<p>ಚಿತ್ರದುರ್ಗ: ‘ಸಾಧನೆ ಮಾಡುವವರಿಗೆ ಬೇರೆ ಯಾವ ಆಲೋಚನೆಯೂ ಇರಬಾರದು. ವಿದ್ಯಾರ್ಥಿ ಜೀವನದಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ಸಾಗಿದರೆ ಮುಂದಿನ ಜೀವನದ ದಾರಿ ಸುಗಮವಾಗುತ್ತದೆ’ ಎಂದು ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ತಿಳಿಸಿದರು.</p>.<p>ನಗರದ ಚಂದ್ರವಳ್ಳಿಯ ಎಸ್ಜೆಎಂ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಈಚೆಗೆ ಆಯೋಜಿಸಿದ್ದ ಶೈಕ್ಷಣಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಪದವಿ ಪೂರೈಸಿದ ವಿದ್ಯಾರ್ಥಿಗಳ ಮುಂದೆ ನೂರಾರು ಆಯ್ಕೆಗಳಿರುತ್ತವೆ. ಈ ಸಂದರ್ಭದಲ್ಲಿ ನಿಮ್ಮ ಜೀವನದ ಬಂಡಿಯ ಚಾಲಕರು ನೀವೇ ಆಗಬೇಕು. ಆಗ ಮಾತ್ರ ಜೀವನ ಸರಿಯಾದ ದಿಕ್ಕಿನ ಕಡೆಗೆ ಸಾಗಿ ನಿಗದಿತ ಗುರಿ ತಲುಪಲು ಸಾಧ್ಯ’ ಎಂದರು.</p>.<p>‘ಕಾಲೇಜು, ವಿದ್ಯಾರ್ಥಿಗಳ ಜೀವನ ರೂಪಿಸುವ ಒಂದು ಕಾರ್ಖಾನೆಯಾಗಿ ಇಂದಿಗೂ ಉಳಿದುಕೊಂಡಿದೆ. ಹಾಗೆಯೇ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಭವಿಷ್ಯದ ಕುರಿತು ಯೋಚಿಸಬೇಕು. ನಿಮ್ಮ ಜೀವನಕ್ಕೆ ಮೆಟ್ಟಿಲಾಗಿರುವ ತಂದೆ ತಾಯಿಯನ್ನು ಯಾವ ಕಾರಣಕ್ಕೂ ದೂರ ಮಾಡಿಕೊಳ್ಳದೆ ಪ್ರೀತಿಯಿಂದ ನೋಡಿಕೊಳ್ಳಿ’ ಎಂದು ಕಿವಿಮಾತು ಹೇಳಿದರು.</p>.<p>‘ಅಂತಿಮ ವರ್ಷದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ತೆಗೆದು ಜೀವನ ರೂಪಿಸಿಕೊಳ್ಳಬೇಕು’ ಎಂದು ಪ್ರಾಂಶುಪಾಲ ಎಸ್.ಎಚ್. ಪಂಚಾಕ್ಷರಿ ತಿಳಿಸಿದರು.</p>.<p>ಐಕ್ಯೂಎಸಿ ಸಂಚಾಲಕ ಹರ್ಷವರ್ಧನ್, ಉಪನ್ಯಾಸಕರಾದ ಎಚ್. ಸತೀಶ್ ನಾಯಕ್, ಪ್ರೊ.ಟಿ.ಎನ್. ರಜಪೂತ್, ಎಂ.ಆರ್. ಚಿದಾನಂದಪ್ಪ, ಬಿ.ಎಂ. ಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-44-2125959902</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ‘ಸಾಧನೆ ಮಾಡುವವರಿಗೆ ಬೇರೆ ಯಾವ ಆಲೋಚನೆಯೂ ಇರಬಾರದು. ವಿದ್ಯಾರ್ಥಿ ಜೀವನದಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ಸಾಗಿದರೆ ಮುಂದಿನ ಜೀವನದ ದಾರಿ ಸುಗಮವಾಗುತ್ತದೆ’ ಎಂದು ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ತಿಳಿಸಿದರು.</p>.<p>ನಗರದ ಚಂದ್ರವಳ್ಳಿಯ ಎಸ್ಜೆಎಂ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಈಚೆಗೆ ಆಯೋಜಿಸಿದ್ದ ಶೈಕ್ಷಣಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಪದವಿ ಪೂರೈಸಿದ ವಿದ್ಯಾರ್ಥಿಗಳ ಮುಂದೆ ನೂರಾರು ಆಯ್ಕೆಗಳಿರುತ್ತವೆ. ಈ ಸಂದರ್ಭದಲ್ಲಿ ನಿಮ್ಮ ಜೀವನದ ಬಂಡಿಯ ಚಾಲಕರು ನೀವೇ ಆಗಬೇಕು. ಆಗ ಮಾತ್ರ ಜೀವನ ಸರಿಯಾದ ದಿಕ್ಕಿನ ಕಡೆಗೆ ಸಾಗಿ ನಿಗದಿತ ಗುರಿ ತಲುಪಲು ಸಾಧ್ಯ’ ಎಂದರು.</p>.<p>‘ಕಾಲೇಜು, ವಿದ್ಯಾರ್ಥಿಗಳ ಜೀವನ ರೂಪಿಸುವ ಒಂದು ಕಾರ್ಖಾನೆಯಾಗಿ ಇಂದಿಗೂ ಉಳಿದುಕೊಂಡಿದೆ. ಹಾಗೆಯೇ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಭವಿಷ್ಯದ ಕುರಿತು ಯೋಚಿಸಬೇಕು. ನಿಮ್ಮ ಜೀವನಕ್ಕೆ ಮೆಟ್ಟಿಲಾಗಿರುವ ತಂದೆ ತಾಯಿಯನ್ನು ಯಾವ ಕಾರಣಕ್ಕೂ ದೂರ ಮಾಡಿಕೊಳ್ಳದೆ ಪ್ರೀತಿಯಿಂದ ನೋಡಿಕೊಳ್ಳಿ’ ಎಂದು ಕಿವಿಮಾತು ಹೇಳಿದರು.</p>.<p>‘ಅಂತಿಮ ವರ್ಷದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ತೆಗೆದು ಜೀವನ ರೂಪಿಸಿಕೊಳ್ಳಬೇಕು’ ಎಂದು ಪ್ರಾಂಶುಪಾಲ ಎಸ್.ಎಚ್. ಪಂಚಾಕ್ಷರಿ ತಿಳಿಸಿದರು.</p>.<p>ಐಕ್ಯೂಎಸಿ ಸಂಚಾಲಕ ಹರ್ಷವರ್ಧನ್, ಉಪನ್ಯಾಸಕರಾದ ಎಚ್. ಸತೀಶ್ ನಾಯಕ್, ಪ್ರೊ.ಟಿ.ಎನ್. ರಜಪೂತ್, ಎಂ.ಆರ್. ಚಿದಾನಂದಪ್ಪ, ಬಿ.ಎಂ. ಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-44-2125959902</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>