಎಸಿ ಸಹಯೋಗದೊಂದಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ವಿದ್ಯಾರ್ಥಿಗಳು ಕೇವಲ ಒಂದು ನಿರ್ದಿಷ್ಟ ವಿಷಯದಲ್ಲಿ ಮಾತ್ರ ತಿಳಿದುಕೊಳ್ಳದೆ ಸರ್ವತೋಮುಖ ಜ್ಞಾನಾರ್ಜನೆಗೆ ಒತ್ತು ನೀಡಬೇಕು. ಕಲಾ ಮಾಧ್ಯಮ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿ ಉದ್ಯೋಗ ಪಡೆಯಲು ಅತ್ಯುತ್ತಮ ವೇದಿಕೆಯಾಗಿದ್ದು ಇದರ ಸದುಪಯೋಗ ಪಡಿಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದರು.</p>.<p>ಪ್ಲೇಸ್ಮೆಂಟ್ ಸೆಲ್ ಸಂಚಾಲಕ ಸತೀಶ್ ಎ.ಎಂ., ಪದವಿ ನಂತರ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿವಿಧ ಶೈಕ್ಷಣಿಕ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಸಹಾಯಕ ಪ್ರಾಧ್ಯಾಪಕ ಲೋಕೇಶ್ ಎನ್., ಮಹೇಶ್ ಎನ್. ಮಾತನಾಡಿದರು.</p>.<p>ಡಾ. ಹನುಮಂತರಾಯ ಎಸ್.ಆರ್., ವಿಜಯ್ ಎನ್., ಶಾರ್ವರಿ ಎಸ್.ಕೆ., ನರೇಂದ್ರ ಬಾಬು, ನಾಗರಾಜ ರಾವ್, ಕುಮಾರ್ ಜಿ.ಸಿ., ಶ್ರೀನಿವಾಸ್ ಜಿ.ಸಿ., ಜಗದೀಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-17-718598213</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>