<p>ದಾವಣಗೆರೆ: ಶಿಕ್ಷಣ ಬದುಕಿಗೆ ದಾರಿದೀಪವಾಗಬೇಕು. ಶ್ರಮಪಟ್ಟು ವ್ಯಾಸಂಗ ಮಾಡಿದಾಗ ಮಾತ್ರ ಉದ್ಯೋಗ ಗಿಟ್ಟಿಸಿಕೊಳ್ಳಲು ಸಾಧ್ಯ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಡಿ. ಕುಂಬಾರ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಭದ್ರಾ ಸ್ನಾತಕೋತ್ತರ ಕೇಂದ್ರದ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಜ್ಞಾನ ಹೆಚ್ಚಾದಷ್ಟು ಜೀವನದಲ್ಲಿ ಮುಂದೆ ಬರಲು ಸಾಧ್ಯ. ವಿದ್ಯಾವಂತ ಯುವತಿಯರು ಕಂಪನಿಗಳನ್ನು ಸ್ಥಾಪಿಸಲು ಸರ್ಕಾರ ಸಾಲ ಸೌಲಭ್ಯ ನೀಡಲಿದೆ. ವಿದ್ಯಾರ್ಥಿಗಳು ಚೆನ್ನಾಗಿ ಓದಿ ಉದ್ಯೋಗಕ್ಕೆ ಹೆಚ್ಚು ಮಹತ್ವ ನೀಡಬೇಕು. ಉದ್ಯೋಗ ನೀಡುವ ಉದ್ಯಮಿಗಳಾಗಬೇಕು’ ಎಂದು ಸಲಹೆ ನೀಡಿದರು.</p>.<p>ಕಾಲೇಜು ಅಧ್ಯಾಪಕರ ಸಂಘಗಳ ಒಕ್ಕೂಟದ ಮಾಜಿ ಅಧ್ಯಕ್ಷ ಪ್ರೊ.ಸಿ.ಎಚ್. ಮುರಿಗೇಂದ್ರಪ್ಪ, ಪ್ರಾಂಶುಪಾಲ ಪ್ರೊ.ಟಿ ಮುರುಗೇಶ್, ಎಂ.ಸಂಕೇತ್, ಕೊಟ್ರೇಶ್ ಸಿ., ಮಂಜುನಾಥ್ ಪ್ರಸಾದ್, ಸುಮಾ ಎಂ.ವಿ. ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-43-1291943754</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಶಿಕ್ಷಣ ಬದುಕಿಗೆ ದಾರಿದೀಪವಾಗಬೇಕು. ಶ್ರಮಪಟ್ಟು ವ್ಯಾಸಂಗ ಮಾಡಿದಾಗ ಮಾತ್ರ ಉದ್ಯೋಗ ಗಿಟ್ಟಿಸಿಕೊಳ್ಳಲು ಸಾಧ್ಯ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಡಿ. ಕುಂಬಾರ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಭದ್ರಾ ಸ್ನಾತಕೋತ್ತರ ಕೇಂದ್ರದ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಜ್ಞಾನ ಹೆಚ್ಚಾದಷ್ಟು ಜೀವನದಲ್ಲಿ ಮುಂದೆ ಬರಲು ಸಾಧ್ಯ. ವಿದ್ಯಾವಂತ ಯುವತಿಯರು ಕಂಪನಿಗಳನ್ನು ಸ್ಥಾಪಿಸಲು ಸರ್ಕಾರ ಸಾಲ ಸೌಲಭ್ಯ ನೀಡಲಿದೆ. ವಿದ್ಯಾರ್ಥಿಗಳು ಚೆನ್ನಾಗಿ ಓದಿ ಉದ್ಯೋಗಕ್ಕೆ ಹೆಚ್ಚು ಮಹತ್ವ ನೀಡಬೇಕು. ಉದ್ಯೋಗ ನೀಡುವ ಉದ್ಯಮಿಗಳಾಗಬೇಕು’ ಎಂದು ಸಲಹೆ ನೀಡಿದರು.</p>.<p>ಕಾಲೇಜು ಅಧ್ಯಾಪಕರ ಸಂಘಗಳ ಒಕ್ಕೂಟದ ಮಾಜಿ ಅಧ್ಯಕ್ಷ ಪ್ರೊ.ಸಿ.ಎಚ್. ಮುರಿಗೇಂದ್ರಪ್ಪ, ಪ್ರಾಂಶುಪಾಲ ಪ್ರೊ.ಟಿ ಮುರುಗೇಶ್, ಎಂ.ಸಂಕೇತ್, ಕೊಟ್ರೇಶ್ ಸಿ., ಮಂಜುನಾಥ್ ಪ್ರಸಾದ್, ಸುಮಾ ಎಂ.ವಿ. ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-43-1291943754</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>