<p>ದಾವಣಗೆರೆ: ನಗರದ ದೃಶ್ಯಕಲಾ ಕಾಲೇಜಿನ ಆವರಣದಲ್ಲಿ ಎಸ್.ಎಸ್. ಕೇರ್ ಟ್ರಸ್ಟ್ ಹಾಗೂ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಡೆಯುತ್ತಿರುವ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ‘ಸಂಕಲ್ಪ’ಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಶನಿವಾರ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.</p>.<p>ಮೇ 24ರಂದು ನಡೆಯಲಿರುವ ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆಯನ್ನು ಎದುರಿಸಲು ಅಭ್ಯರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದರು.</p>.<p>‘ಯುಪಿಎಸ್ಸಿ ಪರೀಕ್ಷೆ ಕಠಿಣ, ಸ್ಪರ್ಧಾತ್ಮಕವಾದರೂ ಯಶಸ್ಸಿನ ದಾರಿಗೆ ದೀಪವಾಗುತ್ತದೆ. ಅಂಕಗಳಿಗಿಂತ ಸಮಾಜಕ್ಕೆ ಕೊಡುಗೆ ನೀಡುವ ದೃಷ್ಟಿಕೋನವೇ ಶಾಶ್ವತ ಪ್ರೇರಣೆ’ ಎಂದು ಹೇಳಿದರು.</p>.<p>‘ಪರೀಕ್ಷಾ ಸಮಯದಲ್ಲಿ ಆತ್ಮವಿಶ್ವಾಸ, ಶಾಂತಿ ಮತ್ತು ಸಮರ್ಪಕ ಸಿದ್ಧತೆಯ ಮೇಲೆ ನಂಬಿಕೆ ಇಡುವುದು ಅತ್ಯಗತ್ಯ. ಹೆಚ್ಚಾಗಿ ಆಲೋಚಿಸದೇ ಮೊದಲ ನಿರ್ಧಾರವನ್ನು ನಂಬಿ ವಿಶ್ವಾಸದಿಂದ ಪರೀಕ್ಷೆ ಬರೆಯಿರಿ’ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-43-1897567975</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ನಗರದ ದೃಶ್ಯಕಲಾ ಕಾಲೇಜಿನ ಆವರಣದಲ್ಲಿ ಎಸ್.ಎಸ್. ಕೇರ್ ಟ್ರಸ್ಟ್ ಹಾಗೂ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಡೆಯುತ್ತಿರುವ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ‘ಸಂಕಲ್ಪ’ಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಶನಿವಾರ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.</p>.<p>ಮೇ 24ರಂದು ನಡೆಯಲಿರುವ ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆಯನ್ನು ಎದುರಿಸಲು ಅಭ್ಯರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದರು.</p>.<p>‘ಯುಪಿಎಸ್ಸಿ ಪರೀಕ್ಷೆ ಕಠಿಣ, ಸ್ಪರ್ಧಾತ್ಮಕವಾದರೂ ಯಶಸ್ಸಿನ ದಾರಿಗೆ ದೀಪವಾಗುತ್ತದೆ. ಅಂಕಗಳಿಗಿಂತ ಸಮಾಜಕ್ಕೆ ಕೊಡುಗೆ ನೀಡುವ ದೃಷ್ಟಿಕೋನವೇ ಶಾಶ್ವತ ಪ್ರೇರಣೆ’ ಎಂದು ಹೇಳಿದರು.</p>.<p>‘ಪರೀಕ್ಷಾ ಸಮಯದಲ್ಲಿ ಆತ್ಮವಿಶ್ವಾಸ, ಶಾಂತಿ ಮತ್ತು ಸಮರ್ಪಕ ಸಿದ್ಧತೆಯ ಮೇಲೆ ನಂಬಿಕೆ ಇಡುವುದು ಅತ್ಯಗತ್ಯ. ಹೆಚ್ಚಾಗಿ ಆಲೋಚಿಸದೇ ಮೊದಲ ನಿರ್ಧಾರವನ್ನು ನಂಬಿ ವಿಶ್ವಾಸದಿಂದ ಪರೀಕ್ಷೆ ಬರೆಯಿರಿ’ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-43-1897567975</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>